ಶಾಲೆಗಳಲ್ಲಿ 2020-21ನೇ ಸಾಲಿನ ದಾಖಲಾತಿ ಪ್ರಕ್ರಿಯೆ ಮುಂದೂಡಿ ಆದೇಶ
Team Udayavani, Mar 24, 2020, 4:23 PM IST
ಬೆಂಗಳೂರು: ಕೋವಿಡ್-19 ಸೋಂಕು ತಡಗಟ್ಟುವಿಕೆಗೆ ಮುಂಜಾಗೃತ ಕ್ರಮವಾಗಿ ಶಾಲೆಗಳಿಗೆ ರಜೆ ನೀಡಿದ್ದು ಅದರಂತೆ 2020-21ನೇ ಸಾಲಿನ ದಾಖಲಾತಿ ಪ್ರಕ್ರಿಯೆಯನ್ನು ಮುಂದೂಡುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರು ಆದೇಶ ಹೊರಡಿಸಿದ್ದಾರೆ.
ಹಲವು ಖಾಸಗಿ ಶಾಲೆಗಳು 2020-21ರ ಸಾಲಿನ ಶುಲ್ಕವನ್ನು ಮಾರ್ಚ್ 31ರ ಮೊದಲು ಪಾವತಿ ಮಾಡಬೇಕು ಎಂದು ಪೋಷಕರಿಗೆ ಒತ್ತಾಯಿಸುತ್ತಿದೆ ಎಂಬ ದೂರು ಕೇಳಿ ಬಂದ ಹಿನ್ನಲೆ ಸಾರ್ವಜನಿಕ ಶಿಕ್ಷಣ ಇಲಾಖೆ ಈ ಆದೇಶ ಹೊರಡಿಸಿದೆ.
ಶಾಲೆಗಳಿಗೆ ಯಾವುದೇ ರೀತಿಯ ಕಾರ್ಯಗಳಿಗೆ ವಿದ್ಯಾರ್ಥಿಗಳು ಮತ್ತು ಪೋಷಕರು ಭೇಟಿ ನೀಡದಂತೆ ಸೂಕ್ತ ಕ್ರಮಕೈಗೊಳ್ಳಬೇಕು. ಶಿಕ್ಷಕ ಮತ್ತು ಸಿಬ್ಬಂದಿ ವರ್ಗದವರಿಗೆ ರಜೆ ಘೋಷಿಸಲಾಗಿದ್ದು, ಸಾರ್ವಜನಿಕರು ಶಾಲೆಗೆ ಭೇಟಿ ನೀಡುವುದನ್ನು ನಿಷೇಧಿಸಲಾಗಿದೆ.