ಕನ್ನಡ ಉಳಿಸಿ ಬೆಳೆಸುವುದು ಕಾಯಕವಾಗಲಿ
ಜಾಗತೀಕರಣದಿಂದ ಕನ್ನಡ ಭಾಷೆ ಉಳಿವಿಗೆ ಹೋರಾಟ ಅಗತ್ಯ: ಮಂಜುನಾಥ್
Team Udayavani, Nov 25, 2020, 12:14 PM IST
ದೇವನಹಳ್ಳಿ: ಕನ್ನಡ ಸಾಹಿತ್ಯ, ಸಾಂಸ್ಕೃತಿಕ ಪರಂಪರೆವಿಶ್ವ ಮಾನ್ಯತೆ ಲಭಿಸಿದೆ. ವಿಶ್ವದಲ್ಲಿಕನ್ನಡ ಭಾಷಾ ಲಿಪಿಗೆ ಸ್ಥಾನಮಾನನೀಡಿರುವುದು ಹೆಮ್ಮೆಯ ವಿಷಯವಾಗಿದೆ ಎಂದು ಜಿಪಂ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷಕೆ.ಸಿ.ಮಂಜುನಾಥ್ ತಿಳಿಸಿದರು.
ತಾಲೂಕಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಅರೈವೆಲ್ನಲ್ಲಿ ಬೆಂಗಳೂರು ವಿಮಾನ ನಿಲ್ದಾಣ, ಕರ್ನಾಟಕ ಪ್ರವಾಸೋದ್ಯಮ ಟ್ಯಾಕ್ಸಿ ಚಾಲಕರ ಸಂಘದಿಂದ ನಡೆದ ಕನ್ನಡ ರಾಜ್ಯೋತ್ಸವದಲ್ಲಿ ಮಾತನಾಡಿ, ಜಾಗತೀಕರಣದ ಪ್ರಭಾವದಿಂದ ಕನ್ನಡದಲ್ಲಿಯೇ ಕನ್ನಡ ಭಾಷೆ ಉಳಿವಿಗೆ ಹೋರಾಟ ಅನಿವಾರ್ಯವಾಗಿದೆ.
ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕನ್ನಡ ರಾಜ್ಯೋತ್ಸವದ ಮೂಲಕ ಬೇರೆ ರಾಜ್ಯ, ರಾಷ್ಟ್ರಗಳ ಪ್ರಯಾಣಿಗರಿಗೆ ಕನ್ನಡ ಭಾಷೆ ಬಗ್ಗೆ ಅರಿವು ಮೂಡಿಸಿದಂತಾಗಿದೆ ಎಂದು ಹೇಳಿದರು. ಕೊರೊನಾ ಬಗ್ಗೆ ಉದಾಸೀನ ಬೇಡ: ಇಡೀ ಪ್ರಪಂಚವನ್ನೇ ಕೊರೊನಾ ಆವರಿಸಿದೆ. ಇದರ ಬಗ್ಗೆ ಯಾರು ಉದಾಸೀನತೆ ಮಾಡಬಾರದು. ರೋಗದ ಲಕ್ಷಣಗಳು ಕಾಣಿಸಿಕೊಂಡ ತಕ್ಷಣವೇ ಪರೀಕ್ಷಿಸಿಕೊಂಡು ಚಿಕಿತ್ಸೆ ಪಡೆದುಕೊಂಡರೆ ರೋಗ ಮುಕ್ತವಾಗಬಹುದು. ಆರೋಗ್ಯ ಕಡೆ ಹೆಚ್ಚಿನ ಗಮನ ಹರಿಸಬೇಕು ಎಂದು ಸಲಹೆ ನೀಡಿದರು.
ಇದನ್ನೂ ಓದಿ:ನಿವಾರ್ ಚಂಡಮಾರುತ: ಅಗತ್ಯ ಕ್ರಮಕ್ಕೆ ಸಿಎಂ ಸೂಚನೆ, ಕೆಲವು ಕಡೆ ರೆಡ್ ಅಲರ್ಟ್ ಘೋಷಣೆ
ಕೆಎಸ್ಡಿಸಿ ಉಪಾಧ್ಯಕ್ಷ ಬಸವರಾಜು, ಪ್ರಧಾನ ಕಾರ್ಯದರ್ಶಿ ನೀಲಕಂಠಪ್ಪ, ಕಾರ್ಯದರ್ಶಿ ಶ್ರೀನಿವಾಸ್, ಖಜಾಂಚಿ ಕೇಬಲ್ ಬಾಬು, ಬಿಎಐಎಲ್ನ ಆಡಳಿತ ಮಂಡಳಿಯ ಅಧಿಕಾರಿಗಳು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
MUST WATCH
ಹೊಸ ಸೇರ್ಪಡೆ
BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ
Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ
Udupi: ರಮಾಬಾಯಿ ಕೊಚ್ಚಿಕಾರ್ ಪೈ ನಿಧನ
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ