ಏ. 29ರಿಂದ ದೂರದರ್ಶನ-ಚಂದನದಲ್ಲಿ SSLC ವಿದ್ಯಾರ್ಥಿಗಳಿಗೆ ಪುನರ್ಮನನ ತರಗತಿ ಆರಂಭ
Team Udayavani, Apr 22, 2020, 4:50 PM IST
ಬೆಂಗಳೂರು: ಕೋವಿಡ್-19 ಲಾಕ್ ಡೌನ್ ಹಿನ್ನೆಲೆಯಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಗಳು ಮುಂದೂಡಿಕೆಯಾಗಿರುವುದರಿಂದ ಪರೀಕ್ಷೆ ಬರೆಯಲು ಆತಂಕದಿಂದ ಕಾಯುತ್ತಿರುವ ಮಕ್ಕಳಿಗೆ ದೂರದರ್ಶನದ ಚಂದನ ವಾಹಿನಿಯಲ್ಲಿ ಏ. 29ರಿಂದ ಪುನರ್ಮನನ ತರಗತಿಗಳನ್ನು ಆರಂಭಿಸಲಾಗುತ್ತಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ತಿಳಿಸಿದ್ದಾರೆ.
ಈ ತರಗತಿಗಳು ಏ.29ರಿಂದ ಪ್ರತಿ ದಿನ ಮಧ್ಯಾಹ್ನ 3ರಿಂದ 4.30ರವರೆಗೆ ನಡೆಯಲಿದ್ದು, ನುರಿತ ಶಿಕ್ಷಕರು ವಿಷಯವಾರು ಬೋಧನೆ ಮಾಡಲಿದ್ದಾರೆ. ಮೊದಲ 16 ದಿನ ಪ್ರತಿ 45 ನಿಮಿಷಗಳ ಎರಡು ಅವಧಿಗಳಲ್ಲಿ ಗಣಿತ ಹಾಗೂ ವಿಜ್ಞಾನ ವಿಷಯಗಳ ಬೋಧನಾ ತರಗತಿಗಳು ನಡೆಯಲಿದ್ದು, 17ನೇ ದಿನ ಈ ಎರಡೂ ವಿಷಯಗಳ ಮಾದರಿ ಪ್ರಶ್ನೆ ಪತ್ರಿಕೆಗಳಿಗೆ ಉತ್ತರಿಸುವ ವಿಧಾನವನ್ನು ಶಿಕ್ಷಕರು ತಿಳಿಸಿಕೊಡಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.
18ನೇ ದಿನದಿಂದ ಸಮಾಜ ವಿಜ್ಞಾನದ ತರಗತಿಗಳು 6 ದಿನಗಳ ಅವಧಿಗೆ ನಡೆಯಲಿದ್ದು, ನಂತರದ ದಿನಗಳಲ್ಲಿ ಕನ್ನಡ ಮತ್ತು ಆಂಗ್ಲ ಭಾಷಾ ವಿಷಯಗಳ ಬೋಧನೆಯನ್ನೂ ಸಹ ಮಾಡಲಾಗುತ್ತದೆ. ಪ್ರತಿ ವಿಷಯ ಬೋಧನೆಯ ಕೊನೆಯಲ್ಲಿ ವಿಶೇಷವಾಗಿ ತಯಾರಿಸಲಾಗಿರುವ ಮಾದರಿ ಪ್ರಶ್ನೆ ಪತ್ರಿಕೆಗಳನ್ನು ಉತ್ತರಿಸುವ ವಿಧಾನವನ್ನು ಹೇಳಿಕೊಡಲಾಗುತ್ತದೆ ಎಂದು ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ
ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು
MUST WATCH
ಹೊಸ ಸೇರ್ಪಡೆ
Devotion: ಭಕ್ತಿಯ ಅರ್ಥವಾದರೂ ಏನು?
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು