ಮುಖಂಡರೇ ಮೇಲ್ಪಂಕ್ತಿ ಆಗಲಿ

"ಮೋದಿ 2.0ರ ಒಂದು ವರ್ಷ' ಸಮಾರೋಪದಲ್ಲಿ ಸಂತೋಷ್‌

Team Udayavani, Jul 7, 2020, 6:20 AM IST

ಮುಖಂಡರೇ ಮೇಲ್ಪಂಕ್ತಿ ಆಗಲಿ

ಬೆಂಗಳೂರು: ಬಹುತೇಕ ರಾಜ್ಯಗಳಿಗೆ ವ್ಯಾಪಿಸಿರುವ ಕೋವಿಡ್-19 ಸಮಸ್ಯೆ ಎದುರಿಸುವಲ್ಲಿ ಆತಂಕ, ಉದ್ವೇಗ ಬೇಡ. ಆರೋಗ್ಯ ವ್ಯವಸ್ಥೆ ಜತೆಗೆ ವ್ಯಕ್ತಿಗತ ಎಚ್ಚರಿಕೆಗಳ ಮೂಲಕ ಇನ್ನೂ ನಾಲ್ಕು ತಿಂಗಳು ಅದನ್ನು ಎದುರಿಸಬೇಕಾಗಿದೆ. ಪಕ್ಷದ ನಾಯಕರು, ಮುಖಂಡರು ನಿಯಮಗಳನ್ನು ಪಾಲಿಸುವ ಮೂಲಕ ಮೇಲ್ಪಂಕ್ತಿಯಾಗಬೇಕು.

ಸಮಸ್ಯೆಯಲ್ಲಿ ಇರುವವರಿಗೆ ಕಾರ್ಯಕರ್ತರು ನೆರವಾಗಬೇಕು ಎಂದು ಬಿಜೆಪಿ ರಾಷ್ಟ್ರೀಯ ಸಂಘಟನ ಪ್ರಧಾನ ಕಾರ್ಯದರ್ಶಿ ಬಿ.ಎಲ್‌. ಸಂತೋಷ್‌ ಕರೆ ನೀಡಿದರು.

“ಮೋದಿ 2.0ರ ಒಂದು ವರ್ಷ’ ಅಭಿಯಾನ ಸಮಾರೋಪದ ಹಿನ್ನೆಲೆಯಲ್ಲಿ ದಿಲ್ಲಿಯಿಂದ ವೀಡಿಯೋ ಸಂವಾದದ ಮೂಲಕ ಸಮಾರೋಪ ಭಾಷಣ ಮಾಡಿದ ಅವರು, ನಾಲ್ಕು ತಿಂಗಳುಗಳಿಂದ ಪಕ್ಷದ ಕಾರ್ಯಕರ್ತರು ಸಂಕಷ್ಟದಲ್ಲಿರುವ ಜನರಿಗೆ ನೆರವಾಗಿದ್ದು, ಮನಸ್ಸಿಗೆ ಧನ್ಯತೆ, ಆನಂದ ಕೊಡುವ ಕ್ಷಣಗಳಲ್ಲಿ ನಾವಿದ್ದೇವೆ. ಈ ಅವಧಿಯಲ್ಲಿ ಸೋಂಕಿನಿಂದ ಮೃತಪಟ್ಟವರ ಬಗ್ಗೆ ನೋವಿದೆ. ಜನತಾ ಕರ್ಫ್ಯೂ ಘೋಷಿಸಿದ ಕ್ಷಣದಿಂದ ಹೊಸ ಚಟುವಟಿಕೆ, ಸವಾಲಿಗೆ ಸಜ್ಜಾದ ರಾಜಕೀಯ ಪಕ್ಷದ ಕಾರ್ಯಕರ್ತರು ಸಾಮಾನ್ಯರ ಕಣ್ಣೀರು, ತಲ್ಲಣ ಕಡಿಮೆ ಮಾಡುವುದನ್ನು ಕಲಿಯುತ್ತ ಸ್ಪಂದಿಸಿದ್ದಾರೆ. ಇದನ್ನು ಮುಂದುವರಿಸಬೇಕು ಎಂದು ಸಲಹೆ ನೀಡಿದರು.

ಕೆಲವೆ ರಾಜ್ಯಗಳಲ್ಲಿ ಸೋಂಕು ತೀವ್ರ ಕಡಿಮೆಯಿದ್ದರೆ, ಇನ್ನು ಕೆಲವೆಡೆ ಉಲ್ಬಣಿಸುತ್ತಿದೆ. ಇದನ್ನು ಎದುರಿಸಲು ಆತ್ಮವಿಶ್ವಾಸ ಇರಬೇಕು. ಸರಕಾರದ ಜತೆಗೆ ಆರೋಗ್ಯ ವ್ಯವಸ್ಥೆ ಸರಿಪಡಿಸಲು ಕಾರ್ಯಕರ್ತರು, ಸಮಾಜದ ಸಜ್ಜನ ವರ್ಗ ಕೈಜೋಡಿಸಬೇಕು ಎಂದು ಮನವಿ ಮಾಡಿದರು.

ವೈಯಕ್ತಿಕವಾಗಿ ಎಚ್ಚರಿಕೆ ವಹಿಸಬೇಕು. ಕೈಗಳನ್ನು ಸ್ವತ್ಛವಾಗಿ ಇರಿಸಿಕೊಳ್ಳಬೇಕು. ಸಾರ್ವಜನಿಕ ಜೀವನದಲ್ಲಿರುವ ಪ್ರಮುಖರು ಇನ್ನೂ ನಾಲ್ಕೈದು ತಿಂಗಳು ವ್ರತದ ರೀತಿಯಲ್ಲಿ ಜನಸಂಪರ್ಕ ಬಿಡಬೇಕು. ಸಾಮಾಜಿಕ ದೂರ, ಶಾರೀರಿಕ ಅಂತರ ಕಾಯ್ದುಕೊಂಡರೆ ಸೋಂಕಿನಿಂದ ಬಚಾವಾಗ ಬಹುದು. ದೇಶ ಕೂಡ ಪಾರಾಗಬಹುದು ಎಂದರು.

ಕೋವಿಡ್-19 ಸಂದರ್ಭದಲ್ಲಿ ಗರಿಷ್ಠ ಪ್ರಮಾಣದ ಎಚ್ಚರಿಕೆ ಅನುಸರಿಸಬೇಕು. ಎಲ್ಲ ಮುಖಂಡರು ಮೇಲ್ಪಂಕ್ತಿ, ಆದರ್ಶ ರಾಗಬೇಕು. ಸರಕಾರದ ತಪ್ಪುಗಳನ್ನು ಸರಿಪಡಿಸಲು ಧನಾತ್ಮಕ ಪಾತ್ರ ವಹಿಸಬೇಕು ಎಂದು ಕಿವಿಮಾತು ಹೇಳಿದರು.

ಕಾರ್ಯಕರ್ತರ ಚಟುವಟಿಕೆಗೆ ಧನ್ಯತೆ
ಬಿಜೆಪಿ ಕಾರ್ಯಕರ್ತರ ಚಟುವಟಿಕೆಗೆ ಧನ್ಯತೆ ಇದೆ. ನಾಲ್ಕು ತಿಂಗಳಲ್ಲಿ ಕೇಂದ್ರ ಮತ್ತು ರಾಜ್ಯ ಸರಕಾರಗಳಿಗೆ ಭುಜಕ್ಕೆ ಭುಜ ಕೊಟ್ಟು ಸಮಾಜದ ಕಟ್ಟಕಡೆಯ ಬಡವನ ಕಣ್ಣೀರು ಒರೆಸುವ ಪ್ರಯತ್ನ ಮಾಡಿದ್ದೇವೆ. “ಸೇವೆಯೇ ಸಂಘಟನೆ’ ಎಂಬ ಪ್ರಧಾನಿಯವರ ಧ್ಯೇಯವಾಕ್ಯದಂತೆ ಮುನ್ನಡೆಯಬೇಕು ಎಂದು ಕರೆ ನೀಡಿದರು.

ಕರ್ನಾಟಕದಲ್ಲೂ ಉತ್ತಮವಾಗಿ ಕೆಲಸ ನಡೆದಿದೆ. ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರಕಾರ ಮತ್ತು ಸಿಎಂ ಯಡಿಯೂರಪ್ಪ ನೇತೃತ್ವದ ಸರಕಾರದ ಕೆಲಸ ಗಳಿಗೆ ಇನ್ನೂ ಹಲವು ತಿಂಗಳ ಕಾಲ ಹೆಜ್ಜೆಗೆ ಹೆಜ್ಜೆ ಜೋಡಿಸಬೇಕು ಎಂದು ಮನವಿ ಮಾಡಿದರು.

ದಿಲ್ಲಿಯಲ್ಲಿ ರಾಜ್ಯ ಬಿಜೆಪಿ ಉಸ್ತುವಾರಿ ಮುರಳೀಧರ ರಾವ್‌, ಸಚಿವ ಡಿ.ವಿ. ಸದಾನಂದ ಗೌಡ ಉಪಸ್ಥಿತರಿದ್ದರೆ ರಾಜ್ಯ ಬಿಜೆಪಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಡಿಸಿಎಂ ಗೋವಿಂದ ಕಾರಜೋಳ, ಬಿಜೆಪಿ ರಾಜ್ಯಾಧ್ಯಕ್ಷ ಸಂಸದ ನಳಿನ್‌ ಕುಮಾರ್‌ ಕಟೀಲು ಉಪಸ್ಥಿತರಿದ್ದರು. ಸಿಎಂ ಯಡಿಯೂರಪ್ಪ ಕುಟುಂಬ ಸದಸ್ಯ ರೊಂದಿಗೆ ಸಮಾರೋಪ ಸಮಾರಂಭ ವೀಕ್ಷಿಸಿದರು.

ಟಾಪ್ ನ್ಯೂಸ್

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.