ಮೇಘಸ್ಫೋಟಕ್ಕೆ ಕೊಚ್ಚಿಹೋದ ಬದುಕು-ಜನಜೀವನ ಅಸ್ತವ್ಯಸ್ತ; ಹಿಮಾಚಲಕ್ಕಾದ ನಷ್ಟ 4 ಸಾವಿರ ಕೋಟಿ
ಸುಮಾರು 20,000ಕ್ಕೂ ಅಧಿಕ ಜನರನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ.
Team Udayavani, Jul 12, 2023, 3:40 PM IST
ನವದೆಹಲಿ: ಹಿಮಾಚಲ ಪ್ರದೇಶದಲ್ಲಿ ಧಾರಾಕಾರ ಮಳೆಯ ಪರಿಣಾಮ ಹಿಮಾಚಲ ಪ್ರದೇಶದಲ್ಲಿ ಭಾರೀ ಪ್ರಮಾಣದ ಭೂ ಕುಸಿತ, ವಿದ್ಯುತ್ ಅವ್ಯವಸ್ಥೆ, ರಸ್ತೆ ಬಂದ್, ಸೇತುವೆ ಹಾನಿ ಸೇರಿದಂತೆ ದೊಡ್ಡ ಮಟ್ಟದ ವಿನಾಶಕ್ಕೆ ಕಾರಣವಾಗಿದೆ. ಹಲವಾರು ಪ್ರವಾಸಿಗರು ಅತಂತ್ರ ಸ್ಥಿತಿಗೆ ಸಿಲುಕಿದ್ದು, ಈವರೆಗೆ ಸಾವನ್ನಪ್ಪಿರವವರ ಸಂಖ್ಯೆ 80ಕ್ಕೆ ಏರಿಕೆಯಾಗಿದೆ ಎಂದು ವರದಿ ತಿಳಿಸಿದೆ.
ಇದನ್ನೂ ಓದಿ:Congress ಸರ್ಕಾರ ಅಧಿಕಾರಕ್ಕೆ ಬಂದ ಎರಡೇ ತಿಂಗಳಲ್ಲಿ ಜಂಗಲ್ ರಾಜ್ಯ ಸೃಷ್ಟಿ: ಬೊಮ್ಮಾಯಿ
ಮೇಘಸ್ಫೋಟದಿಂದಾಗಿ ನೂರಾರು ಮನೆಗಳು, ಮರಗಳು, ಸೇತುವೆಗಳು ಕೊಚ್ಚಿಕೊಂಡು ಹೋಗಿದ್ದು, ಅಂದಾಜು 3ಸಾವಿರದಿಂದ 4 ಸಾವಿರ ಕೋಟಿ ರೂಪಾಯಿಯವರೆಗೆ ನಷ್ಟ ಸಂಭವಿಸಿದೆ ಎಂದು ವರದಿ ವಿವರಿಸಿದೆ.
ಹಿಮಾಚಲ ಪ್ರದೇಶ ವಿಪತ್ತು ನಿರ್ವಹಣಾ ಇಲಾಖೆಯ ಮಾಹಿತಿ ಪ್ರಕಾರ, ಮಳೆ ಮತ್ತು ಪ್ರವಾಹದಲ್ಲಿ 80ಕ್ಕೂ ಅಧಿಕ ಮಂದಿ ಜೀವ ಕಳೆದುಕೊಂಡಿದ್ದಾರೆ. ಧಾರಾಕಾರ ಮಳೆಯಿಂದಾಗಿ ಭೂಕುಸಿತ ಸಂಭವಿಸಿದ್ದರಿಂದ ಚಂಡೀಗಢ್-ಮನಾಲಿ ಮತ್ತು ಶಿಮ್ಲಾ-ಕಲ್ಕಾ ಹೆದ್ದಾರಿ ಸೇರಿದಂತೆ 1,300ಕ್ಕೂ ಅಧಿಕ ರಸ್ತೆಗಳು ಬಂದ್ ಆಗಿದೆ. ಕಳೆದ ರಾತ್ರಿ ಮನಾಲಿಯಿಂದ ಮಾಂಡಿವರೆಗೆ ಏಕಮುಖ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟಿದ್ದು, ಇದರಿಂದಾಗಿ ರಾತ್ರಿ-ಹಗಲು ಒಂದು ಸಾವಿರಕ್ಕೂ ಅಧಿಕ ಪ್ರವಾಸಿ ವಾಹನಗಳು ತೆರಳಿರುವುದಾಗಿ ವರದಿ ತಿಳಿಸಿದೆ.
ವರ್ಷಧಾರೆಯಿಂದಾಗಿ 40 ಸೇತುವೆಗಳು ಹಾನಿಗೊಂಡಿವೆ. ರಾಜ್ಯಾದ್ಯಂತ ಜುಲೈ 15ರವರೆಗೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಪ್ರವಾಹ ಪೀಡಿತ ಪ್ರದೇಶದಿಂದ ಸುಮಾರು 20,000ಕ್ಕೂ ಅಧಿಕ ಜನರನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ.
ಪ್ರವಾಹ ಮತ್ತು ಭೂಕುಸಿತಗೊಂಡ ಪ್ರದೇಶಕ್ಕೆ ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ಅವರು ಸ್ಥಳಕ್ಕೆ ಭೇಟಿ ನೀಡಿದ್ದರು.
ಸತತ ನಾಲ್ಕು ದಿನಗಳ ಕಾಲದ ಮಳೆಯಿಂದಾಗಿ ಉತ್ತರ ಭಾರತದಾದ್ಯಂತ ವಿನಾಶ ಸಂಭವಿಸಿದೆ. ದೇಶದ 23 ರಾಜ್ಯಗಳಲ್ಲಿ ಭಾರೀ ಪ್ರಮಾಣದ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಭವಿಷ್ಯ ನುಡಿದಿದೆ. ಪಶ್ಚಿಮಬಂಗಾಳ, ಸಿಕ್ಕಿಂ, ಅರುಣಾಚಲ ಪ್ರದೇಶ, ಅಸ್ಸಾಂ, ಉತ್ತರಾಖಂಡ್ ಮತ್ತು ಮೇಘಾಲಯದಲ್ಲಿ ಭಾರೀ ಮೇಘಸ್ಫೋಟ ಸಂಭವಿಸಲಿದೆ ಎಂದು ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ