ಐಎಂಎ ವಂಚನೆ ಪ್ರಕರಣ: ರೋಷನ್ ಬೇಗ್ ಮತ್ತೆ ವಿಚಾರಣೆಗೆ ಗೈರು
Team Udayavani, Aug 13, 2019, 11:17 PM IST
ಬೆಂಗಳೂರು: ಬಹುಕೋಟಿ ಐಎಂಎ ವಂಚನೆ ಪ್ರಕರಣ ಸಂಬಂಧ ಅನರ್ಹಗೊಂಡಿರುವ ಶಾಸಕ ಆರ್.ರೋಷನ್ ಬೇಗ್ ಮಂಗಳವಾರ ಮತ್ತೂಮ್ಮೆ ವಿಚಾರಣೆಗೆ ಗೈರಾಗಿದ್ದು, ಈ ಮೂಲಕ ಐದು ಬಾರಿ ಎಸ್ಐಟಿ ನೀಡಿದ್ದ ನೋಟಿಸ್ಗೆ ಇಲ್ಲದ ಸಬೂಬುಗಳನ್ನು ಹೇಳುತ್ತ ವಿಚಾರಣೆಯಿಂದ ತಪ್ಪಿಸಿಕೊಳ್ಳುತ್ತಿದ್ದಾರೆ.
ಪ್ರಕರಣ ಸಂಬಂಧ ಎಸ್ಐಟಿ ಜುಲೈ 31ರಂದು ನೋಟಿಸ್ ಜಾರಿ ಆ.13ರಂದು ಹಾಜರಾಗುವಂತೆ ಸೂಚಿಸಿತ್ತು. ಆದರೆ, ರೋಷನ್ ಬೇಗ್ ಯಾವುದೇ ಕಾರಣ ನೀಡದೆ ಗೈರಾಗಿದ್ದಾರೆ. ಹೀಗಾಗಿ ಮುಂದಿನ ದಿನಾಂಕವನ್ನು ಸದ್ಯದಲ್ಲೇ ನಿಗದಿ ಪಡಿಸಲಾಗುವುದು ಎಂದು ಎಸ್ಐಟಿ ತಿಳಿಸಿದೆ.
ರೋಷನ್ ಬೇಗ್ ಅವರಿಗೆ 400 ಕೋಟಿ ರೂ. ಕೊಟ್ಟಿರುವುದಾಗಿ ಪ್ರಕರಣದ ಪ್ರಮುಖ ಆರೋಪಿ ಮನ್ಸೂರ್ ಖಾನ್ ತಾನೇ ಬಿಡುಗಡೆ ಮಾಡಿದ ಆಡಿಯೋ ಮತ್ತು ವಿಡಿಯೋಗಳಲ್ಲಿ ಆರೋಪಿಸಿದ್ದ. ಈ ಸಂಬಂಧ ಎಸ್ಐಟಿ ಜುಲೈ 9ರಂದು ಮೊದಲ ಬಾರಿಗೆ ನೋಟಿಸ್ ಕೊಟ್ಟು, ಜುಲೈ 11ರಂದು ವಿಚಾರಣೆಗೆ ಹಾಜರಾಗಲು ಸೂಚಿಸಿತ್ತು. ಆದರೆ, ಅನಾರೋಗ್ಯ ಸಮಸ್ಯೆ, ಹಜ್ ಯಾತ್ರೆ ನೆಪವೊಡ್ಡಿ ಗೈರಾಗಿದ್ದರು. ಆಬಳಿಕ ನಾಲ್ಕು ಬಾರಿ ನೋಟಿಸ್ ಕೊಟ್ಟರೂ ಯಾವುದೋ ಕಾರಣ ನೀಡಿ ತಪ್ಪಿಸಿಕೊಂಡಿದ್ದರು. ಈ ಸಂಬಂಧ ಐದನೇ ಬಾರಿಗೆ ನೋಟಿಸ್ ಜಾರಿ ಮಾಡಿ ಆ.13ರಕ್ಕೆ ನಿಗದಿ ಮಾಡಿತ್ತು. ಆದರೆ, ಯಾವುದೇ ಕಾರಣ ನೀಡದೆ ಗೈರಾಗಿದ್ದಾರೆ ಎಂದು ಎಸ್ಐಟಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
MUST WATCH
ಹೊಸ ಸೇರ್ಪಡೆ
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್