ಸಂತೆಕಟ್ಟೆ ಕೊಲೆ ಪ್ರಕರಣ: ಕಿರುಕುಳ, ಮದುವೆ ವಿಳಂಬವೇ ಕೊಲೆಗೆ ಕಾರಣ :ಯುವತಿ ಪೋಷಕರ ಹೇಳಿಕೆ
Team Udayavani, Sep 4, 2021, 6:21 PM IST
ಉಡುಪಿ : ನಿರಂತರ ಕಿರುಕುಳ ಹಾಗೂ ಹುಡುಗ ಹಾಗೂ ಆತನ ಮನೆಯವರು ಮದುವೆಯಾಗಲು ವಿಳಂಬ ಮಾಡಿದ್ದೇ ಸೌಮ್ಯಾ ಭಂಡಾರಿ ಕೊಲೆಗೆ ಕಾರಣ ಎಂದು ಆಕೆಯ ಮನೆಯವರು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಸಂದೇಶ್ ಕುಲಾಲ್ನ ಮನೆಗೆ ಮದುವೆ ವಿಚಾರದ ಬಗ್ಗೆ ಮಾತುಕತೆಗೆಂದು ಹಲವಾರು ಬಾರಿ ತೆರಳಿದಾಗಲೂ ಸೂಕ್ತ ಉತ್ತರ ನೀಡುತ್ತಿರಲಿಲ್ಲ. ಒಂದು ಬಾರಿ ಹೋದಾಗ ಮಾವನಿಗೆ ಮದುವೆಯಾಗಬೇಕು ಅಂದಿದ್ದರು. ಅನಂತರ ಅಣ್ಣನಿಗೆ ಮದುವೆಯಾದ ಬಳಿಕ ಆಗುವುದಾಗಿ ತಿಳಿಸಿದ್ದರು. ಈ ನಡುವೆ ರಿಜಿಸ್ಟರ್ಡ್ ಮದುವೆಯಾದರೂ ಆಗು ಎಂದು ಕೇಳಿಕೊಂಡರೂ ಆತ ಹಾಗೂ ಆತನ ಮನೆಯವರು ಒಪ್ಪಿರಲಿಲ್ಲ. ಇದರಿಂದ ಬೇಸತ್ತಿದ್ದ ಸೌಮ್ಯಾ ಅವರು ಬೇರೆ ಮದುವೆಗೆ ತಯಾರಾಗಿದ್ದರು. ನಿಶ್ಚಿತಾರ್ಥವಾಗಿ ವಿವಾಹ ದಿನಾಂಕವೂ ನಿಗದಿಯಾಗಿತ್ತು. ಈ ನಡುವೆ ಇಷ್ಟೆಲ್ಲ ಘಟನೆ ನಡೆದಿದೆ ಎಂದು ಆಕೆಯ ಮನೆಯವರು ಕಣ್ಣೀರು ಸುರಿಸಿದರು.
ಕೆಲಸಕ್ಕೆ ರಾಜೀನಾಮೆ ನೀಡಿದ್ದಳು
ಸೌಮ್ಯಾ ಭಂಡಾರಿಯು ಕೊಲೆಯಾದ ಸಂದರ್ಭಕ್ಕೂ ಮುನ್ನ ತಾನು ಕರ್ತವ್ಯ ನಿರ್ವಹಿಸುವ ಬ್ಯಾಂಕ್ಗೆ ರಾಜೀನಾಮೆ ನೀಡಿ ಬಂದಿದ್ದಳು. ಇದೇ ತಿಂಗಳಿಗೆ ಮದುವೆ ದಿನಾಂಕ ನಿಗದಿಯಾಗಿದ್ದ ಕಾರಣಕ್ಕೆ ರಾಜೀನಾಮೆ ನೀಡಿದ್ದಳು. ಸಂದೇಶ್ ಕುಲಾಲ್ಗೆ ಕುಡಿತದ ವ್ಯಸನವೂ ಇತ್ತು ಎಂದು ಅವರು ತಿಳಿಸಿದ್ದಾರೆ. ಸೌಮ್ಯಾಳಿಂದ ಕೆಲವೊಂದು ಬಾರಿ ಸಣ್ಣಪುಟ್ಟ ಕೆಲಸಗಳನ್ನೂ ಈತ ಪುಕ್ಸಟ್ಟೆಯಾಗಿ ಮಾಡಿಸಿಕೊಳ್ಳುತ್ತಿದ್ದ. ಈಕೆ ಕೆಲಸ ನಿರ್ವಹಿಸುವ ಬ್ಯಾಂಕ್ಗೂ ಬಂದು ಆತ ಕಿರುಕುಳ ನೀಡುತ್ತಿದ್ದ. ಪದೇ ಪದೇ ಫೋನ್ ಕರೆಯನ್ನೂ ಮಾಡುತ್ತಿದ್ದ ಈ ಬಗ್ಗೆ ಉಡುಪಿ ಮಹಿಳಾ ಠಾಣೆಗೆ 1 ತಿಂಗಳ ಹಿಂದೆ ದೂರು ನೀಡಿ ಆತನಿಗೆ ಎಚ್ಚರಿಕೆಯನ್ನೂ ನೀಡಲಾಗಿತ್ತು ಎಂದರು.
ಪತ್ರಿಕಾಗೋಷ್ಠಿಯಲ್ಲಿ ಸೌಮ್ಯಾ ಅವರ ತಾಯಿ ಸುಶೀಲಾ, ಅಣ್ಣ ಸುನಿಲ್, ಪತ್ನಿ ನಿಕ್ಷಿತಾ, ಪ್ರಮುಖರಾದ ಜಗದೀಶ್, ಅಶೋಕ್ ಕುಮಾರ್ ಅಲೆವೂರು, ಸೋಮಶೇಖರ ಭಂಡಾರಿ ಉಪಸ್ಥಿತರಿದ್ದರು.
ಇದನ್ನೂ ಓದಿ :ಹಳೆಯಂಗಡಿ : ಮನೆಯ ಮೇಲ್ಛಾವಣಿ ಕುಸಿದು ಬಿದ್ದು ಮಹಿಳೆ ಗಂಭೀರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು
Udupi; ಎ. 24ರ ಬಳಿಕ ಹೊರಗಿನವರು ಕ್ಷೇತ್ರದಲ್ಲಿರುವಂತಿಲ್ಲ: ಜಿಲ್ಲಾಧಿಕಾರಿ
Kota Srinivas Poojary; ಮೀನುಗಾರರ ಸಮಸ್ಯೆ, ಬೇಡಿಕೆಗಳಿಗೆ ಧ್ವನಿಯಾಗುವೆ
Veerappa Moily; ದೇಶಕ್ಕೆ ಕ್ರಿಕೆಟ್ ಕಾಮೆಂಟ್ರಿಯನ್ ಬೇಕಿಲ್ಲ
Manipal; ಟ್ಯಾಪ್ಮಿ 38ನೇ ಘಟಿಕೋತ್ಸವ: 510 ಎಂಬಿಎ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ
MUST WATCH
ಹೊಸ ಸೇರ್ಪಡೆ
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ
PM Modi:ನನ್ನ 90 ಸೆಕೆಂಡ್ ಭಾಷಣ ಕಾಂಗ್ರೆಸ್, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ
Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು
ಕೇಜ್ರಿವಾಲ್, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್
Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ