ದೇವಾಲಯಗಳ ಅಭಿವೃದ್ಧಿಗೆ 291.87 ಕೋಟಿ ರೂ.: ಶ್ರೀನಿವಾಸ ಪೂಜಾರಿ
Team Udayavani, Mar 16, 2020, 8:00 PM IST
ವಿಧಾನಸಭೆ: ರಾಜ್ಯದಲ್ಲಿ ಕಳೆದ ಮೂರು ವರ್ಷಗಳಲ್ಲಿ ಮುಜರಾಯಿ ಮತ್ತು ಆರಾಧನಾ ದೇವಸ್ಥಾನಗಳ ಅಭಿವೃದ್ಧಿಗೆ 291.87 ಕೋಟಿ ರೂ. ಬಿಡುಗಡೆ ಮಾಡಲಾಗಿದೆ ಎಂದು ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿಯ ರಾಜಕುಮಾರ್ ಪಾಟೀಲ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ದೇವಾಲಯಗಳ ಅಭಿವೃದ್ಧಿಗೆ ಸಂಬಂಧಿಸಿದಂತೆ ಒಂದು ಕೋಟಿ ರೂ.ವರೆಗಿನ ಪ್ರಸ್ತಾವನೆಗೆ ಜಿಲ್ಲಾಧಿಕಾರಿಗಳ ಮಟ್ಟದಲ್ಲೇ ಅನುಮತಿ ದೊರೆಯಲಿದೆ. ಆದಕ್ಕಿಂತ ಹೆಚ್ಚಿನ ಮೊತ್ತ ಇದ್ದರೆ ಮಾತ್ರ ಆಯುಕ್ತರ ಹಂತಕ್ಕೆ ಬರಲಿದೆ ಎಂದು ತಿಳಿಸಿದರು.
ಇದಕ್ಕೂ ಮುನ್ನ ಮಾತನಾಡಿದ ರಾಜಕುಮಾರ್ ಪಾಟೀಲ್, ಕೋಟ್ಯಂತರ ರೂ. ಮುಜರಾಯಿ ಇಲಾಖೆಯಲ್ಲಿ ಇದ್ದರೂ ದೇವಾಲಯಗಳ ಅಭಿವೃದ್ಧಿಗೆ ಹಣ ಬಿಡುಗಡೆ ಮಾಡುತ್ತಿಲ್ಲ ಎಂದು ದೂರಿದರು.
ಕ್ರಮ
ಬಿಜೆಪಿಯ ಲಾಲಾಜಿ ಆರ್. ಮೆಂಡನ್ ಅವರ ಪ್ರತ್ಯೇಕ ಪ್ರಶ್ನೆಗೆ ಉತ್ತರಿಸಿದ ಸಚಿವ ಕೋಟ ಶ್ರೀನಿವಾಸಪೂಜಾರಿ, ಮೀನುಗಾರಿಕೆ ಇಲಾಖೆಯಡಿ ಅನುಷ್ಠಾನಗೊಳಿಸುತ್ತಿರುವ ಮತ್ಸಾéಶ್ರಯ ವಸತಿ ಯೋಜನೆ 2017-18 ನೇ ಸಾಲಿನಿಂದ ರಾಜೀವ್ ಗಾಂಧಿ ವಸತಿ ನಿಗದಮ ಮೂಲಕ ಅನುಷ್ಟಾನ ಮಾಡಲಾಗುತ್ತಿದ್ದು ಕೆಲವೊಂದು ತಾಂತ್ರಿಕ ಕಾರಣಳಿಂದ ಅನುಷ್ಟಾನದಲ್ಲಿ ವಿಳಂಬವಾಗಿರುತ್ತದೆ. ಹೀಗಾಗಿ, ಯೋಜನೆಯನ್ನು ರಾಜೀವ್ಗಾಂಧಿ ವಸತಿ ನಿಗಮದಿಂದ ವಾಪಸ್ ಪಡೆದು ಹಿಂದೆ ಇದ್ದಂತೆ ಕರ್ನಾಟಕ ಮೀನುಗಾರಿಕೆ ಅಭವೃದ್ಧಿ ನಿಗಮಕ್ಕೆ ವಹಿಸುವ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
Narayan Gowda: ಹೆಚ್ಚಿನ ಮತಗಳಿಂದ ಎಚ್ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ
MUST WATCH
ಹೊಸ ಸೇರ್ಪಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Bike thief: ಬಜಪೆ ಪೊಲೀಸರಿಂದ ಅಂತರ್ ಜಿಲ್ಲಾ ಬೈಕ್ ಕಳ್ಳನ ಬಂಧನ
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್