ರಮೇಶ್ ಯಾರ ಮಾತು ಕೇಳುವ ಪರಿಸ್ಥಿತಿಯಲ್ಲಿ ಇರಲಿಲ್ಲ : ಸತೀಶ ಜಾರಕಿಹೊಳಿ
ಅಂಬಿರಾವ್ ಪಾಟೀಲ ಮಾತನ್ನು ಬಿಟ್ಟರೆ ರಮೇಶ್ ಮತ್ಯಾರ ಮಾತನ್ನು ಕೇಳುವ ಪರಿಸ್ಥಿತಿಯಲ್ಲಿ ಇರಲಿಲ್ಲ
Team Udayavani, Mar 4, 2021, 3:01 PM IST
ಬೆಳಗಾವಿ : ರಮೇಶ್ ಜಾರಕಿಹೊಳಿ ಯಾರ ಮಾತನ್ನೂ ಕೇಳುವ ಸ್ಟೇಜ್ ನಲ್ಲಿ ಇರಲಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಮತ್ತು ಶಾಸಕ ಸತೀಶ ಜಾರಕಿಹೊಳಿ ಹೇಳಿದರು.
ಗೋಕಾಕದಲ್ಲಿ ಗುರುವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಗೋಕಾಕದಲ್ಲಿ ಪರಿಸ್ಥಿತಿ ಏನಿದೆ, ಜಾರಕಿಹೊಳಿ ಕುಟುಂಬವನ್ನು ಯಾರು ನಡೆಸುತ್ತಾರೆ ಎಂಬುದು ಗೊತ್ತಿದೆ. ರಮೇಶ್ ವೈಯಕ್ತಿಕವಾಗಿ ಇದ್ದಾರೆ. ಅವರ ಅಳಿಯ ಅಂಬಿರಾವ್ ಪಾಟೀಲ ಮಾತನ್ನು ಬಿಟ್ಟರೆ ರಮೇಶ್ ಮತ್ಯಾರ ಮಾತನ್ನು ಕೇಳುವ ಪರಿಸ್ಥಿತಿಯಲ್ಲಿ ಇರಲಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ರಮೇಶ್ ಸಿಡಿ ಪ್ರಕರಣದಲ್ಲಿ ಯುವತಿ ಹೇಳಿಕೆ ಅತೀ ಮುಖ್ಯ. ಪೊಲೀಸರು ತನಿಖೆ ನಡೆಸಿ, ಯುವತಿಗೆ ನೋಟಿಸ್ ನೀಡುವ ಮೂಲಕ ವಿಚಾರಣೆ ನಡೆಸಬೇಕು. ಬೇರೆ ಯಾರೇ ದೂರು ಕೊಟ್ಟರೂ ಅದು ಪ್ರಯೋಜನವಾಗಲ್ಲ. ಯುವತಿ ಹೇಳಿಕೆಯೇ ಪ್ರಮುಖವಾಗಿರುತ್ತದೆ ಎಂದರು.
ಪಕ್ಷ ಯಾವುದೇ ಇದ್ದರೂ ಇಂತಹ ಘಟನೆಗಳು ನಡೆಯಬಾರದು. ಹಾಗೆ ಏನಾದರೂ ಇದ್ದರೆ ನೇರವಾಗಿ ಪೊಲೀಸ್ ಠಾಣೆಗೆ ದೂರು ನೀಡಿ, ತನಿಖೆ ನಡೆಸುವಂತೆ ಆಗ್ರಹಿಸಬೇಕು. ಅದನ್ನು ಬಿಟ್ಟು ಇಂತಹ ಪ್ರಕರಣಗಳನ್ನು ರಸ್ತೆಗೆ ತರಬಾರದು ಎಂದರು.
ಸಿಡಿ ಪ್ರಕರಣ ಮುಗಿದ ಅಧ್ಯಾಯ. ಈಗಾಗಲೇ ರಮೇಶ್ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಸಂಬಂಧ ಪಟ್ಟವರಿಗೆ ಪೊಲೀಸರು ನೋಟಿಸ್ ನೀಡಿ ತನಿಖೆ ನಡೆಸಬೇಕು. ಆಗ ಸತ್ಯಾಂಶ ಹೊರಬರಲಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್ ಆಫ್ ಅಟಾರ್ನಿ, ದೂರು ದಾಖಲು