ತಾಂತ್ರಿಕ ಸಮಸ್ಯೆ: ಎಸ್ಬಿಐ ಆನ್ಲೈನ್ ಬ್ಯಾಂಕಿಂಗ್ ಸೇವೆಗಳು ತಾತ್ಕಾಲಿಕ ಸ್ಥಗಿತ
Team Udayavani, Oct 13, 2020, 3:13 PM IST
ಮಣಿಪಾಲ: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ಬಿಐ) ಆನ್ಲೈನ್ ಬ್ಯಾಂಕಿಂಗ್ ಸೇವೆಗಳು ಅಡಚಣೆಯಲ್ಲಿವೆ ಎಂದು ವರದಿಯಾಗಿದೆ.
ಆದರೆ ಎಟಿಎಂ ಮತ್ತು ಪಿಓಎಸ್ ಯಂತ್ರಗಳು ಎಂದಿನಂತೆ ಕಾರ್ಯನಿರ್ವಹಿಸುತ್ತಿವೆ ಎಂದು ತಿಳಿದುಬಂದಿದೆ. ತಾಂತ್ರಿಕ ಸಂಪರ್ಕ ಸಮಸ್ಯೆಯಿಂದಾಗಿ ಕೋರ್ ಬ್ಯಾಂಕಿಂಗ್ ವ್ಯವಸ್ಥೆ ವಿಳಂಬವಾಗುತ್ತಿದೆ ಎಂದು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಟ್ವೀಟ್ ನಲ್ಲಿ ತಿಳಿಸಿದೆ.
ಎಟಿಎಂ ಮತ್ತು ಪಿಓಎಸ್ ಹೊರತುಪಡಿಸಿ ಎಲ್ಲ ಚಾನಲ್ಗಳ ಮೇಲೆ ಇದು ಪರಿಣಾಮ ಬೀರಿವೆ. ಗ್ರಾಹಕರಿಗೆ ತಾಳ್ಮೆಯಿಂದಿರಿ ಎಂದು ಬ್ಯಾಂಕ್ ಮನವಿ ಮಾಡಿದ್ದು, ಶೀಘ್ರದಲ್ಲೇ ಯಥಾಸ್ಥಿತಿಗೆ ಬರಲಿದೆ ಎಂದು ತನ್ನ ಟ್ವೀಟ್ನಲ್ಲಿ ತಿಳಿಸಿದೆ.
We request our customers to bear with us. Normal service will resume soon.#SBI #StateBankOfIndia #ImportantNotice #YONOSBI #OnlineSBI pic.twitter.com/dDFAgmGLQl
— State Bank of India (@TheOfficialSBI) October 13, 2020
ಎಸ್ಬಿಐ ದೇಶದ ಅತಿದೊಡ್ಡ ವಾಣಿಜ್ಯ ಬ್ಯಾಂಕ್ ಆಗಿದೆ. ಆಸ್ತಿ, ಠೇವಣಿ, ಶಾಖೆಗಳು, ಗ್ರಾಹಕರು ಮತ್ತು ಉದ್ಯೋಗಿಗಳ ವಿಷಯದಲ್ಲಿ ಎಸ್ಬಿಐ ದೇಶದ ಅತಿದೊಡ್ಡ ವಾಣಿಜ್ಯ ಬ್ಯಾಂಕ್ ಎಂದೆನಿಸಿಕೊಂಡಿದೆ. ಇದು ದೇಶದ ಅತಿ ಹೆಚ್ಚು ಸಾಲ ನೀಡುವ ಬ್ಯಾಂಕ್ ಆಗಿದೆ. 30 ಜೂನ್ 2020ರ ವೇಳೆಗೆ ಬ್ಯಾಂಕ್ ಒಟ್ಟು 34 ಲಕ್ಷ ಕೋಟಿ ರೂ. ಠೇವಣಿ ಇತ್ತು. ಕರೆಂಟ್ ಮತ್ತು ಸೇವಿಂಗ್ಸ್ ಅಕೌಂಟ್ (ಸಿಎಎಸ್ಎ) ಅನುಪಾತವು ಶೇ. 45ಕ್ಕಿಂತ ಹೆಚ್ಚಾಗಿದೆ.
ದೇಶದ ಅತಿದೊಡ್ಡ ಬ್ಯಾಂಕ್ ಎಸ್ಬಿಐ ದೇಶಾದ್ಯಂತ 22 ಸಾವಿರಕ್ಕೂ ಹೆಚ್ಚು ಶಾಖೆಗಳನ್ನು ಹೊಂದಿದೆ. ಎಸ್ಬಿಐ 30ಕ್ಕೂ ಹೆಚ್ಚು ದೇಶಗಳಲ್ಲಿ ಅಸ್ತಿತ್ವದಲ್ಲಿದೆ. 6.6 ಕೋಟಿಗೂ ಹೆಚ್ಚು ಎಸ್ಬಿಐ ಗ್ರಾಹಕರು ಮೊಬೈಲ್ ಬ್ಯಾಂಕಿಂಗ್ ಮತ್ತು ಎಟಿಎಂ ಸೌಲಭ್ಯಗಳನ್ನು ಬಳಸುತ್ತಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
MUST WATCH
ಹೊಸ ಸೇರ್ಪಡೆ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…