ರಾಷ್ಟ್ರೀಯ ಹೆದ್ದಾರಿ 150 ರಲ್ಲಿ ಭೀಕರ ಅಪಘಾತ: ಮೂವರು ಸ್ಥಳದಲ್ಲೇ ಸಾವು, ಓರ್ವ ಗಂಭೀರ
Team Udayavani, Apr 20, 2022, 3:32 PM IST
ಹಟ್ಟಿಚಿನ್ನದಗಣಿ: ಸಮೀಪದ ಗೊಲಪಲ್ಲಿ ಗ್ರಾಮದ ರಾಷ್ಟ್ರೀಯ ಹೆದ್ದಾರಿ 150(ಎ) ಬಳಿ ಸ್ವಿಫ್ಟ್ ಹಾಗೂ ಇಂಡಿಕಾ ಕಾರುಗಳ ಮಧ್ಯೆ ಅಪಘಾತ ಸಂಭವಿಸಿ ಸ್ಥಳದಲ್ಲಿಯೇ ಮೂವರು ಸಾವನ್ನಪ್ಪಿದ ಘಟನೆ ಬುಧವಾರ ಮಧ್ಯಾಹ್ನ ನಡೆದಿದೆ.
ಮೃತರು ಅಮರೇಶ(30), ಗೋವಿಂದ(35), ರಾಜು(33) ಎಂದು ತಿಳಿದು ಬಂದಿದೆ.
ಬೆಂಗಳೂರಿನಿಂದ ವಡಗೇರಿಗೆ ತೆರಳುತ್ತಿದ್ದ ಇಂಡಿಕಾ ಕಾರು ಮತ್ತು ಗುಲ್ಬರ್ಗಾದಿಂದ ಲಿಂಗಸುಗೂರು ಮಾರ್ಗವಾಗಿ ತೆರಳುತ್ತಿದ್ದ ಸ್ವಿಫ್ಟ್ ಕಾರ್ ಮಧ್ಯೆ ಅಪಘಾತ ಸಂಭವಿಸಿದೆ. ಇಂಡಿಕಾ ಕಾರಿನಲ್ಲಿದ್ದ ಐವರ ಪೈಕಿ ಮೂವರು ಮೃತಪಟ್ಟಿದ್ದಾರೆ. ಇನ್ನೊಬ್ಬನ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದು ಬಂದಿದೆ.
ಘಟನಾ ಸ್ಥಳಕ್ಕೆ ಹಟ್ಟಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ :ನಿಮ್ಮನ್ನ ಚೌಕಿದಾರ ಅಂತ ಕರೆಯಬೇಕಾ? : ಪ್ರಧಾನಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ
MUST WATCH
ಹೊಸ ಸೇರ್ಪಡೆ
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…