ರೂಪಾ-ರೋಹಿಣಿಗೆ ಪ್ರಧಾನಿ ಕಚೇರಿ ತರಾಟೆ: ನಿಜನಾ?; ಮೇಲ್ಮನೆಯಲ್ಲಿ ಪ್ರತಿಧ್ವನಿ
ವಿಷಯ ಪ್ರಸ್ತಾಪಕ್ಕೆ ಸಂಬಂಧಿಸಿದಂತೆ ನೋಟಿಸ್ ಕೊಡಿ
Team Udayavani, Feb 22, 2023, 10:36 AM IST
ವಿಧಾನ ಪರಿಷತ್ತು: ಐಎಎಸ್ ಮತ್ತು ಐಪಿಎಸ್ ಮಹಿಳಾ ಅಧಿಕಾರಿಗಳಿಬ್ಬರ ನಡುವಿನ ಕಿತ್ತಾಟವು ಮಂಗಳವಾರ ಮೇಲ್ಮನೆಯಲ್ಲೂ ಪ್ರತಿಧ್ವನಿಸಿತು. ಮಂಗಳವಾರ ವಿಷಯ ಪ್ರಸ್ತಾಪಿಸಿದ ಪ್ರತಿಪಕ್ಷದ ಮುಖ್ಯ ಸಚೇತಕ ಪ್ರಕಾಶ ರಾಠೊಡ, “ಇಬ್ಬರು ಮಹಿಳಾ ಅಧಿಕಾರಿಗಳ ನಡುವಿನ ಕಿತ್ತಾಟದ ಬಗ್ಗೆ ಪ್ರಧಾನಿ ಕಚೇರಿ ಯಿಂದಲೇ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲಾಗಿದೆ ಎಂದು ಕೇಳಿ ಬರುತ್ತಿದೆ.
ಈ ಬಗ್ಗೆ ಸರ್ಕಾರದ ಸ್ಪಷ್ಟೀಕರಣ ಏನು’ ಎಂದು ಕೇಳಿದರು. ಅಷ್ಟೇ ಅಲ್ಲ, ಪ್ರಧಾನಿ ಕಚೇರಿಯಿಂದ ತರಾಟೆಗೆ ತೆಗೆದುಕೊಂಡಿರುವ ಬಗ್ಗೆ ವರದಿಯೊಂದನ್ನು ಪ್ರದರ್ಶಿಸಿದರು.
ಇದಕ್ಕೆ ಸ್ಪಷ್ಟನೆ ನೀಡಿದ ಸಚಿವ ಜೆ.ಸಿ. ಮಾಧುಸ್ವಾಮಿ, “ಪ್ರತಿಪಕ್ಷದ ಮುಖ್ಯ ಸಚೇತಕರು ನೇರವಾಗಿ ಪ್ರಧಾನಿ ಕಚೇರಿಯೊಂದಿಗೇ ನೇರ ಸಂಪರ್ಕ ಇದ್ದಂತಿದೆ. ಆದರೆ, ನಮಗೆ ಇದರ ಬಗ್ಗೆ ಮಾಹಿತಿ ಇಲ್ಲ. ಅಷ್ಟಕ್ಕೂ ಹೀಗೆ ತರಾಟೆ ತೆಗೆದುಕೊಂಡ ಬಗ್ಗೆ ಅಧಿಕೃತ ದಾಖಲೆಗಳೂ ಇಲ್ಲ’ ಎಂದು ಹೇಳಿದರು.
ಬೆನ್ನಲ್ಲೇ ಬಿಜೆಪಿಯ ಎಚ್. ವಿಶ್ವನಾಥ ಮಾತನಾಡಿ, “ಐಎಎಸ್- ಐಪಿಎಸ್ ಅಧಿಕಾರಿಗಳ ಗಲಾಟೆ ಒಂದು ರೀತಿ ಆಡಳಿತ ವ್ಯವಸ್ಥೆಗೆ ಅವಮಾನ ಮತ್ತು ಮುಜುಗರ ಉಂಟುಮಾಡುವಂತಿದೆ. ಇದು ರಾಜ್ಯದ ಅಭಿವೃದ್ಧಿ ಮೇಲೆ ಪರಿಣಾಮ ಬೀರಲಿದೆ. ವಿಚಿತ್ರವೆಂದರೆ ಈ ಇಬ್ಬರೂ ಅಧಿಕಾರಿಗಳ ಅಭಿಮಾನಿಗಳ ಸಂಘಗಳು ಕೂಡ ಹುಟ್ಟಿಕೊಂಡಿವೆ. ಇವರೇನೂ ರಾಜಕಾರಣಿಗಳಾ? ಈ ಬಗ್ಗೆ ಚರ್ಚೆಗೆ ಅವಕಾಶ ಮಾಡಿಕೊಡಬೇಕು’ ಎಂದು ಮನವಿ ಮಾಡಿದರು.
ಆಗ ಪ್ರತಿಕ್ರಿಯಿಸಿದ ಸಭಾಪತಿ ಬಸವರಾಜ ಹೊರಟ್ಟಿ, “ವಿಷಯ ಪ್ರಸ್ತಾಪಕ್ಕೆ ಸಂಬಂಧಿಸಿದಂತೆ ನೋಟಿಸ್ ಕೊಡಿ. ನಂತರ ಚರ್ಚೆಗೆ ಅವಕಾಶ ನೀಡಲಾಗುವುದು’
ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
MUST WATCH
ಹೊಸ ಸೇರ್ಪಡೆ
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ