ಸಾಗರ: ಇತಿಹಾಸ ಪ್ರಸಿದ್ಧ ಶ್ರೀ ಮಾರಿಕಾಂಬಾ ದೇವಿ ಜಾತ್ರೆಗೆ ಅದ್ದೂರಿ ಚಾಲನೆ

ರಾತ್ರಿಯಿಂದಲೇ ದೇವರ ದರ್ಶನಕ್ಕೆ ಕಾದುನಿಂತ ಭಕ್ತರು

Team Udayavani, Feb 7, 2023, 5:35 PM IST

ಸಾಗರ: ಇತಿಹಾಸ ಪ್ರಸಿದ್ಧ ಶ್ರೀ ಮಾರಿಕಾಂಬಾ ದೇವಿ ಜಾತ್ರೆಗೆ ಅದ್ದೂರಿ ಚಾಲನೆ

ಸಾಗರ : ಇತಿಹಾಸ ಪ್ರಸಿದ್ಧ ಶ್ರೀ ಮಾರಿಕಾಂಬಾ ಜಾತ್ರೆ ಮಂಗಳವಾರ ಅದ್ದೂರಿಯಾಗಿ ಪ್ರಾರಂಭಗೊಂಡಿತು. ಒಂಬತ್ತು ದಿನಗಳ ಕಾಲ ನಡೆಯುವ ಶ್ರೀ ಮಾರಿಕಾಂಬಾ ಜಾತ್ರೆಯ ಮೊದಲ ದಿನ ಅನೂಚಾನವಾಗಿ ನಡೆದುಕೊಂಡು ಬಂದಿರುವ ಧಾರ್ಮಿಕ ವಿಧಿವಿಧಾನಗಳಿಗೆ ಬೆಳಿಗ್ಗೆ 5ರ ಬ್ರಾಹ್ಮೀ ಮಹೂರ್ತದಲ್ಲಿ ಚಾಲನೆ ನೀಡಲಾಯಿತು.

ಮಂಗಳವಾರ ಬೆಳಗಿನ ಜಾವ 3 ಗಂಟೆಗೆ ಸಾಗರದ ಇತಿಹಾಸ ಪ್ರಸಿದ್ಧ ಶ್ರೀ ಮಹಾಗಣಪತಿ ದೇವಾಲಯದಲ್ಲಿ ಶ್ರೀ ಮಾರಿಕಾಂಬಾ ದೇವಿಯ ತಾಳಿ ಮತ್ತು ಆಭರಣಗಳಿಗೆ ಪೂಜೆ ಸಲ್ಲಿಸಲಾಯಿತು. ಧಾರ್ಮಿಕ ವಿಧಿವಿಧಾನಗಳನ್ನು ದೇವಾಲಯದ ಪ್ರಧಾನ ಅರ್ಚಕ ವಿದ್ವಾನ್ ಪಿ.ಎಲ್.ಗಜಾನನ ಭಟ್ ನೆರವೇರಿಸಿದರು. ಶ್ರೀ ಮಾರಿಕಾಂಬಾ ಜಾತ್ರಾ ಸಮಿತಿಯ ಪದಾಧಿಕಾರಿಗಳ ಪಾಲ್ಗೊಂಡಿದ್ದರು. ನಂತರ ಸಂಪ್ರದಾಯದಂತೆ ಪುರೋಹಿತ ರಮೇಶ ಭಟ್ಟರ ಮನೆಯಲ್ಲಿ ಪೂಜಾ ಕಾರ್ಯಕ್ರಮ ಸಾಂಗವಾಗಿ ನೆರವೇರಿತು.

ಶ್ರೀ ಮಹಾಗಣಪತಿ ದೇವಾಲಯದಿಂದ ಮಂಗಳವಾದ್ಯಗಳೊಂದಿಗೆ ಸಾಗರ ನಗರದ ಪ್ರಮುಖ ರಸ್ತೆಗಳಲ್ಲಿ ಅಮ್ನವರ ಆಭರಣದ ಮೆರವಣಿಗೆ ಸಾಗಿ ತವರು ಮನೆ ದೇವಸ್ಥಾನಕ್ಕೆ ಆಭರಣಗಳನ್ನು ತರಲಾಯಿತು. ಸಾಗರ ನಗರದ ತವರು ಮನೆಯಲ್ಲಿ ಪ್ರತಿಷ್ಠಾಪಿಸಿದ್ದ 18 ಅಡಿ ಎತ್ತರದ ಶ್ರೀ ಮಾರಿಕಾಂಬಾ ವಿಗ್ರಹಕ್ಕೆ ವಿವಿಧ ಸಾಂಪ್ರಾದಾಯಿಕ ಆಚರಣೆಗಳನ್ನು ನಡೆಸಿ ಆಭರಣಗಳನ್ನು ತೊಡಿಸಲಾಯಿತು.

ಪೂಜಾ ಕಾರ್ಯಕ್ರಮದ ನಂತರ ದೇವಿಯ ವಿಗ್ರಹಕ್ಕೆ ಭಾರಿ ಗಾತ್ರದ ಹಾರ ಸೇರಿದಂತೆ ವೈವಿಧ್ಯಮಯ ಹೂವಿನ ಅಲಂಕಾರ ನಡೆಸಿ ಮಹಾಮಂಗಳಾರತಿ ನಡೆಸಲಾಯಿತು. ನಂತರ ಸರತಿ ಸಾಲಿನಲ್ಲಿ ನಿಂತಿದ್ದ ಭಕ್ತರದರ್ಶನಕ್ಕೆ ಅವಕಾಶ ಕಲ್ಪಿಸಲಾಯಿತು.

ತವರು ಮನೆಯಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ಪ್ರಧಾನ ಅರ್ಚಕ ಮಧುಕರ್ ಭಟ್, ಪುರೋಹಿತ ರಮೇಶ್ ಭಟ್, ಗಜಾನನ ಜೋಯ್ಸ್, ನೀಲಕಂಠ ಜೋಯ್ಸ್, ಸದಾಶಿವ ಜೋಯ್ಸ್, ರಾಘವೇಂದ್ರ ಭಟ್, ನವೀನ್ ಜೋಯ್ಸ್, ಸುಧೀಂದ್ರ ಜೋಯ್ಸ್, ಲಕ್ಷ್ಮಣ್‌ಜೋಯ್ಸ್ ಇನ್ನಿತರರು ಸಾರಥ್ಯ ವಹಿಸಿದ್ದರು.

ರಾತ್ರಿಯಿಂದಲೇ ದೇವರ ದರ್ಶನಕ್ಕೆ ಕಾದುನಿಂತ ಭಕ್ತರು :
ಶ್ರೀ ಮಾರಿಕಾಂಬಾಜಾತ್ರೆಯ ಮೊದಲ ದಿನದಂದು ತವರುಮನೆಯಲ್ಲಿ ಶ್ರೀ ಮಾರಿಕಾಂಬೆ ದರ್ಶನಕ್ಕಾಗಿ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಸೋಮವಾರ ರಾತ್ರಿ 2 ಗಂಟೆಯಿಂದಲೇ ಸರದಿ ಸಾಲಿನಲ್ಲಿ ನಿಂತಿದ್ದರು. ಮಂಗಳವಾರ ಬೆಳಿಗ್ಗೆ ಪೂಜೆಯ ಸಂದರ್ಭದಲ್ಲಿ ದೇವರದರ್ಶನಕ್ಕೆ ನಿಂತಿದ್ದ ಸರದಿ ಸಾಲು ಸಾಗರ ಸಣ್ಣಮನೆ ಬಡಾವಣೆಯ ಸೇತುವೆಯನ್ನು ದಾಟಿದ್ದು ವಿಶೇಷವಾಗಿತ್ತು.

ನೀರು ಮತ್ತು ಉಪಹಾರ ಪೂರೈಕೆ : ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಡಾ. ರಾಜನಂದಿನಿ ಕಾಗೋಡು, ಯೋಧನಮನ ಟ್ರಸ್ಟ್, ದೈವಜ್ಞ ಸಮಾಜ ಯುವಕರು ಹಾಗೂ ಆನಂದ ಸಾಗರ ಟ್ರಸ್ಟ್ ವತಿಯಿಂದ ಸರತಿ ಸಾಲಿನಲ್ಲಿ ನಿಂತಿದ್ದವರಿಗೆ ಚಹಾ, ಕಾಫಿ, ಬಾದಾಮಿ ಹಾಲನ್ನು ಉಚಿತವಾಗಿ ವಿತರಿಸಿದರು. ಜಾತ್ರೆಗೆ ಆಗಮಿಸಿದ್ದ ಸಾರ್ವಜನಿಕರಿಗೆ ಜಾತ್ರಾ ಸಮಿತಿಯಿಂದ ಅನ್ನ ಸಂತರ್ಪಣೆ ವ್ಯವಸ್ಥೆ ಮಾಡಲಾಗಿತ್ತು.

ಸ್ನೇಹಿತರು ಬಳಗದಿಂದ ಊಟ : ಇಲ್ಲಿನ ಸ್ನೇಹಿತರು ಸಾಗರ ಸಂಸ್ಥೆ ವತಿಯಿಂದ ಜಾತ್ರಾರ್ಥಿಗಳಿಗೆ ಉಚಿತ ಊಟದ ವ್ಯವಸ್ಥೆಯನ್ನು ನಗರಸಭೆ ಕಾಂಪ್ಲೆಕ್ಸ್‌ನಲ್ಲಿ ಏರ್ಪಡಿಸಲಾಗಿತ್ತು. ಸತತ 15ನೇ ಜಾತ್ರೆಯಲ್ಲಿ ಸ್ನೇಹಿತರು ಸಾಗರ ಈ ಸೇವಾ ಕಾರ್ಯವನ್ನು ಚಾಚೂತಪ್ಪದೆ ನಡೆಸಿಕೊಂಡು ಬರುತ್ತಿದೆ. ಪ್ರತಿದಿನ 8 ರಿಂದ 10 ಸಾವಿರ ಜನರಿಗೆ ಊಟದ ವ್ಯವಸ್ಥೆಯನ್ನು ಸಂಸ್ಥೆ ಮಾಡುವ ಮೂಲಕ ಸಾರ್ವಜನಿಕರ ಪ್ರಶಂಸೆಗೆ ಪಾತ್ರವಾಗಿದೆ. ಬರುವ ಭಕ್ತಾದಿಗಳಿಗೆ ಶುದ್ದವಾದ ನೀರು ಮತ್ತು ಊಟವನ್ನು ಜಾತ್ರೆ ಮುಗಿಯುವವರೆಗೂ ನೀಡಲಾಗುತ್ತದೆ ಎಂದು ಬಳಗದ ಪರವಾಗಿ ಬಿ.ಎಚ್.ಲಿಂಗರಾಜ್ ತಿಳಿಸಿದ್ದಾರೆ.

ಶಾಸಕ ಹಾಲಪ್ಪ-ಮಾಜಿ ಸಚಿವ ಕಾಗೋಡು ದರ್ಶನ : ಶಾಸಕ ಹರತಾಳು ಹಾಲಪ್ಪ ಮತ್ತು ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಏಕಕಾಲದಲ್ಲಿ ಕುಟುಂಬ ಸಮೇತವಾಗಿ ಅಮ್ಮನವರ ದರ್ಶನ ಪಡೆದರು. ಈ ಸಂದರ್ಭದಲ್ಲಿ ದೇವಸ್ಥಾನ ಸಮಿತಿಯ ಪದಾಧಿಕಾರಿಗಳು ಹಾಜರಿದ್ದು, ಅಮ್ಮನವರಿಗೆ ಇಬ್ಬರು ಜನಪ್ರತಿನಿಧಿಗಳ ಹೆಸರಿನಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.

ಇದನ್ನೂ ಓದಿ: ಗುಂಡ್ಲುಪೇಟೆ: ಕೆರೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಹುಲಿ ಮೃತದೇಹ ಪತ್ತೆ

ಟಾಪ್ ನ್ಯೂಸ್

5–sirsi

ಇಬ್ಬರು ಶಾಸಕರ ರಾಜೀನಾಮೆ? ಶಿರಸಿಯತ್ತ ಎಲ್ಲರ ಚಿತ್ತ!

IPL: Michael Vaughan Makes Bold Title Prediction

ಮುಂಬೈ-ಚೆನ್ನೈ ಅಲ್ಲ, ಐಪಿಎಲ್ ವಿಜೇತರ ಬಗ್ಗೆ ಭವಿಷ್ಯ ನುಡಿದ ಮೈಕಲ್ ವಾನ್

ಗುಜರಾತ್ ನಲ್ಲಿ ಪ್ರಧಾನಿ ಮೋದಿ ವಿರುದ್ಧ ಪೋಸ್ಟರ್ ಅಭಿಯಾನ; 8 ಮಂದಿ ಬಂಧನ: ವರದಿ

ಗುಜರಾತ್ ನಲ್ಲಿ ಪ್ರಧಾನಿ ಮೋದಿ ವಿರುದ್ಧ ಪೋಸ್ಟರ್ ಅಭಿಯಾನ; 8 ಮಂದಿ ಬಂಧನ: ವರದಿ

elephant

ಕಾಡಾನೆಯ ಹನಿಟ್ರ್ಯಾಪ್: ತೀರ್ಥಹಳ್ಳಿ ಪಟ್ಟಣಕ್ಕೆ ನುಗ್ಗಿದ್ದ ಕಾಡಾನೆಯ ಸೆರೆಯಾಗಿಸಿದ ಭಾನುಮತಿ

Gurudev hoysala

ಚಿತ್ರ ವಿಮರ್ಶೆ: ‘ಹೊಯ್ಸಳ’ ಸಾಮ್ರಾಜ್ಯದಲ್ಲಿ ಆ್ಯಕ್ಷನ್‌ ಅಬ್ಬರ

ಮಂಗಳೂರು: ಲಾಡ್ಜ್ ವೊಂದರಲ್ಲಿ ನಾಲ್ಕು ಮಂದಿ ಆತ್ಮಹತ್ಯೆ

ಮಂಗಳೂರು: ಲಾಡ್ಜ್ ವೊಂದರಲ್ಲಿ ನಾಲ್ಕು ಮಂದಿ ಆತ್ಮಹತ್ಯೆ!

donald-trump

ಟ್ರಂಪ್ ವಿರುದ್ಧ ಕ್ರಿಮಿನಲ್ ಅರೋಪ: ಏನಿದು ಟ್ರಂಪ್- ಪಾರ್ನ್ ಸ್ಟಾರ್ ಡೇನಿಯಲ್ಸ್ ಹಣದ ವಿಚಾರ?



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವರುಣಾ ಕ್ಷೇತ್ರದಲ್ಲಿ ಸಿದ್ದು ವಿರುದ್ಧ ವಿಜಯೇಂದ್ರ ಸ್ಪರ್ಧಿಸಲಿದ್ದಾರಾ ?

ವರುಣಾ ಕ್ಷೇತ್ರದಲ್ಲಿ ಸಿದ್ದು ವಿರುದ್ಧ ವಿಜಯೇಂದ್ರ ಸ್ಪರ್ಧಿಸಲಿದ್ದಾರಾ ?

ವಿಧಾನಸಭೆ ಚುನಾವಣೆ: ಟಿಕೆಟ್‌ ಆಕಾಂಕ್ಷಿಗಳಲ್ಲಿ  ತಳಮಳ

ವಿಧಾನಸಭೆ ಚುನಾವಣೆ: ಟಿಕೆಟ್‌ ಆಕಾಂಕ್ಷಿಗಳಲ್ಲಿ  ತಳಮಳ

ಮುಂದಿನ 3 ದಿನ ಬೆಂಗಳೂರು ಸೇರಿ ಹಲವೆಡೆ ಮಳೆ

ಮುಂದಿನ 3 ದಿನ ಬೆಂಗಳೂರು ಸೇರಿ ಹಲವೆಡೆ ಮಳೆ

ಇಂದಿನಿಂದ ಎಸೆಸೆಲ್ಸಿ ಪರೀಕ್ಷೆ :ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಗೊತ್ತ?

ಇಂದಿನಿಂದ ಎಸೆಸೆಲ್ಸಿ ಪರೀಕ್ಷೆ :ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಗೊತ್ತ?

ಮತ್ತೆ ಸದ್ದು ಮಾಡಿದ ಪಕ್ಷಾಂತರ ರಾಜಕೀಯ: ಕಾಂಗ್ರೆಸ್‌ ಸೇರಿದ ಗುಬ್ಬಿ ಶ್ರೀನಿವಾಸ್‌

ಮತ್ತೆ ಸದ್ದು ಮಾಡಿದ ಪಕ್ಷಾಂತರ ರಾಜಕೀಯ: ಕಾಂಗ್ರೆಸ್‌ ಸೇರಿದ ಗುಬ್ಬಿ ಶ್ರೀನಿವಾಸ್‌

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

5–sirsi

ಇಬ್ಬರು ಶಾಸಕರ ರಾಜೀನಾಮೆ? ಶಿರಸಿಯತ್ತ ಎಲ್ಲರ ಚಿತ್ತ!

IPL: Michael Vaughan Makes Bold Title Prediction

ಮುಂಬೈ-ಚೆನ್ನೈ ಅಲ್ಲ, ಐಪಿಎಲ್ ವಿಜೇತರ ಬಗ್ಗೆ ಭವಿಷ್ಯ ನುಡಿದ ಮೈಕಲ್ ವಾನ್

4–hunsur

ಹುಣಸೂರು: ಮೊದಲ ವರ್ಷಧಾರೆಗೆ ನೂರಾರು ಎಕರೆ ಬಾಳೆ ಬೆಳೆ ನಾಶ, ಲಕ್ಷಾಂತರ ರೂ. ನಷ್ಟ

ಗುಜರಾತ್ ನಲ್ಲಿ ಪ್ರಧಾನಿ ಮೋದಿ ವಿರುದ್ಧ ಪೋಸ್ಟರ್ ಅಭಿಯಾನ; 8 ಮಂದಿ ಬಂಧನ: ವರದಿ

ಗುಜರಾತ್ ನಲ್ಲಿ ಪ್ರಧಾನಿ ಮೋದಿ ವಿರುದ್ಧ ಪೋಸ್ಟರ್ ಅಭಿಯಾನ; 8 ಮಂದಿ ಬಂಧನ: ವರದಿ

3–hunsur

ಹುಣಸೂರು: ಇಂದಿನಿಂದ ಎಸ್.ಎಸ್.ಎಲ್.ಸಿ. ಪರೀಕ್ಷೆ