ಬೆಂಗಳೂರಿನಲ್ಲಿ ವಿಷ ಸೇವಿಸಿ ಸ್ಯಾಂಡಲ್ ವುಡ್ ನಟಿ ಚಂದನ ಆತ್ಮಹತ್ಯೆ
Team Udayavani, Jun 1, 2020, 3:52 PM IST
ಬೆಂಗಳೂರು : ಸ್ಯಾಂಡಲ್ ವುಡ್ ನಟಿ ಚಂದನ ತನ್ನ ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾವರೆ ಕೆರೆಯ ಕೃಷ್ಣ ಮೂರ್ತಿ ಲೇ ಔಟ್ ನಲ್ಲಿ ಸೋಮವಾರ ನಡೆದಿದೆ.
ಕಳೆದ ಮೂರು ದಿನಗಳ ಹಿಂದೆ ವಿಷ ಸೇವಿಸಿದ ನಟಿ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಿಗ್ಗೆ ಸಾವನ್ನಪ್ಪಿದ್ದಾರೆ.ಸಾಯುವ ಮೊದಲು ನಟಿ ಸೆಲ್ಫಿ ವಿಡಿಯೋ ಮಾಡಿದ್ದು ತನ್ನ ಪ್ರಿಯಕರ ದಿನೇಶ್ ತನ್ನನ್ನು ಮದುವೆಯಾಗುವುದಾಗಿ ನಂಬಿಸಿ ಮೋಸ ಮಾಡಿದ್ಧರಿಂದ ಮನನೊಂದು ಆತ್ಮಹತ್ಯೆಗೆ ಶರಣಾಗುವುದಾಗಿ ತಿಳಿಸಿದ್ದಾರೆ.
ಸಿನೆಮಾ,ಕಿರುತೆರೆ ಹಾಗೂ ಹಲವು ಜಾಹೀರಾತುಗಳಲ್ಲಿ ನಟಿ ಚಂದನ ಕಾಣಿಸಿಕೊಂಡಿದ್ದರು.
ವಿಷ ಸೇವಿಸಿದ ಸಂದರ್ಭ ದಿನೇಶ್ ಚಂದನರನ್ನು ಆಸ್ಪತ್ರೆಗೆ ದಾಖಲಿಸಿದ್ದು ಸಾವನ್ನಪ್ಪಿರುವ ಸುದ್ದಿ ತಿಳಿಯುತ್ತಿದ್ದಂತೆ ಪ್ರಿಯಕರ ದಿನೇಶ್ ತಲೆಮರೆಸಿಕೊಂಡಿದ್ದಾನೆ, ಸದ್ದುಗುಂಟೆ ಪಾಳ್ಯ ಪೊಲೀಸರು ದಿನೇಶ್ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Daily Horoscope: ಹಿತವಾದುದನ್ನು ಮಾತ್ರ ಆರಿಸಿಕೊಳ್ಳುವುದು ವಿವೇಕಿಗಳ ಲಕ್ಷಣ
Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?
21 ಕಾಂಗ್ರೆಸ್ ಅಭ್ಯರ್ಥಿ ಪಟ್ಟಿ ಇಂದು?ದಿಲ್ಲಿಯಲ್ಲಿ ಮಂಗಳವಾರ ಪಕ್ಷದ ಚುನಾವಣ ಸಮಿತಿ ಸಭೆ
AI; ನಿಮ್ಮ ಮಕ್ಕಳ ‘ಧ್ವನಿ’ ಕೇಳಿ ಮೋಸ ಹೋಗದಿರಿ ಜೋಕೆ!
Kerala-ಕರ್ನಾಟಕ-ತಮಿಳುನಾಡು ತ್ರಿಜಂಕ್ಷನ್: ಮತ್ತೆ ನಕ್ಸಲರ ಸದ್ದು?