ಸಾಗರ: ಇತಿಹಾಸ ಪ್ರಸಿದ್ಧ ಶ್ರೀ ಮಾರಿಕಾಂಬಾ ದೇವಿ ಜಾತ್ರೆಗೆ ಅದ್ದೂರಿ ಚಾಲನೆ

ರಾತ್ರಿಯಿಂದಲೇ ದೇವರ ದರ್ಶನಕ್ಕೆ ಕಾದುನಿಂತ ಭಕ್ತರು

Team Udayavani, Feb 7, 2023, 5:35 PM IST

ಸಾಗರ: ಇತಿಹಾಸ ಪ್ರಸಿದ್ಧ ಶ್ರೀ ಮಾರಿಕಾಂಬಾ ದೇವಿ ಜಾತ್ರೆಗೆ ಅದ್ದೂರಿ ಚಾಲನೆ

ಸಾಗರ : ಇತಿಹಾಸ ಪ್ರಸಿದ್ಧ ಶ್ರೀ ಮಾರಿಕಾಂಬಾ ಜಾತ್ರೆ ಮಂಗಳವಾರ ಅದ್ದೂರಿಯಾಗಿ ಪ್ರಾರಂಭಗೊಂಡಿತು. ಒಂಬತ್ತು ದಿನಗಳ ಕಾಲ ನಡೆಯುವ ಶ್ರೀ ಮಾರಿಕಾಂಬಾ ಜಾತ್ರೆಯ ಮೊದಲ ದಿನ ಅನೂಚಾನವಾಗಿ ನಡೆದುಕೊಂಡು ಬಂದಿರುವ ಧಾರ್ಮಿಕ ವಿಧಿವಿಧಾನಗಳಿಗೆ ಬೆಳಿಗ್ಗೆ 5ರ ಬ್ರಾಹ್ಮೀ ಮಹೂರ್ತದಲ್ಲಿ ಚಾಲನೆ ನೀಡಲಾಯಿತು.

ಮಂಗಳವಾರ ಬೆಳಗಿನ ಜಾವ 3 ಗಂಟೆಗೆ ಸಾಗರದ ಇತಿಹಾಸ ಪ್ರಸಿದ್ಧ ಶ್ರೀ ಮಹಾಗಣಪತಿ ದೇವಾಲಯದಲ್ಲಿ ಶ್ರೀ ಮಾರಿಕಾಂಬಾ ದೇವಿಯ ತಾಳಿ ಮತ್ತು ಆಭರಣಗಳಿಗೆ ಪೂಜೆ ಸಲ್ಲಿಸಲಾಯಿತು. ಧಾರ್ಮಿಕ ವಿಧಿವಿಧಾನಗಳನ್ನು ದೇವಾಲಯದ ಪ್ರಧಾನ ಅರ್ಚಕ ವಿದ್ವಾನ್ ಪಿ.ಎಲ್.ಗಜಾನನ ಭಟ್ ನೆರವೇರಿಸಿದರು. ಶ್ರೀ ಮಾರಿಕಾಂಬಾ ಜಾತ್ರಾ ಸಮಿತಿಯ ಪದಾಧಿಕಾರಿಗಳ ಪಾಲ್ಗೊಂಡಿದ್ದರು. ನಂತರ ಸಂಪ್ರದಾಯದಂತೆ ಪುರೋಹಿತ ರಮೇಶ ಭಟ್ಟರ ಮನೆಯಲ್ಲಿ ಪೂಜಾ ಕಾರ್ಯಕ್ರಮ ಸಾಂಗವಾಗಿ ನೆರವೇರಿತು.

ಶ್ರೀ ಮಹಾಗಣಪತಿ ದೇವಾಲಯದಿಂದ ಮಂಗಳವಾದ್ಯಗಳೊಂದಿಗೆ ಸಾಗರ ನಗರದ ಪ್ರಮುಖ ರಸ್ತೆಗಳಲ್ಲಿ ಅಮ್ನವರ ಆಭರಣದ ಮೆರವಣಿಗೆ ಸಾಗಿ ತವರು ಮನೆ ದೇವಸ್ಥಾನಕ್ಕೆ ಆಭರಣಗಳನ್ನು ತರಲಾಯಿತು. ಸಾಗರ ನಗರದ ತವರು ಮನೆಯಲ್ಲಿ ಪ್ರತಿಷ್ಠಾಪಿಸಿದ್ದ 18 ಅಡಿ ಎತ್ತರದ ಶ್ರೀ ಮಾರಿಕಾಂಬಾ ವಿಗ್ರಹಕ್ಕೆ ವಿವಿಧ ಸಾಂಪ್ರಾದಾಯಿಕ ಆಚರಣೆಗಳನ್ನು ನಡೆಸಿ ಆಭರಣಗಳನ್ನು ತೊಡಿಸಲಾಯಿತು.

ಪೂಜಾ ಕಾರ್ಯಕ್ರಮದ ನಂತರ ದೇವಿಯ ವಿಗ್ರಹಕ್ಕೆ ಭಾರಿ ಗಾತ್ರದ ಹಾರ ಸೇರಿದಂತೆ ವೈವಿಧ್ಯಮಯ ಹೂವಿನ ಅಲಂಕಾರ ನಡೆಸಿ ಮಹಾಮಂಗಳಾರತಿ ನಡೆಸಲಾಯಿತು. ನಂತರ ಸರತಿ ಸಾಲಿನಲ್ಲಿ ನಿಂತಿದ್ದ ಭಕ್ತರದರ್ಶನಕ್ಕೆ ಅವಕಾಶ ಕಲ್ಪಿಸಲಾಯಿತು.

ತವರು ಮನೆಯಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ಪ್ರಧಾನ ಅರ್ಚಕ ಮಧುಕರ್ ಭಟ್, ಪುರೋಹಿತ ರಮೇಶ್ ಭಟ್, ಗಜಾನನ ಜೋಯ್ಸ್, ನೀಲಕಂಠ ಜೋಯ್ಸ್, ಸದಾಶಿವ ಜೋಯ್ಸ್, ರಾಘವೇಂದ್ರ ಭಟ್, ನವೀನ್ ಜೋಯ್ಸ್, ಸುಧೀಂದ್ರ ಜೋಯ್ಸ್, ಲಕ್ಷ್ಮಣ್‌ಜೋಯ್ಸ್ ಇನ್ನಿತರರು ಸಾರಥ್ಯ ವಹಿಸಿದ್ದರು.

ರಾತ್ರಿಯಿಂದಲೇ ದೇವರ ದರ್ಶನಕ್ಕೆ ಕಾದುನಿಂತ ಭಕ್ತರು :
ಶ್ರೀ ಮಾರಿಕಾಂಬಾಜಾತ್ರೆಯ ಮೊದಲ ದಿನದಂದು ತವರುಮನೆಯಲ್ಲಿ ಶ್ರೀ ಮಾರಿಕಾಂಬೆ ದರ್ಶನಕ್ಕಾಗಿ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಸೋಮವಾರ ರಾತ್ರಿ 2 ಗಂಟೆಯಿಂದಲೇ ಸರದಿ ಸಾಲಿನಲ್ಲಿ ನಿಂತಿದ್ದರು. ಮಂಗಳವಾರ ಬೆಳಿಗ್ಗೆ ಪೂಜೆಯ ಸಂದರ್ಭದಲ್ಲಿ ದೇವರದರ್ಶನಕ್ಕೆ ನಿಂತಿದ್ದ ಸರದಿ ಸಾಲು ಸಾಗರ ಸಣ್ಣಮನೆ ಬಡಾವಣೆಯ ಸೇತುವೆಯನ್ನು ದಾಟಿದ್ದು ವಿಶೇಷವಾಗಿತ್ತು.

ನೀರು ಮತ್ತು ಉಪಹಾರ ಪೂರೈಕೆ : ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಡಾ. ರಾಜನಂದಿನಿ ಕಾಗೋಡು, ಯೋಧನಮನ ಟ್ರಸ್ಟ್, ದೈವಜ್ಞ ಸಮಾಜ ಯುವಕರು ಹಾಗೂ ಆನಂದ ಸಾಗರ ಟ್ರಸ್ಟ್ ವತಿಯಿಂದ ಸರತಿ ಸಾಲಿನಲ್ಲಿ ನಿಂತಿದ್ದವರಿಗೆ ಚಹಾ, ಕಾಫಿ, ಬಾದಾಮಿ ಹಾಲನ್ನು ಉಚಿತವಾಗಿ ವಿತರಿಸಿದರು. ಜಾತ್ರೆಗೆ ಆಗಮಿಸಿದ್ದ ಸಾರ್ವಜನಿಕರಿಗೆ ಜಾತ್ರಾ ಸಮಿತಿಯಿಂದ ಅನ್ನ ಸಂತರ್ಪಣೆ ವ್ಯವಸ್ಥೆ ಮಾಡಲಾಗಿತ್ತು.

ಸ್ನೇಹಿತರು ಬಳಗದಿಂದ ಊಟ : ಇಲ್ಲಿನ ಸ್ನೇಹಿತರು ಸಾಗರ ಸಂಸ್ಥೆ ವತಿಯಿಂದ ಜಾತ್ರಾರ್ಥಿಗಳಿಗೆ ಉಚಿತ ಊಟದ ವ್ಯವಸ್ಥೆಯನ್ನು ನಗರಸಭೆ ಕಾಂಪ್ಲೆಕ್ಸ್‌ನಲ್ಲಿ ಏರ್ಪಡಿಸಲಾಗಿತ್ತು. ಸತತ 15ನೇ ಜಾತ್ರೆಯಲ್ಲಿ ಸ್ನೇಹಿತರು ಸಾಗರ ಈ ಸೇವಾ ಕಾರ್ಯವನ್ನು ಚಾಚೂತಪ್ಪದೆ ನಡೆಸಿಕೊಂಡು ಬರುತ್ತಿದೆ. ಪ್ರತಿದಿನ 8 ರಿಂದ 10 ಸಾವಿರ ಜನರಿಗೆ ಊಟದ ವ್ಯವಸ್ಥೆಯನ್ನು ಸಂಸ್ಥೆ ಮಾಡುವ ಮೂಲಕ ಸಾರ್ವಜನಿಕರ ಪ್ರಶಂಸೆಗೆ ಪಾತ್ರವಾಗಿದೆ. ಬರುವ ಭಕ್ತಾದಿಗಳಿಗೆ ಶುದ್ದವಾದ ನೀರು ಮತ್ತು ಊಟವನ್ನು ಜಾತ್ರೆ ಮುಗಿಯುವವರೆಗೂ ನೀಡಲಾಗುತ್ತದೆ ಎಂದು ಬಳಗದ ಪರವಾಗಿ ಬಿ.ಎಚ್.ಲಿಂಗರಾಜ್ ತಿಳಿಸಿದ್ದಾರೆ.

ಶಾಸಕ ಹಾಲಪ್ಪ-ಮಾಜಿ ಸಚಿವ ಕಾಗೋಡು ದರ್ಶನ : ಶಾಸಕ ಹರತಾಳು ಹಾಲಪ್ಪ ಮತ್ತು ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಏಕಕಾಲದಲ್ಲಿ ಕುಟುಂಬ ಸಮೇತವಾಗಿ ಅಮ್ಮನವರ ದರ್ಶನ ಪಡೆದರು. ಈ ಸಂದರ್ಭದಲ್ಲಿ ದೇವಸ್ಥಾನ ಸಮಿತಿಯ ಪದಾಧಿಕಾರಿಗಳು ಹಾಜರಿದ್ದು, ಅಮ್ಮನವರಿಗೆ ಇಬ್ಬರು ಜನಪ್ರತಿನಿಧಿಗಳ ಹೆಸರಿನಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.

ಇದನ್ನೂ ಓದಿ: ಗುಂಡ್ಲುಪೇಟೆ: ಕೆರೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಹುಲಿ ಮೃತದೇಹ ಪತ್ತೆ

ಟಾಪ್ ನ್ಯೂಸ್

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

16-

ನಟ, ಕಾಂಗ್ರೆಸ್‌ ಮಾಜಿ ಸಂಸದ ಗೋವಿಂದ “ಶಿಂಧೆ ಸೇನೆ’ ಸೇರ್ಪಡೆ

15-

ಕಂಗನಾ ವಿರುದ್ಧ ಪೋಸ್ಟ್: ಕೈ ನಾಯಕಿಗೆ‌ ಟಿಕೆಟ್‌ ಡೌಟ್‌

14-

Chandigarh: ಪುತ್ರನ ಬೆನ್ನಲ್ಲೇ ಪುತ್ರಿ ಜತೆಗೆ ಸಾವಿತ್ರಿ ಜಿಂದಾಲ್‌ ಬಿಜೆಪಿಗೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.