ಸಲಾಂ ಮಂಗಳಾರತಿ ಕುರಿತು ಕೊಲ್ಲೂರು ದೇಗುಲದ ಸ್ಪಷ್ಟನೆಯಲ್ಲೇನಿದೆ?

ಸಲಾಂ ಮಂಗಳಾರತಿ ಕೈ ಬಿಡುವಂತೆ ವಿಶ್ವ ಹಿಂದೂ ಪರಿಷತ್‌ ಆಗ್ರಹ

Team Udayavani, Mar 30, 2022, 11:55 AM IST

ಸಲಾಂ ಮಂಗಳಾರತಿ ಕುರಿತು ಕೊಲ್ಲೂರು ದೇಗುಲದ ಸ್ಪಷ್ಟನೆಯಲ್ಲೇನಿದೆ?

ಕೊಲ್ಲೂರು ಮಾ. 29: ಕೊಲ್ಲೂರು ದೇಗುಲದ ಆಡಳಿತ ಮಂಡಳಿಯು ಸಲಾಂ ಮಂಗಳಾರತಿಯ ಬಗ್ಗೆ ಸ್ಪಷ್ಟನೆ ನೀಡಿದ್ದು, ದೇಗುಲದಲ್ಲಿ ಸಂಪ್ರದಾಯದಂತೆ ಪೂಜೆ ನಡೆಯುತ್ತಿದೆ. ಸಂಜೆ ಪ್ರದೋಷ ಪೂಜೆ ಹೊರತುಪಡಿಸಿ ಇನ್ನಿತರ ಯಾವುದೇ ಪೂಜೆ ನಡೆಯುತ್ತಿಲ್ಲ. ಸಂಜೆ ನಡೆಯುವ ಈ ಪ್ರದೋಷ ಪೂಜೆಯನ್ನು ಸ್ಥಳೀಯರು ಸಲಾಂ ಮಂಗಳಾರತಿ ಅನ್ನುತ್ತಾರೆ. ಆದರೆ ದೇಗುಲದಿಂದ ವ್ಯಕ್ತಿ ಪೂಜೆ ಮಾಡುತ್ತಿಲ್ಲ ಎಂದು ತಿಳಿಸಲಾಗಿದೆ.

ವಿಶ್ವ ಹಿಂದೂ ಪರಿಷತ್‌ ಕೊಲ್ಲೂರು ದೇವಸ್ಥಾನದ ಆಡಳಿತ ಮಂಡಳಿಗೆ ಪತ್ರ ಬರೆದು ಸಲಾಂ ಮಂಗಳಾರತಿ ಕೈ ಬಿಡುವಂತೆ ಆಗ್ರಹಿಸಿರುವ ಹಿನ್ನೆಲೆಯಲ್ಲಿ ಆಡಳಿತ ಮಂಡಳಿಯು ಪತ್ರಿಕಾ ಹೇಳಿಕೆ ನೀಡಿ ಈ ವಿಚಾರವನ್ನು ಸ್ಪಷ್ಟಪಡಿಸಿದೆ.

ಸಲಾಂ ಮಂಗಳಾರತಿ ಇಲ್ಲ: ಸುಕುಮಾರ ಶೆಟ್ಟಿ
ಕೊಲ್ಲೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ದೇಗುಲದಲ್ಲಿ ಸಲಾಂ ಮಂಗಳಾರತಿಯ ಯಾವುದೇ ದಾಖಲೆ ಪುರಾವೆಗಳಿಲ್ಲ. ಇಲ್ಲಿ ನಡೆಯುತ್ತಿರುವ ಪ್ರದೋಷ ಪೂಜೆಯನ್ನು ಆ ಅರ್ಥದಲ್ಲಿ ಗ್ರಹಿಸಿರಬೇಕು. ದೇಗುಲದಲ್ಲಿ ಹಿಂದೂ ಧಾರ್ಮಿಕ ಪದ್ಧತಿಯ ಪ್ರಕಾರವೇ ಎಲ್ಲ ಪೂಜೆ ಪುನಸ್ಕಾರಗಳು ನಡೆಯುತ್ತಿವೆ ಎಂದು ಬೈಂದೂರು ಶಾಸಕ ಬಿ.ಎಂ. ಸುಕುಮಾರ ಶೆಟ್ಟಿ ಹೇಳಿದ್ದಾರೆ.

ಉದಯವಾಣಿ ಪ್ರತಿನಿಧಿಯೊಡನೆ ಮಾತನಾಡಿದ ಶಾಸಕರು, ದೇಗುಲದ ಕಟ್ಟುಪಾಡುಗಳಿಗೆ ಅದರದೇ ಆದ ಮಹತ್ವವಿದೆ. ಧರ್ಮ ಪರಂಪರೆಯಂತೆ ಶ್ರದ್ಧಾ ಭಕ್ತಿಯಿಂದ ಅನುಷ್ಠಾನ ಗೊಳಿಸಲಾಗುತ್ತಿದೆ. ನಾನು ಶಾಸಕ ನಾಗುವ ಮೊದಲು ಕೊಲ್ಲೂರು ಕ್ಷೇತ್ರದಲ್ಲಿ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ನಾಗಿ ಸೇವೆ ಸಲ್ಲಿಸಿರುವ ಸಂದರ್ಭದಲ್ಲಿ ಸಲಾಂ ಮಂಗಳಾರತಿಯ ದಾಖಲೆ ಕಂಡುಬಂದಿಲ್ಲ. ಹಾಗಾಗಿ ರೂಢಿಯಲ್ಲಿರುವ ಪದಬಳಕೆಗೆ ಪ್ರಾಧಾನ್ಯ ಕೊಡುವ ಅಗತ್ಯವಿಲ್ಲ. ಪ್ರದೋಷ ಪೂಜೆ ಕೊಲ್ಲೂರು ಕ್ಷೇತ್ರದ ಪೂಜೆಗಳಲ್ಲಿ ಹೆಚ್ಚಿನ ಮಹತ್ವ ಪಡೆದಿದ್ದು, ಅದೇ ಹೆಸರನ್ನು ಬಳಸತಕ್ಕದ್ದು ಎಂದು ಅವರು ಅಭಿಪ್ರಾಯ ಪಟ್ಟಿದ್ದಾರೆ.

ಕೊಲ್ಲೂರು ದೇಗುಲ ಸನಾತನ ಧರ್ಮ ಸಂಸ್ಕೃತಿಯ ಪರಂಪರೆಯನ್ನು ಕಾಪಾಡಿಕೊಂಡು ಬಂದಿದೆ. ಇಲ್ಲಿ ಯಾವುದೇ ಲೋಪವಾಗದಂತೆ ಅರ್ಚಕರು ನಿಷ್ಠೆ ಹಾಗೂ ಭಕ್ತಿಯಿಂದ ದೈನಂದಿನ ಪೂಜೆ ನಡೆಸಿಕೊಂಡು ಬರುತ್ತಿದ್ದಾರೆ. ಯಾವುದೇ ಕಾರಣಕ್ಕೂ ಸಲಾಂ ಮಂಗಳಾರತಿ ಎಂಬ ಹೆಸರಿಗೆ ಮನ್ನಣೆ ನೀಡಲಾಗುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಟಾಪ್ ನ್ಯೂಸ್

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕನ್ನಡಕುದ್ರು: ತೆಂಗಿನ ಮರಗಳಿಗೆ ಕೀಟ ಬಾಧೆ: ಕೃಷಿ ವಿಜ್ಞಾನಿಗಳ ತಂಡ ಭೇಟಿ; ಪರಿಶೀಲನೆ

ಕನ್ನಡಕುದ್ರು: ತೆಂಗಿನ ಮರಗಳಿಗೆ ಕೀಟ ಬಾಧೆ: ಕೃಷಿ ವಿಜ್ಞಾನಿಗಳ ತಂಡ ಭೇಟಿ; ಪರಿಶೀಲನೆ

“ಆಟ’ಕ್ಕೆ ಅಂತಾರಾಷ್ಟ್ರೀಯ ದಿನ ನಿಗದಿಗೆ ಹಕ್ಕೊತ್ತಾಯ

“ಆಟ’ಕ್ಕೆ ಅಂತಾರಾಷ್ಟ್ರೀಯ ದಿನ ನಿಗದಿಗೆ ಹಕ್ಕೊತ್ತಾಯ

Gangolli ಬೈಕ್‌ ಢಿಕ್ಕಿ ; ಸವಾರರಿಗೆ ಗಾಯ

Gangolli ಬೈಕ್‌ ಢಿಕ್ಕಿ ; ಸವಾರರಿಗೆ ಗಾಯ

Siddapura ಸಾಲ ಬಾಧೆಯಿಂದ ಯುವಕ ಆತ್ಮಹತ್ಯೆ

Siddapura ಸಾಲ ಬಾಧೆಯಿಂದ ಯುವಕ ಆತ್ಮಹತ್ಯೆ

Kollur ಮೇಲ್‌ ಹೊಸೂರು: 1.50 ಲಕ್ಷ ರೂ.ಮೌಲ್ಯದ ಅಡಿಕೆ ನಾಪತ್ತೆ; ದೂರು

Kollur ಮೇಲ್‌ ಹೊಸೂರು: 1.50 ಲಕ್ಷ ರೂ.ಮೌಲ್ಯದ ಅಡಿಕೆ ನಾಪತ್ತೆ; ದೂರು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.