ಬೆಂಗಳೂರಿಗೆ ಹೀನಾಯ ಸೋಲು: ಭರ್ಜರಿಯಾಗಿ ಗೆದ್ದ ರಾಜಸ್ಥಾನ್‌ ರಾಯಲ್ಸ್‌ಗೆ ಅಗ್ರಸ್ಥಾನ


Team Udayavani, Apr 26, 2022, 11:35 PM IST

ಬೆಂಗಳೂರಿಗೆ ಹೀನಾಯ ಸೋಲು: ಭರ್ಜರಿಯಾಗಿ ಗೆದ್ದ ರಾಜಸ್ಥಾನ್‌ ರಾಯಲ್ಸ್‌ಗೆ ಅಗ್ರಸ್ಥಾನ

ಪುಣೆ: ಮಂಗಳವಾರ ನಡೆದ ಐಪಿಎಲ್‌ ಪಂದ್ಯದಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡ ಹೀನಾಯವಾಗಿ ಸೋಲನುಭವಿಸಿದೆ.

ಇದರೊಂದಿಗೆ ಎರಡನೇ ಪಂದ್ಯ ಸೋತಂತಾಯಿತು. ಗೆದ್ದ ರಾಜಸ್ಥಾನ್‌ ರಾಯಲ್ಸ್‌ ತಂಡ ಅಗ್ರಸ್ಥಾನಕ್ಕೇರಿದೆ!

ಮೊದಲು ಬ್ಯಾಟ್‌ ಮಾಡಿದ ರಾಜಸ್ಥಾನ್‌ 20 ಓವರ್‌ಗಳಲ್ಲಿ 8 ವಿಕೆಟಿಗೆ 144 ರನ್‌ ಗಳಿಸಿತು. ಇದನ್ನು ಬೆನ್ನತ್ತಿದ ಬೆಂಗಳೂರು 19.3 ಓವರ್‌ಗಳಲ್ಲಿ 115 ರನ್‌ಗಳಿಗೆ ಆಲೌಟಾಯಿತು. ಇದು ಆರ್‌ಸಿಬಿಯ ಸತತ ಎರಡನೇ ಬ್ಯಾಟಿಂಗ್‌ ಕುಸಿತವಾಗಿದೆ.

ಕೊಹ್ಲಿ, ಪ್ಲೆಸಿಸ್‌ ಸೇರಿದಂತೆ ದಿಗ್ಗಜರೆಲ್ಲ ಈ ಪಂದ್ಯದಲ್ಲೂ ವಿಫ‌ಲರಾದರು. ಇದು ಬೆಂಗಳೂರಿನ ರನ್‌ ಬೆನ್ನತ್ತುವಿಕೆಗೆ ಭಾರೀ ಹೊಡೆತ ನೀಡಿತು. ರಾಜಸ್ಥಾನ್‌ ಪರ ಕುಲದೀಪ್‌ ಸೇನ್‌ (20ಕ್ಕೆ 4), ಆರ್‌.ಅಶ್ವಿ‌ನ್‌ (17ಕ್ಕೆ 3) ಅದ್ಭುತ ಬೌಲಿಂಗ್‌ ಸಂಘಟಿಸಿದರು.

ರಾಜಸ್ಥಾನ್‌ ಸಾಮಾನ್ಯ ಮೊತ್ತ: ಮೊದಲು ಬ್ಯಾಟಿಂಗ್‌ ರಾಜಸ್ಥಾನ್‌, ಆರ್‌ಸಿಬಿಯ ನಿಖರ ದಾಳಿಗೆ ರನ್‌ ಗಳಿಸಲು ಒದ್ದಾಡಿ, ನಾಟಕೀಯ ಕುಸಿತ ಕಂಡಿತು. ಆಗಾಗ್ಗೆ ವಿಕೆಟ್‌ ಕಳೆದುಕೊಂಡಿದ್ದರಿಂದ ರನ್‌ ವೇಗಕ್ಕೆ ಕಡಿವಾಣ ಬಿತ್ತು. ಅಂತಿಮವಾಗಿ ರಿಯಾನ್‌ ಪರಾಗ್‌ ಸಿಡಿದ ಕಾರಣ ತಂಡ 144 ರನ್‌ ಪೇರಿಸುವಂತಾಯಿತು. 31 ಎಸೆತ ಎದುರಿಸಿದ ಪರಾಗ್‌ 3 ಬೌಂಡರಿ ಮತ್ತು 4 ಸಿಕ್ಸರ್‌ ನೆರವಿನಿಂದ 56 ರನ್‌ ಗಳಿಸಿ ಅಜೇಯರಾಗಿ ಉಳಿದರು.

ರಾಜಸ್ಥಾನ್‌ ತಂಡದ ಆರಂಭ ಉತ್ತಮವಾಗಿರಲಿಲ್ಲ. ಇನಿಂಗ್ಸ್‌ ಆರಂಭಿಸಿದ ಜೋಸ್‌ ಬಟ್ಲರ್‌ ಮತ್ತು ದೇವದತ್ತ ಪಡಿಕ್ಕಲ್‌ ಈ ಬಾರಿ ಮಿಂಚಲು ವಿಫ‌ಲರಾದರು. ಒನ್‌ಡೌನ್‌ನಲ್ಲಿ ಬಂದ ಆರ್‌.ಅಶ್ವಿ‌ನ್‌ 17 ರನ್ನಿಗೆ ಔಟಾದರು. ಅದೇ ಮೊತ್ತಕ್ಕೆ ಬಟ್ಲರ್‌ ಅವರ ವಿಕೆಟನ್ನು ಹೇಝಲ್‌ವುಡ್‌ ಹಾರಿಸಿದರು. ಸತತ ಎರಡು ಪಂದ್ಯಗಳಲ್ಲಿ ಶತಕ ಸಿಡಿಸಿದ್ದ ಬಟ್ಲರ್‌ ಇಲ್ಲಿ 9 ಎಸೆತಗಳಿಂದ ಕೇವಲ 8 ರನ್‌ ಮಾಡಿದರು.

33 ರನ್ನಿಗೆ ಅಗ್ರಕ್ರಮಾಂಕದ ಮೂವರು ಆಟಗಾರರನ್ನು ಕಳೆದುಕೊಂಡ ರಾಜಸ್ಥಾನ್‌ ದೊಡ್ಡ ಸಂಕಷ್ಟಕ್ಕೆ ಬಿತ್ತು. ಆಗಲೇ ನಾಲ್ಕು ಓವರ್‌ ಮುಗಿದಿತ್ತು. ಆಬಳಿಕ ನಾಯಕ ಸಂಜು ಸ್ಯಾಮ್ಸನ್‌ ಮತ್ತು ಈ ಪಂದ್ಯಕ್ಕಾಗಿ ಸೇರ್ಪಡೆಯಾದ ಡ್ಯಾರಿಲ್‌ ಮಿಚೆಲ್‌ ತಂಡವನ್ನು ಆಧರಿಸುವ ಪ್ರಯತ್ನ ಮಾಡಿದರು. ಆರ್‌ಸಿಬಿಯ ನಿಖರ ದಾಳಿಯನ್ನು ಎಚ್ಚರಿಕೆಯಿಂದ ಎದುರಿಸಿದ ಅವರಿಬ್ಬರನ್ನು ನಿಧಾನಗತಿಯಲ್ಲಿ ತಂಡದ ಮೊತ್ತ ಏರಿಸುವ ಪ್ರಯತ್ನ ಮಾಡಿದರು. ನಾಲ್ಕನೇ ವಿಕೆಟಿಗೆ ಅವರಿಬ್ಬರು 35 ರನ್‌ ಪೇರಿಸಿ ಬೇರ್ಪಟ್ಟರು. 27 ರನ್‌ ಗಳಿಸಿದ ಸ್ಯಾಮ್ಸನ್‌ ರಿವರ್ಸ್‌ ಸ್ವೀಪ್‌ ಮಾಡುವ ಯತ್ನದ ವೇಳೆ ಕ್ಲೀನ್‌ಬೌಲ್ಡ್‌ ಆದರು. ಮಿಚೆಲ್‌ ಮತ್ತೆ ರಿಯಾನ್‌ ಪರಾಗ್‌ ಜತೆಗೂಡಿ ಐದನೇ ವಿಕೆಟಿಗೆ 31 ರನ್‌ ಜತೆಯಾಟ ನಡೆಸಿದರು. ಈ ನಡುವೆ 15ನೇ ಓವರ್‌ ಮುಗಿದಾಗ ತಂಡದ ಮೊತ್ತ 100 ರನ್‌ ತಲಪಿತ್ತು. ಬಿಗು ದಾಳಿ ಸಂಘಟಿಸಿದ ಸಿರಾಜ್‌, ಹೇಝಲ್‌ವುಡ್‌ ಮತ್ತು ಹಸರಂಗ ತಲಾ 2 ವಿಕೆಟ್‌ ಪಡೆದರು.

ಸಂಕ್ಷಿಪ್ತ ಸ್ಕೋರ್‌: ರಾಜಸ್ಥಾನ 20 ಓವರ್‌, 144/8 (ರಿಯಾನ್‌ ಪರಾಗ್‌ 56, ಜೋಶ್‌ ಹೇಝಲ್‌ವುಡ್‌ 19ಕ್ಕೆ 2, ಹಸರಂಗ 23ಕ್ಕೆ 2). ಬೆಂಗಳೂರು 19.3 ಓವರ್‌, 115 (ಪ್ಲೆಸಿಸ್‌ 23, ಕುಲದೀಪ್‌ ಸೇನ್‌ 20ಕ್ಕೆ 4, ಅಶ್ವಿ‌ನ್‌ 17ಕ್ಕೆ 3).

ಟಾಪ್ ನ್ಯೂಸ್

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

kejriwal 2

CM ‘ಅಲಂಕಾರಿಕವಲ್ಲ’: ಕೇಜ್ರಿಗೆ ಮತ್ತೆ ಕೋರ್ಟ್‌ ಗುದ್ದು

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

1-wqqwqwqeqwe

Kodava Hockey: ಚೇಂದಂಡಕ್ಕೆ 3ನೇ ಪ್ರಶಸ್ತಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.