ಮಾಜಿ ಮುಖ್ಯಮಂತ್ರಿ ಜೆ.ಹೆಚ್ ಪಟೇಲ್ ಪತ್ನಿ ಸರ್ವಮಂಗಳ ಪಟೇಲ್ ನಿಧನ
Team Udayavani, Nov 9, 2019, 10:38 PM IST
ಬೆಂಗಳೂರು : ಮಾಜಿ ಮುಖ್ಯಮಂತ್ರಿ ದಿವಂಗತ ಜೆ.ಹೆಚ್ ಪಟೇಲ್ ಅವರ ಪತ್ನಿ ಸರ್ವಮಂಗಳಮ್ಮ ಪಟೇಲ್ (84) ವಯೋಸಹಜ ಕಾಯಿಲೆಯಿಂದ ಶನಿವಾರ ನಿಧನರಾದರು.
ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಸರ್ವಮಂಗಳಮ್ಮ ಬೆಂಗಳೂರಿನಲ್ಲಿರುವ “ಪುಣ್ಯ” ನಿವಾಸದಲ್ಲಿ ನಿಧನಹೊಂದಿದರು.
ತ್ರಿಶೂಲ ಪಾಣಿ ಪಟೇಲ್,ಸತಿಶ್ ಪಟೇಲ್ ಮತ್ತು ಮಹಿಮಾ ಪಟೇಲ್ – ಮೂವರು ಗಂಡು ಮಕ್ಕಳು ಹಾಗೂ ಅಪಾರ ಸಂಖ್ಯೆಯ ಬಂಧು ಬಳಗವನ್ನು ಅವರು ಅಗಲಿದ್ದಾರೆ.
ಜೆ.ಹೆಚ್.ಪಟೇಲ್ ಅವರ ರಾಜಕೀಯ ಜೀವನದಲ್ಲಿ ಮಹತ್ವದ ಪಾತ್ರವನ್ನು ವಹಿಸಿದ್ದ ಅವರು ಕಷ್ಟದ ದಿನಗಳಲ್ಲಿಯೂ ಸಹಾಯಕರಾಗಿ ಹೆಗಲು ನೀಡಿದ್ದರು.ಅಸಿಸ್ಟಂಟ್ ಕಮಿಷನರ್ ಅವರ ಮಗಳಾಗಿದ್ದರೂ ಎಲ್ಲಿಯೂ ಅಹಂಕಾರ ಸ್ವಭಾವ ತೋರಿದವರಲ್ಲ.ಮನೆಗೆ ಬಂದ ಎಲ್ಲರನ್ನೂ ಗೌರವ ಹಾಗೂ ಉದಾರದಿಂದ ನಡೆಸಿ ಕೊಳ್ಳುತ್ತಿದ್ದರು.
ಮುಖ್ಯಮಂತ್ರಿ ಸಂತಾಪ :
ಮಾಜಿ ಮುಖ್ಯಮಂತ್ರಿ ಜೆ.ಎಚ್. ಪಟೇಲರ ಪತ್ನಿ ಶ್ರೀಮತಿ ಸರ್ವಮಂಗಳ ಪಟೇಲ್ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಸರಳತೆ, ಸಜ್ಜನಿಕೆಯ ಸಾಕಾರ ಮೂರ್ತಿ ಯಾಗಿದ್ದ ಸರ್ವಮಂಗಳ ಪಟೇಲ್ ಅವರು ಜೆ.ಎಚ್. ಪಟೇಲರ ಬದುಕಿನ ಎಲ್ಲ ಮಜಲುಗಳಲ್ಲಿ ಬೆಂಬಲವಾಗಿ ನಿಂತವರು ಎಂದು ಮುಖ್ಯಮಂತ್ರಿಗಳು ಸ್ಮರಿಸಿದ್ದಾರೆ.
ಭಗವಂತನು ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ ಹಾಗೂ ಕುಟುಂಬ ವರ್ಗದವರಿಗೆ ಈ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ಮುಖ್ಯಮಂತ್ರಿ ಯವರು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.
ನಾಳೆ ಸ್ವಗ್ರಾಮ ದಾವಣಗೆರೆ ತಾಲೂಕಿನ ಕಾರಿಗನೂರಿಗೆ ದಿವಂಗತ ಜೆ.ಎಚ್. ಅವರ ಸಮಾಧಿ ಪಕ್ಕದಲ್ಲೇ ಸರ್ವಮಂಗಳಮ್ಮ ಅಂತ್ಯಸಂಸ್ಕಾರ ನೆರವೇರಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ