ಒಂದು ಪೈಸೆಯೂ ಪಡೆದಿಲ್ಲ; ಧರ್ಮಸ್ಥಳದಲ್ಲಿ ಮುದ್ದಹನುಮೇಗೌಡ

ನಾನು ಪ್ರಾಮಾಣಿಕವಾಗಿ ಇದ್ದೇನೆ ಎಂದು ಹೇಳಿಕೊಳ್ಳಲು ಇದ್ದ ಮಾರ್ಗ ಇದೊಂದೆ

Team Udayavani, May 2, 2019, 12:54 PM IST

2-sdff

ಬೆಳ್ತಂಗಡಿ: ತುಮಕೂರು ಲೋಕಸಭಾ ಕಣದಿಂದ ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಸಲ್ಲಿಸಿದ್ದ ನಾಮಪತ್ರ ವಾಪಸ್‌ ಪಡೆಯಲು ಮತ್ತು ಮೈತ್ರಿ ಅಭ್ಯರ್ಥಿ ಎಚ್‌.ಡಿ.ದೇವೇಗೌಡ ಅವರ ಪರ ಪ್ರಚಾರ ನಡೆಸಲು ಒಂದು ನಯಾ ಪೈಸೆಯನ್ನೂ ಪಡೆದಿಲ್ಲ ಎಂದು ಕಾಂಗ್ರೆಸ್‌ ಸಂಸದ ಮುದ್ದುಹನುಮೇಗೌಡ ಅವರು ಧರ್ಮಸ್ಥಳ ಮಂಜುನಾಥ ಸ್ವಾಮಿಯ ಸನ್ನಿಧಿಯಲ್ಲಿ ಹೇಳಿಕೆ ನೀಡಿದ್ದಾರೆ.

ಗುರುವಾರ ಬೆಳಗ್ಗೆ ಮಂಜುನಾಥ ಸ್ವಾಮಿಯ ದರ್ಶನ ಪಡೆದು ಹೊರ ಬಂದ ಬಳಿಕ ಬೆಂಬಲಿಗರೊಂದಿಗೆ ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದ ಮುದ್ದುಹನುಮೇಗೌಡ , ನನ್ನ ಸ್ಥಾನ ಮೈತ್ರಿಗೆ ತ್ಯಾಗ ಮಾಡಿದ್ದರಿಂದ ನಾನು ನಾಮಪತ್ರ ಹಾಕಿದ್ದೆ.ಕ್ರಿಯಾಶೀಲನಾಗಿ ಕೆಲಸ ಮಾಡಿದರೂ ನನಗೆ ಅವಕಾಶ ಸಿಗಲಿಲ್ಲ. ಹೀಗಾಗಿ ನಾನು ಪುನಃ ಅವಕಾಶ ಬಯಸಿ ನಾಮಪತ್ರ ಸಲ್ಲಿಸಿದ್ದೆ ಎಂದರು.

ರಾಹುಲ್‌ ಗಾಂಧಿ, ವೇಣುಗೋಪಾಲ್‌, ಸಿದ್ದರಾಮಯ್ಯ, ಜಿ.ಪರಮೇಶ್ವರ್‌ ಮತ್ತು ದಿನೇಶ್‌ಗುಂಡೂರಾವ್‌ ಎಲ್ಲರೂ ಕೂಡ ಮೈತ್ರಿ ಅನಿವಾರ್ಯತೆ ಬಗ್ಗೆ, ಸ್ಥಾನ ಬಿಟ್ಟುಕೊಡುವ ಬಗ್ಗೆ , ರಾಷ್ಟ್ರ ಮತ್ತು ರಾಜ್ಯದ ಹಿತದ ಹಿನ್ನಲೆಯಲ್ಲಿ ತ್ಯಾಗ ಮಾಡಬೇಕೆಂದು ಮನವರಿಕೆ ಮಾಡಿದ ಹಿನ್ನಲೆಯಲ್ಲಿ ತ್ಯಾಗ ಮಾಡಿ , ಪ್ರಚಾರದಲ್ಲೂ ಭಾಗಿಯಾಗಿದ್ದೇನೆ.

ಚುನಾವಣೆ ಮುಗಿದ ಬಳಿಕ ಸಮಾಜದಲ್ಲಿ ಯಾವುದೇ ಮಾನ್ಯತೆ ಇಲ್ಲದ ಇಬ್ಬರು ವ್ಯಕ್ತಿಗಳ ನಡುವೆ ಸಂಭಾಷಣೆ ನಡೆಯುತ್ತದೆ. ಮೂರನೇ ವ್ಯಕ್ತಿಗಳು ಮಾತನಾಡಿದ್ದಕ್ಕೆ ಸಾಮಾಜಿಕ ತಾಣಗಳು ಮತ್ತು ಮಾಧ್ಯಮಗಳಲ್ಲಿ ಹೆಚ್ಚು ಪ್ರಾಮುಖ್ಯ ನೀಡಲಾಯಿತು. ಕೋಟಿ ಕೋಟಿ ಹಣದ ಡೀಲ್‌ ಆಗಿದೆ ಎನ್ನುವ ತಪ್ಪು ಸಂದೇಶ ರಾಜ್ಯದ ಜನತೆಗೆ ಹೊರಟು ಹೋಯಿತು.

ನನ್ನ ರಾಜಕೀಯ ಬೆಳವಣಿಗೆ ಸಹಿಸದೆ, ವಿಚಿದ್ರ ಮತ್ತು ವಿಕೃತ ಮನಸ್ಥಿತಿ ಇದ್ದವರು ಇದನ್ನು ಮಾಡಿದ್ದಾರೆ. ಅಂಥಹವರಿಗೆ ಭಗವಂತ ಒಳ್ಳೆಯ ಮನಸ್ಸು ಕೊಡಲಿ ಎಂದರು.

ಇದನ್ನು ನಾನು ಸ್ಪಷ್ಟ ಪಡಿಸಲೇ ಬೇಕಿತ್ತು. ಇವತ್ತು ರಾಜ್ಯದ ಜನ , ಪ್ರಪಂಚಾದ್ಯಂತ ನಂಬಿಕೆ ಇರುವ ಸ್ಥಾನದಲ್ಲಿ ನನ್ನ ಅಭಿಪ್ರಾಯವನ್ನು ಹಂಚಿಕೊಳ್ಳಬೇಕು ಎಂದು ಧರ್ಮಸ್ಥಳ ಆಯ್ದುಕೊಂಡೆ.

ನನ್ನ ರಾಜಕೀಯವನ್ನು ಮೊದಲಿನಿಂದಲೂ ನೋಡಿಕೊಂಡು ಬಂದವರಿಗೆ , ವಿಶ್ವಾಸವಿಟ್ಟುಕೊಂಡವರಿಗೆ ಅನುಮಾನದ ಛಾಯೆ ಬಂದು ನನ್ನನ್ನು ಅನುಮಾನದ ದೃಷ್ಟಿಯಿಂದ ನೋಡುವುದು ನಿಲ್ಲಬೇಕು ಎಂದು ಸ್ವಾಮಿಯ ಸನ್ನಿಧಾನದಲ್ಲಿ ನಿಂತಿದ್ದೇನೆ.

ದೇವರ ದರ್ಶನ ಮಾಡಿ ಬಂದಿದ್ದೇನೆ, ನಾಮಪತ್ರ ವಾಪಾಸ್‌ ಪಡೆಯಲಿಕ್ಕೆ ಅಥವಾ ಚುನಾವಣಾ ಪ್ರಕ್ರಿಯೆ ಯಲ್ಲಿ ಭಾಗವಹಿಸಲಿಕ್ಕೆ ಒಂದು ನಯಾ ಪೈಸೆ ಹಣವನ್ನು ಪಡೆದಿಲ್ಲ ಎನ್ನುವುದನ್ನು ಸ್ವಾಮಿಯ ಮುಂದೆ ರಾಜ್ಯದ ಜನರಿಗೆ ಹೇಳುತ್ತೇನೆ.

ನಾನೋಬ್ಬ ನ್ಯಾಯಾಂಗ ಹಿನ್ನಲೆಯಿಂದ ರಾಜಕಾರಣಕ್ಕೆ ಬಂದವ.ನನ್ನ ಚಾರಿತ್ರ್ಯ ಹರಣ ಮಾಡುವಂತ ಪ್ರಯತ್ನ ಮಾಡಿದವರಿಗೆ ಭಗವಂತಒಳ್ಳೆ ಯ ಮನಸ್ಸು ನೀಡಲಿ ಎಂದು ಹೇಳಿ ಭಾವುಕರಾದರು.

ಈ ವಿಚಾರವನ್ನುಅನಿವಾರ್ಯವಾಗಿ ಹೇಳಲೇ ಬೇಕಾಗಿರುವುದು ದುರಂತ.ಅದು ಆಗಬಾರದಿತ್ತು. ನನಗೂ ಕೂಡ ನೋವಾಗಿದೆ ಎಂದರು.

ನಾನು ಪ್ರಾಮಾಣಿಕವಾಗಿ ಇದ್ದೇನೆ ಎಂದು ಹೇಳಿಕೊಳ್ಳಲು ಇದ್ದದು ಇದೊಂದೆ ಮಾರ್ಗ ಎಂದರು.

ಟಾಪ್ ನ್ಯೂಸ್

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

Hassan ವೀಡಿಯೋ ಪ್ರಕರಣ ಎಸ್‌ಐಟಿ ತನಿಖೆಗೆ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.