Dharwad: ಹೈಕಮಾಂಡ್ ಒಪ್ಪಿದರೆ ದಿಂಗಾಲೇಶ್ವರ ಶ್ರಿಗಳಿಗೆ ಬೆಂಬಲ: ಸಚಿವ ಲಾಡ್
Team Udayavani, Apr 10, 2024, 3:39 PM IST
ಧಾರವಾಡ : ರಾಜಕೀಯವಾಗಿ ಧಾರವಾಡ ಲೋಕಸಭೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಹಿಂದಕ್ಕೆ ಪಡೆಯುವ ಕುರಿತು ಹೈಕಮಾಂಡ್ ನಿರ್ಧಾರ ತೆಗೆದುಕೊಂಡರೆ ದಿಂಗಾಲೇಶ್ವರ ಸ್ವಾಮೀಜಿಗೆ ಖಂಡಿತವಾಗಿಯೂ ಬೆಂಬಲಿಸುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿದರು.
ಬುಧವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸದ್ಯಕ್ಕೆ ವಿನೋದ್ ಅಸೂಟಿ ಅವರಿಗೆ ಬಿ ಫಾರ್ಮ್ ನೀಡಿದ್ದು, ಶೇ.೭೦ ರಷ್ಟು ಚುನಾವಣಾ ಪ್ರಚಾರ ಕೆಲಸವನ್ನು ಮಾಡಿ ಮುಗಿಸಿದ್ದೇವೆ. ಇದೀಗ ದಿಂಗಾಲೇಶ್ವರ ಸ್ವಾಮೀಜಿ ಅವರನ್ನು ಅಭ್ಯರ್ಥಿಯನ್ನಾಗಿ ಕಣದಲ್ಲಿ ಇಳಿಸಿ ಕಾಂಗ್ರೆಸ್ ಹೈ ಕಮಾಂಡ್ ಬೆಂಬಲ ಸೂಚಿಸಲು ನಿರ್ಧಾರ ತೆಗೆದುಕೊಂಡರೆ ಆಗ ಖಂಡಿತವಾಗಿಯೂ ಅವರ ಪರವಾಗಿ ಕೆಲಸ ಮಾಡಲೇಬೇಕಾಗುತ್ತದೆ ಎಂದು ಹೇಳಿದ್ದಾರೆ.
ಈ ವಿಚಾರದಲ್ಲಿ ಮಾಧ್ಯಮಗಳು ಡಿ.ಕೆ.ಶಿವಕುಮಾರ್ ಅವರನ್ನು ಪ್ರಶ್ನಿಸಿ ಉತ್ತರ ಪಡೆದುಕೊಳ್ಳುವುದು ಸೂಕ್ತ. ಆದರೆ ದಿಂಗಾಲೇಶ್ವರ ಸ್ವಾಮೀಜಿ ಅವರು ಕೂಡ ಸಾಕಷ್ಟು ಜನರಿಗೆ ಗೊತ್ತಿದ್ದವರು, ಉತ್ತಮ ವಾಗ್ಮಿಗಳು, ಅವರ ಪ್ರವಚನಕ್ಕೆ ಸಾವಿರಾರು ಜನ ಸೇರುತ್ತಾರೆ. ನಾನು ಕೂಡ ಅವರ ಪ್ರವಚನ ಕೇಳಿದ್ದೇನೆ. ಸದ್ಯಕ್ಕೆ ವೈಯಕ್ತಿಕವಾಗಿ ನನಗಂತೂ ಅವರ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಒಂದು ವೇಳೆ ಅಂತಹ ಪ್ರಸಂಗ ಬಂದಾಗ ಬೆಂಬಲಿಸುವುದು ಅನಿವಾರ್ಯವಾಗುತ್ತದೆ ಎಂದು ಸಚಿವ ಲಾಡ್ ಹೇಳಿದ್ದಾರೆ.
ಇದನ್ನೂ ಓದಿ: Lok Sabha Election: ಏಪ್ರಿಲ್ 14ರಂದು ಪ್ರಧಾನಿ ಮಂಗಳೂರಿಗೆ… ಸಮಾವೇಶದ ಬದಲು ರೋಡ್ ಶೋ…
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ