ಕೋವಿಡ್ ಸಂಕಷ್ಟದಲ್ಲೂ ಅನ್ನ ಭಾಗ್ಯ ಯೋಜನೆಯ ಅಕ್ಕಿ ಕಳ್ಳಸಾಗಣೆ!
Team Udayavani, Apr 7, 2020, 1:26 PM IST
ಶಿವಮೊಗ್ಗ: ದೇಶದ್ಯಾಂತ ಕೋವಿಡ್-19 ಸೋಂಕು ಹಿನ್ನಲೆಯಲ್ಲಿ ಲಾಕ್ ಡೌನ್ ಘೋಷಿಸಿರುವುದರ ನಡುವೆಯೇ ಅನ್ನಭಾಗ್ಯ ಯೋಜನೆಯ ಅಕ್ಕಿ ಕಳ್ಳ ಸಾಗಣೆ ಮಾಡುತ್ತಿದ್ದ ಜಾಲವನ್ನು ಪೊಲೀಸರುನ ಬೇಧಿಸಿದ್ದಾರೆ.
ಶಿವಮೊಗ್ಗ ಹೊರವಲಯದ ಕಲ್ಲೂರು ಮಂಡ್ಲಿಯ ಎರಡು ಕಡೆ ಆಹಾರ ಹಾಗೂ ಪೊಲೀಸ್ ಸಿಬ್ಬಂದಿ ದಾಳಿ ನಡೆಸಿ ಸುಮಾರು 300 ಕ್ಕೂ ಹೆಚ್ಚು ಚೀಲ ಅನ್ನಭಾಗ್ಯ ಅಕ್ಕಿ ವಶಪಡಿಸಿಕೊಂಡಿದ್ಧಾರೆ.
ಈ ಖದೀಮರು ಅಕ್ರಮವಾಗಿ ಅಕ್ಕಿ ಸಾಗಿಸುತ್ತಿದ್ದ ವಾಹನಗಳ ಮೇಲೆ ಅಗತ್ಯ ಸೇವೆಗಳು ಎಂದು ನಕಲಿ ಬೋರ್ಡ್ ಹಾಕಿದ್ದರು. ಈ ನಕಲಿ ಬೋರ್ಡ್ ಬಳಸಿ ಅನ್ನಭಾಗ್ಯ ಅಕ್ಕಿ ಕಳ್ಳಸಾಗಣೆ ಮಾಡುತ್ತಿದ್ದರು ಎನ್ನಲಾಗಿದೆ.
ಎರಡು ಕಡೆ ಅಕ್ರಮವಾಗಿ ಅನ್ನಭಾಗ್ಯ ಅಕ್ಕಿ ಸಂಗ್ರಹಿಸಿ ಬೇರೆ ಬೇರೆ ಬ್ರಾಂಡ್ ನಲ್ಲಿ ಅಕ್ಕಿ ಮಾರಾಟಕ್ಕೆ ಈ ಖದೀಮರು ಮುಂದಾಗಿದ್ದರು. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಆಹಾರ ಇಲಾಖೆ ಹಾಗೂ ಪೊಲೀಸ್ ಇಲಾಖೆ ಸಿಬ್ಬಂದಿ ಸುಮಾರು 300ಕ್ಕೂ ಹೆಚ್ಚು ಮೂಟೆ ಅಕ್ಕಿ ವಶಪಡಿಸಿಕೊಂಡಿದ್ದಾರೆ. ಇದರೊಂದಿಗೆ ದಾಳಿ ವೇಳೆ ಐದು ವಾಹನಗಳ ವಶಪಡಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು
BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ