ಬಹುಮಾನದ ಹಣದಲ್ಲಿ ಸಂತ್ರಸ್ತ ಮಗುವಿಗೆ ತೊಟ್ಟಿಲು ಕೊಡಿಸಿದ ಸಾನ್ವಿ
Team Udayavani, Aug 14, 2019, 6:29 PM IST
ವಿಜಯಪುರ: ಕ್ರೀಡೆಯಲ್ಲಿ ಗೆದ್ದ ಬಹುಮಾನ ಹಣದಲ್ಲಿ ಸಂತ್ರಸ್ತ ಮಗುವಿಗೆ ತೊಟ್ಟಿಲು ಕೊಡಿಸುವ ಮೂಲಕ ಶಾಲಾ ಬಾಲಕಿ ಮಾನವೀಯತೆ ಮೆರೆದಿದ್ದಾಳೆ.
ಮಾಜಿ ಸಚಿವ ಎಂ.ಬಿ.ಪಾಟೀಲ ಅವರ ಸಹೋದರಾದ ಎಂ.ಎಲ್.ಸಿ. ಸುನೀಲಗೌಡ ಪಾಟೀಲ ಅವರ ಪುತ್ರಿ ಸಾನ್ವಿ ಪಾಟೀಲ ಎಂಬ ವಿದ್ಯಾರ್ಥಿನಿಯೇ ತಾನುಗೆದ್ದ ಕ್ರೀಡಾ ಬಹುಮಾನದ ಹಣದಲ್ಲಿ ಸಂತ್ರಸ್ತರ ಪುನರ್ವಸತಿ ಕೇಂದ್ರ ಕಂದಮ್ಮಗಳಿಗೆ ತೊಟ್ಟಿಲು ಕೊಡಿಸಿದ್ದಾಳೆ.
ಸಾನ್ವಿ ಪಾಟೀಲ ಬಾಗಲಕೋಟೆಯಲ್ಲಿ ಜರುಗಿದ 19 ವರ್ಷದೊಳಗಿನ ಬ್ಯಾಡ್ಮಿಂಟನ್ ಬಾಲಕಿಯರ ವಿಭಾಗದ ಸಿಂಗಲ್ಸ್ ಸ್ಪರ್ಧೆಯಲ್ಲಿ ಪ್ರಥಮ ಹಾಗೂ ಡಬಲ್ಸ್ ನಲ್ಲಿ ದ್ವಿತೀಯ ಸ್ಥಾನ ಪಡೆದು 5 ಸಾವಿರ ರೂ. ಬಹುಮಾನ ಗೆದ್ದಿದ್ದಳು.
ವಿಜಯಪುರ ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿ ಇರುವುದನ್ನು ಅರಿತಿದ್ದ ಸಾನ್ವಿ ತಾನು ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಗೆದ್ದ ಬಹುಮಾನದ ಹಣದಲ್ಲಿ ಎರಡು ತೊಟ್ಟಿಲನ್ನು ಖರೀದಿಸಿದ್ದಳು.
ಈ ತೊಟ್ಟಿಲು ಗಳನ್ನು ತಮ್ಮ ತಂದೆ ಶಾಸಕ ಸುನೀಲಗೌಡ ಅವರ ಮೂಲಕ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ತಂಗಡಗಿ ಪುನರ್ವಸತಿ ಕೇಂದ್ರದಲ್ಲಿನ ಇಬ್ಬರು ಬಾಣಂತಿಯರಿಗೆ ಹಸ್ತಾಂತರಿಸುವ ಮೂಲಕ ಮುಗ್ಧ ಕಂದಮ್ಮಗಳ ನೆಮ್ಮದಿಯ ನಿದ್ದೆಗಾಗಿ ಜೋಗುಳ ಹಾಡಿ ಮಾನವೀಯತೆ ಮೆರೆದಿದ್ದಾಳೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
MUST WATCH
ಹೊಸ ಸೇರ್ಪಡೆ
BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ
Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ
Udupi: ರಮಾಬಾಯಿ ಕೊಚ್ಚಿಕಾರ್ ಪೈ ನಿಧನ
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ