ನೆರವಿಲ್ಲದೆ ಕಂಗಾಲಾಗಿದ್ದಾರೆ ರೋಹಿಂಗ್ಯ ನಿರಾಶ್ರಿತರು


Team Udayavani, May 16, 2020, 6:09 PM IST

ನೆರವಿಲ್ಲದೆ ಕಂಗಾಲಾಗಿದ್ದಾರೆ ರೋಹಿಂಗ್ಯ ನಿರಾಶ್ರಿತರು

ಢಾಕಾ : ಬಾಂಗ್ಲಾದೇಶದ ಕಾಕ್ಸ್‌ ಬಜಾರ್‌ನಲ್ಲಿರುವ ರೋಹಿಂಗ್ಯ ನಿರಾಶ್ರಿತರ ಬದುಕು ಕೋವಿಡ್‌ ವೈರಸ್‌ನಿಂದಾಗಿ ಅಕ್ಷರಶಃ ನರಕ ಸದೃಶವಾಗಿದೆ. ಜಗತ್ತಿನ ಅತಿ ಹೆಚ್ಚು ಜನದಟ್ಟಣೆಯಿರುವ ನಗರಗಳಿಗಿಂತಲೂ ಕಾಕ್ಸ್‌ ಬಜಾರ್‌ನಲ್ಲಿರುವ ನಿರಾಶ್ರಿತ ಶಿಬಿರಗಳಲ್ಲಿ ಜನದಟ್ಟಣೆ ಹೆಚ್ಚಿದೆ. ಮಾ.14ರಿಂದ ಇಲ್ಲಿ ಲಾಕ್‌ಡೌನ್‌ ಜಾರಿಯಲ್ಲಿದ್ದು, ಜನರು ಕನಿಷ್ಠ ಮೂಲಸೌಕರ್ಯಗಳೂ ಇಲ್ಲದೆ ಪರದಾಡುತ್ತಿದ್ದಾರೆ.

ನಿರಾಶ್ರಿತರ ಶಿಬಿರಗಳಲ್ಲಿರುವ ಇಬ್ಬರಿಗೆ ಕೋವಿಡ್‌ ಸೋಂಕು ತಗಲಿರುವುದು ಗುರುವಾರ ದೃಢಪಟ್ಟಿದೆ. ಬರೀ ಎರಡು ಪ್ರಕರಣವಾಗಿದ್ದರೂ ನಿರಾಶ್ರಿತ ಶಿಬಿರಗಳಲ್ಲಿರುವವರೆಲ್ಲ ಭಯದಿಂದ ನಡುಗ ತೊಡಗಿದ್ದಾರೆ. ಇಲ್ಲಿರುವವರ ಪರಿಸ್ಥಿತಿ ನಿಜಕ್ಕೂ ಯಾತನಾಮಯವಾಗಿದೆ ಎಂದು ವಿಶ್ವಸಂಸ್ಥೆಯ ವಲಸೆ ವಿಭಾಗ ಕೂಡ ಹೇಳಿದೆ.

ಒಂದೊಂದು ಕೋಣೆಯಲ್ಲಿ 10-12 ಮಂದಿ ವಾಸವಾಗಿದ್ದಾರೆ. ಇಂಥ ಪರಿಸ್ಥಿತಿಯಲ್ಲಿ ಅಂತರ ಕಾಪಾಡಿಕೊಳ್ಳುವುದು ಸಾಧ್ಯವಾಗದ ವಿಚಾರ. ಅಲ್ಲದೆ ಸಾಬೂನು, ಶುದ್ಧ ನೀರು ಈ ಮುಂತಾದ ಮೂಲ ಸೌಕರ್ಯಗಳ ತೀವ್ರ ಕೊರತೆಯಿದೆ. ಕುಡಿಯುವ ನೀರು ಸಂಗ್ರಹಿಸಲು ತಾಸುಗಟ್ಟಲೆ ಸರತಿ ಸಾಲಿನಲ್ಲಿ ನಿಲ್ಲಬೇಕಾಗುತ್ತದೆ. ಆಹಾರ ಹೊರಗಿನಿಂದ ಬಂದಾಗಬೇಕು. ಹೀಗಿರುವಾಗ ಸಾಮಾಜಿಕ ಅಂತರವನ್ನು ಪಾಲಿಸಲು ಅವರನ್ನು ನಿರ್ಬಂಧಿಸುವುದು ಸಾಧ್ಯವಾಗುತ್ತಿಲ್ಲ ಎಂದು ಅಧಿಕಾರಿಗಳು ಅಸಹಾಯಕತೆ ವ್ಯಕ್ತಪಡಿಸುತ್ತಿದ್ದಾರೆ.

ರೋಹಿಂಗ್ಯಗಳಲ್ಲಿ ರೋಗ ನಿರೋಧಕ ಶಕ್ತಿ ಕಡಿಮೆಯಿರುವುದು ಕಳವಳವನ್ನು ಹೆಚ್ಚಿಸಿರುವ ಇನ್ನೊಂದು ಅಂಶ. ಅಲೆಮಾರಿ ಬದುಕು ಸಾಗಿಸುತ್ತಿರುವ ಕಾರಣ ಅವರಿಗೆ ಲಸಿಕೆ ಕಾರ್ಯಕ್ರಮಗಳು ತಲುಪುತ್ತಿಲ್ಲ.

ಬಾಂಗ್ಲಾದೇಶದಲ್ಲಿ ಕೋವಿಡ್‌ ಸೋಂಕಿನ ಪ್ರಕರಣಗಳು ಕ್ಷಿಪ್ರವಾಗಿ ಹೆಚ್ಚುತ್ತಿರುವುದು ಕೂಡ ರೋಹಿಂಗ್ಯ ಕ್ಯಾಂಪ್‌ಗ್ಳಲ್ಲಿ ಭೀತಿಯ ಅಲೆಯೆಬ್ಬಿಸಿದೆ.

2,000 ವೆಂಟಿಲೇಟರ್‌ಗಳ
ದೇಶದಲ್ಲಿ ಒಟ್ಟಾರೆಯಾಗಿ ಇರುವುದು 2,000 ವೆಂಟಿಲೇಟರ್‌ಗಳು. ರೋಹಿಂಗ್ಯ ಕ್ಯಾಂಪ್‌ಗ್ಳಲ್ಲಿ ಎಲ್ಲಿಯಾದರೂ ಕೋವಿಡ್‌ ಹರಡಲು ತೊಡಗಿದರೆ ಬಾಂಗ್ಲಾದೇಶದ ವೈದ್ಯಕೀಯ ಸೌಲಭ್ಯಗಳು ಯಾವ ಮೂಲೆಗೂ ಸಾಲದು. ಐಸಿಯು ಸೌಲಭ್ಯಗಳೂ ಸಾಕಷ್ಟಿಲ್ಲ. ಹೀಗಾಗಿ ಕ್ಯಾಂಪ್‌ಗ್ಳನ್ನು ಸುರಕ್ಷಿತವಾಗಿಡಲು ದೇವರನ್ನು ಪ್ರಾರ್ಥಿಸುವುದೆಂದೇ ನಮ್ಮ ಮುಂದಿರುವ ಮಾರ್ಗ ಎಂದು ಮಾರ್ಮಿಕವಾಗಿ ಹೇಳುತ್ತಾರೆ ಸೇವ್‌ ದ ಚಿಲ್ಡ್ರನ್ಸ್‌ ಹೆಲ್ತ್‌ನ ನಿರ್ದೇಶಕಿ ಡಾ| ಶಮೀಮ್‌ ಜಹಾನ್‌.

ವೈರಸ್‌ ‌ ಜಗತ್ತಿನ ಅತಿ ದೊಡ್ಡ ನಿರಾಶ್ರಿತ ಶಿಬಿರಗಳಲ್ಲಿ ಒಂದಾಗಿರುವ ಕಾಕ್ಸ್‌ ಬಜಾರ್‌ಗೆ ಪ್ರವೇಶಿಸಿದೆ. ಸಾವಿರಾರು ಮಂದಿ ವೈರಸ್‌ಗೆ ಬಲಿಯಾಗುವ ಅಪಾಯ ಗೋಚರಿಸುತ್ತಿದೆ. ಹೀಗಾದರೆ ಬಾಂಗ್ಲಾದೇಶ ದಶಕಗಳಷ್ಟು ಹಿಂದಕ್ಕೆ ಹೋಗಲಿದೆ ಎಂದಿದ್ದಾರೆ ಡಾ| ಶಮೀಮ್‌.

ಇಂಟರ್‌ನೆಟ್‌ ಇಲ್ಲ
ಸುಳ್ಳು ಸಂದೇಶಗಳನ್ನು ಹರಡುವುದನ್ನು ತಡೆಯುವ ಸಲುವಾಗಿ ಬಾಂಗ್ಲಾ ಸರಕಾರ ನಿರಾಶ್ರಿತರ ಶಿಬಿರಗಳಲ್ಲಿ ಇಂಟರ್‌ನೆಟ್‌ ನಿಷೇಧಿಸಿದೆ. ಆದರೆ ಕೋವಿಡ್‌ ಹಾವಳಿ ಸಂದರ್ಭದಲ್ಲಿ ಇದರಿಂದ ಬಹಳ ಸಮಸ್ಯೆ ಎದುರಾಗಿದೆ. ಜನರಿಗೆ ವೈರಸ್‌ನ ಅಪಾಯದ ಕುರಿತು ನೈಜ ಮಾಹಿತಿಯನ್ನು ನೀಡಲು ಸಾಧ್ಯವಾಗುತ್ತಿಲ್ಲ. ಆರೋಗ್ಯ ರಕ್ಷಣೆಗೆ ವಹಿಸಿಕೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳನ್ನು ತಿಳಿದುಕೊಳ್ಳಲು ಜನರಿಗೆ ಆಗುತ್ತಿಲ್ಲ. ಕೋವಿಡ್‌ಗೆ ಹೆದರಿ ನಿರಾಶ್ರಿತರಿಗಾಗಿ ದುಡಿಯುತ್ತಿರುವ ಸ್ವಯಂ ಸೇವಕರು ಅಲ್ಲಿಂದ ಕಾಲ್ಕಿತ್ತಿದ್ದಾರೆ. ಹೀಗೆ ಸಮಸ್ಯೆಗಳ ಮೇಲೆ ಸಮಸ್ಯೆಗಳು ಎರಗಿರುವುದರಿಂದ ರೋಹಿಂಗ್ಯಗಳು ಕಂಗಾಲಾಗಿದ್ದಾರೆ.

ಟಾಪ್ ನ್ಯೂಸ್

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ

Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ

America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್‌ ಬೈಬಲ್‌ ಮಾರಾಟ!

America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್‌ ಬೈಬಲ್‌ ಮಾರಾಟ!

1—weqe

Baltimore bridge collapse; ಆರು ಕಾರ್ಮಿಕರು ನಾಪತ್ತೆ: ಪತ್ತೆ ಕಾರ್ಯ ಸ್ಥಗಿತ

LGBTQ Couple anjali chakra sufi malik broke their marriage

Anjali Chakra – Sufi Malik; ಮದುವೆಗೂ ಮುನ್ನ ಭಾರತ-ಪಾಕ್‌ ಸಲಿಂಗಿ ಜೋಡಿ ಬ್ರೇಕಪ್‌!

ವಿಯೆಟ್ನಾಂನಲ್ಲಿ ಹಕ್ಕಿಜ್ವರಕ್ಕೆ ಮೊದಲ ಬಲಿ!

H5N1: ವಿಯೆಟ್ನಾಂನಲ್ಲಿ ಹಕ್ಕಿಜ್ವರಕ್ಕೆ ಮೊದಲ ಬಲಿ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.