ಜಿಲ್ಲಾಧಿಕಾರಿ ಷರತ್ತು ಬದ್ದ ಅನುಮತಿ ಮೇರೆಗೆ ಮೇ 18ರಿಂದ ಉಡುಪಿ ಜಿಲ್ಲೆಯಲ್ಲಿ ಸೆಲೂನು ಆರಂಭ


Team Udayavani, May 14, 2020, 3:00 PM IST

ಜಿಲ್ಲಾಧಿಕಾರಿ ಅನುಮತಿ ಮೇರೆಗೆ ಮೇ 18ರಿಂದ ಉಡುಪಿ ಜಿಲ್ಲೆಯಲ್ಲಿ ಸೆಲೂನುಗಳು ಆರಂಭ

ಉಡುಪಿ: ಜಿಲ್ಲೆಯಾದ್ಯಂತ ಮೇ 18ರಿಂದ ಸೆಲೂನುಗಳನ್ನು ಪುನರಾರಂಭಿಸಲು ಷರತ್ತು ಬದ್ದ ಅನುಮತಿ ನೀಡುವುದಾಗಿ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ ಎಂದು ಜಿಲ್ಲಾ ಸವಿತಾ ಸಮಾಜದ ಅಧ್ಯಕ್ಷ ಭಾಸ್ಕರ ಭಂಡಾರಿ ಗುಡ್ಡೆಯಂಗಡಿ ಪತ್ರಿಕಾಗೋಷ್ಠಿಯಲ್ಲಿ ಗುರುವಾರ ತಿಳಿಸಿದರು.

ಮೇ 13ರಂದು ಜಿಲ್ಲಾ ಸವಿತಾ ಸಮಾಜದ ನಿಯೋಗವು ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿ ಮನವಿ ಸಲ್ಲಿಸಿ ಸದ್ಯದ ಪರಿಸ್ಥಿತಿಗಳನ್ನು ವಿವರಿಸಿದೆ. ಕೋವಿಡ್ ಸಮಸ್ಯೆಯಿಂದ ದೇಶವೇ ತತ್ತರಿಸುತ್ತಿದ್ದಾಗ ಲಾಕ್‌ಡೌನ್‌ ಮಾಡುವ ಮೂರು ದಿನಗಳ ಹಿಂದೆಯೇ ಕ್ಷೌರಿಕ ಬಂಧುಗಳು ಅಂಗಡಿಗಳನ್ನು ಮುಚ್ಚಿ ಬೆಂಬಲವನ್ನು ಸೂಚಿಸಿದ್ದಾರೆ. ಕ್ಷೌರಿಕ ಕುಟುಂಬ ಸಂಕಷ್ಟಕ್ಕೆ ಸಿಲುಕಿದಾಗ ಉದ್ಯಮಿ ನಾಡೋಜ ಡಾ| ಜಿ.ಶಂಕರ್‌ ಮತ್ತು ಜಿ.ಶಂಕರ್‌ ಫ್ಯಾಮಿಲಿ ಟ್ರಸ್ಟ್‌ ಮೂಲಕ ಜಿಲ್ಲೆಯ ಎಲ್ಲ ಕ್ಷೌರಿಕರಿಗೆ ಹಾಗೂ ಬಡ ಅರ್ಹ ಕುಟುಂಬಗಳಿಗೆ ಅಕ್ಕಿ ಮತ್ತು ದಿನಸಿ ಸಾಮಗ್ರಿಗಳುಳ್ಳ ಕಿಟ್‌ಗಳನ್ನು ನೀಡಿ ಮಾನವೀಯತೆ ಮೆರೆದಿದ್ದಾರೆ. ತಾಲೂಕು, ವಲಯ ಘಟಕಗಳ ಪದಾಧಿಕಾರಿಗಳಿಗೆ ಹಾಗೂ ಸವಿತಾ ಸೌಹಾರ್ದ ಸೊಸೈಟಿ ಕೂಡ ಸ್ಪಂದಿಸಿದೆ. ಇತ್ತೀಚೆಗೆ ರಾಜ್ಯ ಸರಕಾರ ಕ್ಷೌರಿಕರಿಗಾಗಿ 5 ಸಾವಿರ ರೂ. ಆರ್ಥಿಕ ನೆರವು ಘೋಷಿಸಿದ್ದು, ಸಂಬಂಧಪಟ್ಟ ಇಲಾಖೆಯ ಮೂಲಕ ಆದಷ್ಟು ಶೀಘ್ರ ಇದು ಅರ್ಹರಿಗೆ ತಲುಪುವಂತಾಗಬೇಕು ಎಂದರು.

ಷರತ್ತುಗಳು
– ಗ್ರಾಹಕರು ಫೋನ್‌ ಮುಖಾಂತರ ಸಮಯ ನಿಗದಿಪಡಿಸಿ ಆ ಮೂಲಕ ಕ್ಷೌರ ಮಾಡಿಸಲು ಬಂದರೆ ಉತ್ತಮ.
– ಯಾವುದೇ ಸೆಲೂನುಗಳು ಎಸಿ ಹಾಕುವಂತಿಲ್ಲ.
– ಗ್ರಾಹಕರು ಮತ್ತು ಕ್ಷೌರಿಕರ ಅಂತರವನ್ನು ಎರಡು ಫೀಟ್‌ ಕಡಿಮೆ ಇರದಂತೆ ಕಾಪಾಡಬೇಕು.
– ಸೆಲೂನ್‌ನ ಬಟ್ಟೆಗಳು ಹಾಗೂ ಅಂಗಡಿಗಳು ಸ್ವತ್ಛತೆ ಮತ್ತು ಶುಭ್ರತೆಯನ್ನು ಕಾಪಾಡಬೇಕು.
– ಗ್ರಾಹಕರಿಗೆ ಸೇವೆ ನೀಡುವಾಗ ಮುಖಕ್ಕೆ ಮಾಸ್ಕ್, ಕೈಗೆ ಗ್ಲೌಸ್‌ಗಳನ್ನು ಅಳವಡಿಸಬೇಕು.
– ಗ್ರಾಹಕರಿಗೆ ಸೇವೆ ನೀಡಿದ ಬಳಿಕ ಸಾಬೂನಿನಲ್ಲಿ ಕೈ ತೊಳೆಯಬೇಕು. ಗ್ರಾಹಕರು ಬಂದ ತತ್‌ಕ್ಷಣ ಅವರಿಗೆ ಸ್ಯಾನಿಟೈಸರ್‌ನಲ್ಲಿ ಕೈಯನ್ನು ಸ್ವತ್ಛಗೊಳಿಸುವಂತೆ ತಿಳಿಸಬೇಕು.
– ಅಂಗಡಿಯಲ್ಲಿ ಇಬ್ಬರು ಕ್ಷೌರಿಕರು ಸೇವೆ ನೀಡಬೇಕು. ಈ ಕುರ್ಚಿಯ ಅಂತರವೂ ಒಂದು ಮೀಟರ್‌ನಷ್ಟು ಇರಬೇಕು.
– ಒಮ್ಮೆ ಗ್ರಾಹಕರಿಗೆ ಹಾಕಿದ ಬಟ್ಟೆಗಳನ್ನು ಮತ್ತೂಬ್ಬ ಗ್ರಾಹಕರಿಗೆ ಹಾಕುವಂತಿಲ್ಲ. ಬಟ್ಟೆಗಳು ಸ್ವತ್ಛತೆಗೊಂಡ ಬಳಿಕವೇ ಉಪಯೋಗಿಸಬೇಕು.
– ಸವಿತಾ ಸಮಾಜದ ಪ್ರತಿಯೋರ್ವರು ಆರೋಗ್ಯ ಸೇತು ಆ್ಯಪ್‌ ಮೊಬೈಲಿಗೆ ಡೌನ್‌ಲೋಡ್‌ ಮಾಡಿಕೊಳ್ಳಬೇಕು.
– ಪತ್ರಿಕಾಗೋಷ್ಠಿಯಲ್ಲಿ ಪ್ರಧಾನ ಕಾರ್ಯದರ್ಶಿ ಸದಾಶಿವ ಬಂಗೇರ ಕುರ್ಕಾಲು, ಕೋಶಾಧಿಕಾರಿ ಶೇಖರ ಸಾಲ್ಯಾನ್‌ ಆದಿಉಡುಪಿ, ಗೌರವಾಧ್ಯಕ್ಷ ಗೋವಿಂದ ಭಂಡಾರಿ, ಉಡುಪಿ ತಾಲೂಕು ಸವಿತಾ ಸಮಾಜದ ಅಧ್ಯಕ್ಷ ರಾಜು ಸಿ.ಭಂಡಾರಿ ಕಿನ್ನಿಮೂಲ್ಕಿ, ಜಿಲ್ಲಾ ಸಂಘಟನ ಕಾರ್ಯದರ್ಶಿ ಯು.ಶಂಕರ್‌ ಸಾಲ್ಯಾನ್‌ ಕಟಪಾಡಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Sensible voters know who to win: Yatnal

Vijayapura; ಯಾರನ್ನು ಗೆಲ್ಲಿಸಬೇಕೆಂದು ಪ್ರಜ್ಞಾವಂತ ಮತದಾರರಿಗೆ ಗೊತ್ತಿದೆ: ಯತ್ನಾಳ್

1-ckm-rsrt-close

Tourists ಗಮನಕ್ಕೆ: ಈ 2 ದಿನಗಳ ಕಾಲ ಚಿಕ್ಕಮಗಳೂರಿನ‌ ಎಲ್ಲ ಹೋಂ ಸ್ಟೇ, ರೆಸಾರ್ಟ್‌ ಬಂದ್!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-

ಕಾರ್ಯಕರ್ತರ ಸಭೆ; ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆಗೆ ಬೆಂಬಲ ನೀಡಿ ಗೆಲ್ಲಿಸುವಂತೆ ಮನವಿ

2-

ಸಂಸದರ ವಿರುದ್ಧ ಸುದ್ದಿ ಹರಿಬಿಟ್ಟು,ಪೊಲೀಸ್ ಪ್ರಕರಣ ಎದುರಿಸಿದ್ದವರಿಂದ ಪಾಠ ಕಲಿಯಬೇಕಾಗಿಲ್ಲ

ಕಾಲರಾ ರೋಗ ತಡೆಗೆ ಸಕಲ ಮುನ್ನೆಚ್ಚರಿಕೆ; ತೆರೆದ ಸ್ಥಿತಿಯಲ್ಲಿ ಆಹಾರೋತ್ಪನ್ನ ಮಾರಾಟ ಅಪಾಯಕಾರಿ

ಕಾಲರಾ ರೋಗ ತಡೆಗೆ ಸಕಲ ಮುನ್ನೆಚ್ಚರಿಕೆ; ತೆರೆದ ಸ್ಥಿತಿಯಲ್ಲಿ ಆಹಾರೋತ್ಪನ್ನ ಮಾರಾಟ ಅಪಾಯಕಾರಿ

Former Prime Minister ಇಂದಿರಾ ಗಾಂಧಿಗೆ ಪುನರ್‌ಜನ್ಮ ನೀಡಿ, ಪ್ರಧಾನಿಯಾಗಿಸಿದ ಕ್ಷೇತ್ರ

Former Prime Minister ಇಂದಿರಾ ಗಾಂಧಿಗೆ ಪುನರ್‌ಜನ್ಮ ನೀಡಿ, ಪ್ರಧಾನಿಯಾಗಿಸಿದ ಕ್ಷೇತ್ರ

ಶ್ರೀಕೃಷ್ಣನಿಗೆ ಪಾರ್ಥಸಾರಥಿ ಸುವರ್ಣ ರಥ: ಪುತ್ತಿಗೆ ಶ್ರೀ ಸಂಕಲ್ಪ

Udupi; ಶ್ರೀಕೃಷ್ಣನಿಗೆ ಪಾರ್ಥಸಾರಥಿ ಸುವರ್ಣ ರಥ: ಪುತ್ತಿಗೆ ಶ್ರೀ ಸಂಕಲ್ಪ

MUST WATCH

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

ಹೊಸ ಸೇರ್ಪಡೆ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Loksabha

Udupi Chikmagalur Lok Sabha Election: ಮಹಿಳಾ ಮತದಾರರೇ ಅಧಿಕ

ಮೂಡಿಗೆರೆ: ನೆಮ್ಮದಿ ಕಳೆದುಕೊಂಡ ಜನರಿಂದ ತಕ್ಕ ಉತ್ತರ- ಕೆ.ಜಯಪ್ರಕಾಶ್‌ ಹೆಗ್ಡೆ

ಮೂಡಿಗೆರೆ: ನೆಮ್ಮದಿ ಕಳೆದುಕೊಂಡ ಜನರಿಂದ ತಕ್ಕ ಉತ್ತರ- ಕೆ.ಜಯಪ್ರಕಾಶ್‌ ಹೆಗ್ಡೆ

3-

ಕಾರ್ಯಕರ್ತರ ಸಭೆ; ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆಗೆ ಬೆಂಬಲ ನೀಡಿ ಗೆಲ್ಲಿಸುವಂತೆ ಮನವಿ

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.