ಮತ್ತೆ ಸ್ಯಾಟಲೈಟ್‌ ಫೋನ್‌ ರಿಂಗಣ : ರಾಜ್ಯದ ಗಡಿಭಾಗದ ಐದಾರು ಕಡೆ ಬಳಕೆ


Team Udayavani, Jul 5, 2021, 7:30 AM IST

ಮತ್ತೆ ಸ್ಯಾಟಲೈಟ್‌ ಫೋನ್‌ ರಿಂಗಣ : ರಾಜ್ಯದ ಗಡಿಭಾಗದ ಐದಾರು ಕಡೆ ಬಳಕೆ

ಬೆಂಗಳೂರು : ಕರಾವಳಿ ಸಹಿತ ಕರ್ನಾಟಕ – ಕೇರಳ ಗಡಿಭಾಗದ ಅರಣ್ಯ, ಗ್ರಾಮಾಂತರ ಪ್ರದೇಶಗಳಲ್ಲಿ ನಿಷೇಧಿತ ಸ್ಯಾಟಲೈಟ್‌ ಫೋನ್‌ ಮತ್ತೆ ಸದ್ದು ಮಾಡುತ್ತಿವೆ.

ಉಗ್ರ ಮತ್ತು ನಕ್ಸಲ್‌ ಹಾಗೂ ಭೂಗತ ಚಟುವಟಿಕೆಗಳಿಗಾಗಿ ಇವನ್ನು ಬಳಸಲಾಗುತ್ತಿದೆ ಎಂದು ತಿಳಿದು ಬಂದಿದೆ. ಈ ಬಗ್ಗೆ ರಾಜ್ಯ ಗುಪ್ತಚರ ಮತ್ತು ಆಂತರಿಕ ಭದ್ರತ ವಿಭಾಗ (ಐಎಸ್‌ ಡಿ) ತನಿಖೆಗೆ ಮುಂದಾಗಿದೆ.

ಕೊರೊನಾ ವಿಷಮ ಪರಿಸ್ಥಿತಿಯ ಲಾಭ ಪಡೆಯಲು ಕೆಲವು ಉಗ್ರ ಮತ್ತು ನಕ್ಸಲ್‌ ಸಂಘಟನೆಗಳ ಸದಸ್ಯರು ಸ್ಯಾಟಲೈಟ್‌ ಫೋನ್‌ ಗಳನ್ನು ಬಳಕೆ ಮಾಡುತ್ತಿದ್ದಾರೆ ಎನ್ನಲಾಗಿದೆ.

ಕೇಂದ್ರ ಗುಪ್ತಚರ ಇಲಾಖೆ ಸೂಚನೆ ಮೇರೆಗೆ ಕಾರ್ಯಾಚರಣೆ ನಡೆಸಿದಾಗ ಆರೇಳು ತಿಂಗಳುಗಳಲ್ಲಿ ರಾಜ್ಯದ 8-10 ಕಡೆಗಳಿಂದ ಸ್ಯಾಟಲೈಟ್‌ ಫೋನ್‌ ಗಳ ಮೂಲಕ ನೆರೆ ರಾಜ್ಯ, ದೇಶಗಳಿಗೆ ಕರೆ ಹೋಗಿರುವುದು ಬೆಳಕಿಗೆ ಬಂದಿದೆ.

ಆರು ತಿಂಗಳುಗಳಿಂದ ಸಕ್ರಿಯ
ಜನವರಿಯಿಂದ ರಾಜ್ಯದಲ್ಲಿ ಮತ್ತೆ ಸ್ಯಾಟಲೈಟ್‌ ಫೋನ್‌ ಬಳಕೆ ಆರಂಭವಾಗಿದ್ದು, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ದಟ್ಟಾರಣ್ಯ ಪ್ರದೇಶಗಳು, ಮೈಸೂರು, ಚಾಮರಾಜನಗರದ ಕೆಲವು ಪ್ರದೇಶಗಳಲ್ಲಿ ಲೋಕೇಶನ್‌ ಪತ್ತೆಯಾಗಿತ್ತು.

ಪ್ರಾಥಮಿಕ ತನಿಖೆಯಲ್ಲಿ ಮತ್ತೂಂದು ಸ್ಫೋಟಕ ವಿಚಾರ ಬೆಳಕಿಗೆ ಬಂದಿದ್ದು, ಕೇರಳ ಮತ್ತು ಗಡಿ ಭಾಗದ ವ್ಯಕ್ತಿಗಳೇ ಸ್ಯಾಟಲೈಟ್‌ ಫೋನ್‌ ಬಳಸುತ್ತಿದ್ದಾರೆ.

ದುಬಾೖ, ಅರಬ್‌ ರಾಷ್ಟ್ರಗಳಿಗೆ ಕರೆ
ಬಹಳಷ್ಟು ಕರೆಗಳು ದುಬಾೖ, ಅರಬ್‌ ರಾಷ್ಟ್ರಗಳಿಗೆ ಹೋಗಿರುವುದು ಪತ್ತೆಯಾಗಿದೆ. ಸೌದಿ ರಾಷ್ಟ್ರಗಳಿಂದ ಬಂದವರೇ ಸ್ಯಾಟಲೈಟ್‌ ಫೋನ್‌ ಬಳಸುತ್ತಿದ್ದಾರೆ ಎಂದು ತನಿಖೆಯಲ್ಲಿ ಕಂಡು ಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.

ಎಲ್ಲೆಲ್ಲಿಂದ ಕರೆ?
ಗುಂಡ್ಲು ಪೇಟೆ, ಎಚ್‌.ಡಿ. ಕೋಟೆ, ಮೈಸೂರು ಗ್ರಾಮಾಂತರ, ಕೊಡಗು, ಮಡಿಕೇರಿ, ಮಲೆಮಹದೇಶ್ವರ ಬೆಟ್ಟ ವ್ಯಾಪ್ತಿ, ಬೆಳ್ತಂಗಡಿ, ಬಂಟ್ವಾಳ ಮತ್ತು ಹನೂರು ತಾಲೂಕಿನ ಕಾವೇರಿ ವನ್ಯಜೀವಿ ವಲಯ ವ್ಯಾಪ್ತಿಯಲ್ಲಿ ಈ ಫೋನ್‌ಗಳು ಸಕ್ರಿಯವಾಗಿದ್ದು, ಐಎಸ್‌ಡಿ ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ.

ನಕ್ಸಲ್‌ ಪ್ರದೇಶಗಳಲ್ಲಿ ಸಕ್ರಿಯ
ಕೊರಿಯಾದ “ತುರಾಯ್‌’ ಬ್ರ್ಯಾಂಡ್‌ನ‌ ಸ್ಯಾಟಲೈಟ್‌ ಫೋನ್‌ ಬಳಕೆಯಾಗಿದೆ. ತುರಾಯ್‌ ಬ್ರ್ಯಾಂಡ್‌ನ‌ 3 ಮಾದರಿಯ ಸ್ಯಾಟಲೈಟ್‌ ಫೋನ್‌ಗಳಿದ್ದು, ಅವುಗಳ ಲೋಕೇಶನ್‌ ಪತ್ತೆ ತತ್‌ಕ್ಷಣ ಸಾಧ್ಯವಿಲ್ಲ. 24 ತಾಸುಗಳ ಬಳಿಕ ಲೋಕೇಶನ್‌ ಪತ್ತೆಯಾಗುತ್ತದೆ. ಆಗ ಸ್ಥಳ ಪರಿಶೀಲಿಸಿದಾಗ ಯಾರೂ ಇರುವುದಿಲ್ಲ. ಈ ಮಧ್ಯೆ ಕೇರಳ- ಕರ್ನಾಟಕ-ತಮಿಳುನಾಡು ಭಾಗದ ಅರಣ್ಯ ಪ್ರದೇಶದಲ್ಲಿ ನಕ್ಸಲರು ಅಧಿಕವಾಗಿದ್ದಾರೆ. ಅವರು ಸ್ಯಾಟಲೈಟ್‌ ಫೋನ್‌ ಗಳನ್ನು ಬಳಕೆ ಮಾಡಿರುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

Supreme Court slams IMA

Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್‌ ಗರಂ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್‌ ದಾಖಲು

Prajwal Revanna Case ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್‌ ದಾಖಲು

ಕಾರ್ತಿಕ್‌ ಪೆನ್‌ಡ್ರೈವ್‌ ಕೊಟ್ಟಿದ್ದು ನಿಜ: ದೇವರಾಜೇಗೌಡ

Hassan Pen Drive Case; ಕಾರ್ತಿಕ್‌ ಪೆನ್‌ಡ್ರೈವ್‌ ಕೊಟ್ಟಿದ್ದು ನಿಜ: ದೇವರಾಜೇಗೌಡ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

Supreme Court slams IMA

Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್‌ ಗರಂ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.