ಅಣ್ಣಾಮಲೈ , ಗೋಪಿನಾಥನ್ ಈಗ ಸೆಂಥಿಲ್. ಏನಿದು ರಾಜೀನಾಮೆ ಪರ್ವ ರಹಸ್ಯ
Team Udayavani, Sep 6, 2019, 2:22 PM IST
ಕಳೆದೆರಡು ವರ್ಷಗಳಿಂದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿದ್ದ ಸಸಿಕಾಂತ್ ಸೆಂಥಿಲ್ ಶುಕ್ರವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ದಕ್ಷ ಮತ್ತು ಪ್ರಾಮಾಣಿಕ ಅಧಿಕಾರಿಯಾಗಿದ್ದ ಸಸಿಕಾಂತ ಸೆಂಥಿಲ್ ಅವರು ಜಿಲ್ಲೆಯಲ್ಲಿ ಹಲವು ಜನಪರ ಕೆಲಸಗಳಿಂದ ಜನಪ್ರಿಯರಾಗಿದ್ದರು.
ಪ್ರಜಾಪ್ರಭುತ್ವ ವ್ಯವಸ್ಥೆಯ ಗೋಡೆಗಳು ಕುಸಿಯುತ್ತಿವೆ. ಮುಂದಿನ ದಿನಗಳಲ್ಲಿ ದೇಶಕ್ಕೆ ಬಹಳಷ್ಟು ಸವಾಲುಗಳು ಎದುರಾಗಲಿದೆ. ಸಿದ್ದಾಂತಕ್ಕೆ ವಿರುದ್ದವಾಗಿ ಕೆಲಸ ಮಾಡಲು ಸಾಧ್ಯವಿಲ್ಲ ಎಂದು ಸೆಂಥಿಲ್ ತಮ್ಮ ರಾಜೀನಾಮೆ ಪತ್ರದಲ್ಲಿ ಬರೆದು ಕೊಂಡಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದತಿಯ ಸಮಯದಲ್ಲಿ ಸಾರ್ವಜನಿಕ ಸೇವೆಯಲ್ಲಿರುವುದರಿಂದ ತನ್ನ ಅಭಿಪ್ರಾಯ ವ್ಯಕ್ತಪಡಿಸಲು ಸಾಧ್ಯವಾಗುತ್ತಿಲ್ಲ ಎಂದು ದಿಯು ದಾಮನ್ ನ ಐಎಎಫ್ ಅಧಿಕಾರಿ ಕಣ್ಣನ್ ಗೋಪಿನಾಥನ್ ಆಗಸ್ಟ್ ನಲ್ಲಿ ರಾಜೀನಾಮೆ ನೀಡಿದ್ದರು. ಆದರೆ ಅವರ ರಾಜೀನಾಮೆಯನ್ನು ಇನ್ನುಕೂಡಾ ಸ್ವೀಕರಿಸಲಾಗಿಲ್ಲ.
ಖಡಕ್ ಐಪಿಎಸ್ ಅಧಿಕಾರಿಯಾಗಿದ್ದ ಅಣ್ಣಾಮಲೈ ಅವರು ಕಳೆದ ಮೇ ತಿಂಗಳಲ್ಲಿ ಸಾರ್ವಜನಿಕ ಸೇವೆಗೆ ರಾಜೀನಾಮೆ ನೀಡಿದ್ದರು. ವೈಯಕ್ತಿಕ ಕಾರಣ ನೀಡಿ ರಾಜೀನಾಮೆ ನೀಡಿದ್ದರು.
2009ರ ಕರ್ನಾಟಕ ಕೆಡೆರ್ ನ ಐಎಎಸ್ ಅಧಿಕಾರಿಯಾಗಿದ್ದ ಸಸಿಕಾಂತ್ ಸೆಂಥಿಲ್, 2017ರ ಅಕ್ಟೋಬರ್ ನಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿದ್ದರು.
40 ವರ್ಷದ ಸಸಿಕಾಂತ್ ಸೆಂಥಿಲ್ ಮೂಲತಃ ತಮಿಳುನಾಡು ರಾಜ್ಯದವರು. ತಿರುಚನಾಪಲ್ಲಿಯ ಭಾರತೀದಾಸನ್ ವಿಶ್ವವಿದ್ಯಾಲಯದಲ್ಲಿ ಎಲೆಕ್ಟ್ರಿಕಲ್ ಮತ್ತು ಕಮ್ಯುನಿಕೇಶನ್ ವಿಷಯದಲ್ಲಿ ಇಂಜಿನಿಯರಿಂಗ್ ಪದವಿ ಪಡೆದಿದ್ದಾರೆ.
2009ರಿಂದ 2012ರವರೆಗೆ ಬಳ್ಳಾರಿಯಲ್ಲಿ ಸಹಾಯಕ ಆಯುಕ್ತರಾಗಿ ಸೇವೆ ಸಲ್ಲಿಸಿದ ಸಸಿಕಾಂತ್ ಸೆಂಥಿಲ್, ನಂತರ ಶಿವಮೊಗ್ಗ ಜಿಲ್ಲಾ ಪಂಚಾಯತ್ ಸಿಇಓ ಆಗಿ ಕೆಲಸ ಮಾಡಿದ್ದರು. ಚಿತ್ರದುರ್ಗ ಮತ್ತು ರಾಯಚೂರು ಜಿಲ್ಲಾಧಿಕಾರಿಯಾಗಿ ಕೆಲಸ ನಿರ್ವಹಿಸಿದ್ದ ಸೆಂಥಿಲ್ 2016ರಲ್ಲಿ ಗಣಿ ಮತ್ತು ಭೂಗರ್ಭ ಇಲಾಖೆ ನಿರ್ದೇಶಕತರಾಗಿ ಸೇವೆ ಸಲ್ಲಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?
JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು
Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು
ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ
MUST WATCH
ಹೊಸ ಸೇರ್ಪಡೆ
Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?
JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು
Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA
LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ