ಸಪೋಟ ಕೃಷಿ ಹೇಗೆ ? ನಿರ್ವಹಣೆ ಬಲು ಸುಲಭ

ಸಪೋಟ ಮಧ್ಯಮಗಾತ್ರದ ಮರವಾಗಿದ್ದು, ತಿಳಿ ಹಸುರು ಬಣ್ಣದ ಎಲೆಗಳನ್ನು ಹೊಂದಿವೆ.

Team Udayavani, Nov 27, 2020, 4:27 PM IST

ಸಪೋಟ ಕೃಷಿ ಹೇಗೆ ? ನಿರ್ವಹಣೆ ಬಲು ಸುಲಭ

ಚಿಕ್ಕು ಅಥವಾ ಸಪೋಟ ಪ್ರಮುಖ ಹಣ್ಣುಗಳಲ್ಲೊಂದು. ಇದು ದೀರ್ಘ‌ಕಾಲಿಕ ಬೆಳೆ ಕೂಡ ಹೌದು. ಚೆನ್ನಾಗಿ ಬಿಸಿಲು ಬೀಳುವ ಪ್ರದೇಶಗಳಲ್ಲಿ ಸಪೋಟ ಕೃಷಿ ಮಾಡಬಹುದು. ಇದು ಹಲವು ವರ್ಷಗಳ ಕಾಲ ಇಳುವರಿ ನೀಡುತ್ತದೆ. ಇತರ ಕೃಷಿಗೆ ಹೋಲಿಸಿದರೆ ಇದರ ನಿರ್ವಹಣೆ ಸುಲಭ. ಕೊಯ್ಲು ಮಾಡುವ ವೇಳೆ ಕಾಯಿಗಳಿಗೆ ಪೆಟ್ಟಾಗದಂತೆ ಎಚ್ಚರ ವಹಿಸಬೇಕಾದ್ದು ಅಗತ್ಯ.

ಸಪೋಟ ಮಧ್ಯಮಗಾತ್ರದ ಮರವಾಗಿದ್ದು, ತಿಳಿ ಹಸುರು ಬಣ್ಣದ ಎಲೆಗಳನ್ನು ಹೊಂದಿವೆ. ಉರುಟು ಅಥವಾ ಅಂಡಾಕಾರದ ಕಾಯಿ ಗಳನ್ನು ಬಿಡುತ್ತವೆ. ಹಣ್ಣಿನಲ್ಲಿ 2ರಿಂದ 6ರ ವರೆಗೆ ಕಪ್ಪು ಬಣ್ಣದ ಬೀಜಗಳಿರುತ್ತವೆ.

ವೈಜ್ಞಾನಿಕವಾಗಿ ಇದು ಸಪೋಟೆಸಿ ಕುಟುಂಬಕ್ಕೆ ಸೇರಿದ್ದು, ಸಸ್ಯಶಾಸ್ತ್ರದಲ್ಲಿ ಮಣಿಕರ ಸಪೋಟ ((Manikara zapota)ಎಂದು ಕರೆಯಲಾಗು¤ತದೆ. ಸಪೋಟದ ಮೂಲ ವೆಸ್ಟ್ ಇಂಡೀಸ್‌ ಹಾಗೂ ಮೆಕ್ಸಿಕೋ ಎನ್ನಲಾಗಿದೆ. ಕರ್ನಾಟಕದ ಕರಾವಳಿ ಹಾಗೂ ಒಳನಾಡಿನಲ್ಲಿ ಪ್ರಮುಖ ತೋಟಗಾರಿಕಾ ಬೆಳೆಯಾಗಿ ಪ್ರಸಿದ್ಧಿ ಪಡೆದಿದೆ. ಇದರಲ್ಲಿ ವಿಟಮಿನ್‌ ಸಿ ಹಾಗೂ ಸಕ್ಕರೆ ಅಂಶ ಅಧಿಕ ಪ್ರಮಾಣದಲ್ಲಿದೆ.

ಇದನ್ನೂ ಓದಿ:ಏಕದಿನದ ಯಶಸ್ವಿ ಚೇಸಿಂಗ್‌ ದಾಖಲೆ: ಅಂತಿಮ ಓವರ್‌ನಲ್ಲಿ ಅತ್ಯಧಿಕ ರನ್‌ ಚೇಸ್

ಕೃಷಿ ಹೇಗೆ ?
ಸಪೋಟ ಸ್ವಲ್ಪ ದೊಡ್ಡ ಗಿಡವಾಗಿರುವುದರಿಂದ ಮತ್ತು ಬೇರುಗಳು ಹೆಚ್ಚು ಆಳದವರೆಗೆ ಹೋಗುವುದರಿಂದ ದೊಡ್ಡ ಗಾತ್ರದ ಪಾಟ್‌ ಗಳಲ್ಲಿ ಇದನ್ನು ಬೆಳೆಸಬಹುದು. ಸಾವಯವ ಗೊಬ್ಬರವನ್ನು ಮಣ್ಣಿಗೆ ಸೇರಿಸಿ ನೀರು ಹಾಕಿ ಚೆನ್ನಾಗಿ ಮಿಶ್ರಣ ಮಾಡಿ ವಾರ ಬಿಟ್ಟು ಬಳಿಕ ಬೀಜ ಬಿತ್ತಬೇಕು. ನರ್ಸರಿಗಳಿಂದ ಕಸಿ ಕಟ್ಟಿದ ಸಸಿಯನ್ನೂ ತಂದೂ ನೆಡಬಹುದು. ಗಿಡಕ್ಕೆ ನೀರು, ಗೊಬ್ಬರ, ಸೊಪ್ಪು ಹಾಕುವುದು ಉತ್ತಮ. ಆರಂಭದಲ್ಲಿ 15 ದಿನ ನಿರಂತರ ನೀರುಣಿಸುತ್ತಿರಬೇಕು. ಬಳಿಕ ಎರಡು-ಮೂರು ದಿನಗಳಿಗೊಮ್ಮೆ ನೀರು ಹಾಕಿದರೆ ಸಾಕು.

ಪ್ರತಿ ಎರಡರಿಂದ ಮೂರು ತಿಂಗಳುಗಳಿಗೊಮ್ಮೆ ಸಾವಯವಗೊಬ್ಬರ ಹಾಕಿದರೆ ಉತ್ತಮ ಇಳುವರಿ ಪಡೆಯಲು ಸಹಕಾರಿ. ಸಾಮಾನ್ಯವಾಗಿ ಚಿಕ್ಕು ನಾಟಿ
ಮಾಡಿದ 3 ವರ್ಷಗಳಲ್ಲಿ ಫ‌ಸಲು ಲಭಿಸುತ್ತದೆ. ಕಸಿ ತಳಿಗಳಾದರೆ ಇನ್ನೂ ಬೇಗನೆ ದೊರೆಯಬಹುದು. ಇದಕ್ಕೆ ಎಲೆಚುಕ್ಕಿ ರೋಗ, ಕಾಂಡ ಕೊರಕ, ಹಣ್ಣು ಕೊರಕ,
ಬಿಳಿಹೇನು, ಕರಿಹೇನು, ತಿಗಣೆ ಮೊದಲಾದ ರೋಗ,  ವಿವಿಧ ತರಹದ ಕೀಟ ಬಾಧೆ ತಡೆಯಲು ಬೋಡೋ ಮಿಶ್ರಣ, ಜೀವಾಮೃತ ಸಿಂಪಡಣೆ ಮಾಡಬಹುದು.

ತಳಿಗಳು
ಸ್ಥಳೀಯ ತಳಿ, ಅಲಹಾಬಾದ್‌, ಕಾಳಿಪಟ್ಟಿ, ಕ್ರಿಕೆಟ್‌ ಬಾಲ್, ಡಿಎಚ್‌ಎಸ್‌- 1,2, ಸಿಒ- 1 ಇತ್ಯಾದಿಗಳು ಪ್ರಮುಖ ಸಪೋಟ ತಳಿಗಳಾಗಿವೆ.

ಮಣ್ಣು ಮತ್ತು ಹವಾಗುಣ
ಸಾಮಾನ್ಯವಾಗಿ ಇದನ್ನು ಎಲ್ಲ ನಮೂನೆಯ ಮಣ್ಣಲ್ಲೂ ಬೆಳೆಯ ಬಹುದು. ಆದರೆ ಕೆಂಪು ಗೊಡ್ಡು ಮಣ್ಣು, ಫ‌ಲವತ್ತಾದ ಕಪ್ಪು ಮಣ್ಣು ಇದರ ಕೃಷಿಗೆ ಸೂಕ್ತ. ನೀರು ಇಂಗಿ ಹೋಗುವಂತಿರಬೇಕು. ಸಮಶೀತೋಷ್ಣದ ಹವಾಗುಣ, ಚೆನ್ನಾಗಿ ಬಿಸಿಲು ಬೀಳುವ ಪ್ರದೇಶ ಸಪೋಟ ಬೆಳೆಗೆ ಉತ್ತಮ.

ಟಾಪ್ ನ್ಯೂಸ್

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

Rama Navami 2024: ರಾಮ ನವಮಿ ಇತಿಹಾಸವೇನು? ಆಚರಣೆ ಮಾಡುವ ವಿಧಾನ ಹೇಗೆ…

Rama Navami 2024: ರಾಮ ನವಮಿ ಇತಿಹಾಸವೇನು? ಆಚರಣೆ ಮಾಡುವ ವಿಧಾನ ಹೇಗೆ…

Rama Navami: ಶ್ರೀ ರಾಮನ ಹೆಜ್ಜೆಗಳು ಬದುಕಿನ ಆದರ್ಶವಾಗಲಿ… ಪೇಜಾವರ ಶ್ರೀ

Rama Navami: ಶ್ರೀ ರಾಮನ ಹೆಜ್ಜೆಗಳು ಬದುಕಿನ ಆದರ್ಶವಾಗಲಿ… ಪೇಜಾವರ ಶ್ರೀ

April 17ರಂದು ಶ್ರೀರಾಮ ನವಮಿ: ಅಯೋಧ್ಯೆಯಲ್ಲಿ ವಿಶೇಷ ಪೂಜೆ, ಉತ್ಸವ

Rama Navami 2024: April 17ರಂದು ಶ್ರೀರಾಮ ನವಮಿ- ಅಯೋಧ್ಯೆಯಲ್ಲಿ ವಿಶೇಷ ಪೂಜೆ, ಉತ್ಸವ

Ram Ayodhya

Rama Navami 2024: ನವಮಿಗೆ ಬಾಲಕರಾಮನ ಹಣೆಗೆ ಸೂರ್ಯ ತಿಲಕ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.