ಹೈಕೋರ್ಟ್‌ ಆದೇಶದ ನೆಪದಲ್ಲಿ ಶುಲ್ಕಕ್ಕಾಗಿ ಕಿರುಕುಳ ಸಲ್ಲದು


Team Udayavani, Sep 18, 2021, 7:00 AM IST

ಹೈಕೋರ್ಟ್‌ ಆದೇಶದ ನೆಪದಲ್ಲಿ ಶುಲ್ಕಕ್ಕಾಗಿ ಕಿರುಕುಳ ಸಲ್ಲದು

ಖಾಸಗಿ ಶಾಲೆಗಳ ಒಕ್ಕೂಟಗಳು ಮತ್ತು ರಾಜ್ಯ ಸರಕಾರದ ನಡುವಿನ ಶಾಲಾ ಶುಲ್ಕ ವಿವಾದ ತಾರ್ಕಿಕ ಅಂತ್ಯಕ್ಕೆ ಬಂದು ನಿಂತಿದೆ. ಶೇ.15ರ ಶುಲ್ಕ ವಿನಾಯಿತಿಗೆ ಹೈಕೋರ್ಟ್‌ ಆದೇಶ ನೀಡಿದ್ದು, ಇದು ಒಂದು ರೀತಿಯಲ್ಲಿ ಹೆತ್ತವರು ಮತ್ತು ಖಾಸಗಿ ಶಾಲಾ ಸಂಸ್ಥೆಗಳ ನಡುವಿನ ಗುದ್ದಾಟವನ್ನು ನಿಲ್ಲಿಸುವ ಕ್ರಮ. ಆದರೂ ಶಾಲಾ ಶುಲ್ಕ ವಿಚಾರದಲ್ಲಿ ಹೆತ್ತವರಿಗೆ ಸಂಪೂರ್ಣವಾದ ಸಮಾಧಾನ ಸಿಕ್ಕಿಲ್ಲ. ಹಾಗೆಯೇ ಖಾಸಗಿ ಶಾಲಾ ಸಂಸ್ಥೆಗಳೂ ಸಂಪೂರ್ಣವಾಗಿ ಗೆದ್ದಿಲ್ಲ.

ಈ ಶುಲ್ಕ ನಿರ್ಧಾರ ಕಳೆದ ವರ್ಷಕ್ಕೆ ಮಾತ್ರ ಅನ್ವಯ. ಈ ವರ್ಷ ಇನ್ನೂ ಶುಲ್ಕ ನಿಗದಿಯೇ ಅಗಿಲ್ಲ. ಅಲ್ಲದೆ ಸರಕಾರವೂ ಈ ವರ್ಷ ಯಾವುದೇ ನಿರ್ಧಾರ ತೆಗೆದುಕೊಳ್ಳುವ ಗೋಜಿಗೇ ಹೋಗಿಲ್ಲ. ಇಂದಿಗೂ ಶುಲ್ಕದ ವಿಚಾರದಲ್ಲಿ ಹೆತ್ತವರು ಮತ್ತು ಖಾಸಗಿ ಶಾಲೆಗಳ ನಡುವೆ ಹಗ್ಗ ಜಗ್ಗಾಟ ನಡೆಯುತ್ತಲೇ ಇದೆ. ಕಳೆದ ಶೈಕ್ಷಣಿಕ ವರ್ಷದ ಆರಂಭದಲ್ಲೇ ಖಾಸಗಿ ಶಾಲಾ ಸಂಸ್ಥೆಗಳು ಮತ್ತು ಹೆತ್ತವರ ನಡುವೆ ಶುಲ್ಕಕ್ಕಾಗಿ ಕಿತ್ತಾಟ ನಡೆಯುತ್ತಿತ್ತು. ಆಗ ಮಧ್ಯ ಪ್ರವೇಶ ಮಾಡಿದ್ದ ರಾಜ್ಯ ಸರಕಾರ, ಕೊರೊನಾ ಕಾರಣದಿಂದಾಗಿ ಶೇ.30ರಷ್ಟು ಬೋಧನ ಶುಲ್ಕ ಕಡಿತಗೊಳಿಸುವಂತೆ ಹೇಳಿತ್ತು. ಸರಕಾರದ ಆದೇಶವನ್ನು ಜಾರಿಗೊಳಿಸುವಾಗಲೇ ಕೆಲವು ಖಾಸಗಿ ಶಾಲೆಗಳು ಹೆತ್ತವರಿಂದ ಮುಚ್ಚಳಿಕೆ ಬರೆಸಿಕೊಂಡು ಒಂದು ವೇಳೆ ಹೈಕೋರ್ಟ್‌ ನಲ್ಲಿ ತಮ್ಮ ಪರವಾಗಿ ತೀರ್ಪು ಬಂದರೆ ವಿನಾಯಿತಿ ನೀಡಿರುವ ಶುಲ್ಕ ನೀಡಬೇಕಾಗುತ್ತದೆ ಎಂದಿದ್ದವು. ಇದರಿಂದಾಗಿ ಬಹಳಷ್ಟು ಹೆತ್ತವರು ಮುಚ್ಚಳಿಕೆ ಬರೆದುಕೊಟ್ಟು, ಶೇ.70ರಷ್ಟು ಶುಲ್ಕ ಪಾವತಿಸಿದ್ದಾರೆ. ಈಗ ಶೇ.15ರಷ್ಟು ವಿನಾಯಿತಿ ನೀಡಿರುವುದರಿಂದ ಇನ್ನೂ ಶೇ.15ರಷ್ಟು ಹಳೆಯ ಶುಲ್ಕವನ್ನು ಹೆತ್ತವರು ಪಾವತಿಸಬೇಕು. ಈ ವರ್ಷದ ಶುಲ್ಕ ಕಟ್ಟಲು ಹೆತ್ತವರು ಒದ್ದಾಡುತ್ತಿರುವಾಗ ಉಳಿದ ಶೇ.15ರಷ್ಟು ಶುಲ್ಕ ಕಟ್ಟುವುದು ಕಷ್ಟವೇ ಸರಿ. ಆದರೂ ಹೈಕೋರ್ಟ್‌ ಆದೇಶ ನೀಡಿರುವುದರಿಂದ ಹೆತ್ತವರೂ ಏನೂ ಮಾಡುವಂತಿಲ್ಲ. ಈ ಬಗ್ಗೆ ಸರಕಾರ ಯಾವುದಾದರೂ ಕ್ರಮ ತೆಗೆದುಕೊಂಡರೆ ಒಳ್ಳೆಯದು. ಈ ಮೂಲಕವಾದರೂ ಹೆತ್ತವರಿಗೆ ನಿರಾಳತೆ ಸಿಗಬಹುದು.
ಜತೆಗೆ ಹೈಕೋರ್ಟ್‌ ಆದೇಶವನ್ನೇ ಮುಂದಿರಿಸಿಕೊಂಡು ಖಾಸಗಿ ಶಾಲಾ ಸಂಸ್ಥೆಗಳು ಹೆತ್ತವರ ಮೇಲೆ ಅನಗತ್ಯ ಒತ್ತಡ ಹಾಕಬಾರದು. ಜತೆಗೆ ಮಕ್ಕಳ ಮೇಲೂ ಇದರ ಪರಿಣಾಮವಾಗದಂತೆ ನೋಡಿಕೊಳ್ಳಬೇಕು. ಕಳೆದ ವರ್ಷದ ಶುಲ್ಕ ಕಟ್ಟಿದರಷ್ಟೇ ಆನ್‌ ಲೈನ್‌ ಶಾಲೆ ಅಥವಾ ಭೌತಿಕ ಶಾಲೆಗೆ ಬನ್ನಿ ಎಂದು ಹೇಳುವಷ್ಟರ ಮಟ್ಟಿಗೆ ಹೋಗಬಾರದು. ಇದಕ್ಕಿಂತ ಹೆಚ್ಚಾಗಿ ಯಾರಿಗೆ ಶುಲ್ಕ ಕಟ್ಟಲು ಸಾಮರ್ಥ್ಯವಿದೆಯೋ ಅಂಥವರಿಂದ ಮಾತ್ರ ಶುಲ್ಕ ವಸೂಲಿ ಮಾಡಿಕೊಳ್ಳಬಹುದು.

ಇದರ ಜತೆಗೆ ಖಾಸಗಿ ಶಾಲೆಗಳ ಪರಿಸ್ಥಿತಿಯೂ ಅಷ್ಟೊಂದು ಚೆನ್ನಾಗಿಲ್ಲ. ಕೊರೊನಾ ಕಾರಣದಿಂದಾಗಿ ಶಾಲೆಗಳ ಪರಿಸ್ಥಿತಿಯೂ ಸಂಕಷ್ಟದಲ್ಲಿದೆ. ಎಷ್ಟೋ ಮಂದಿ ಮಕ್ಕಳನ್ನು ಶಾಲೆಗೇ ಸೇರಿಸಿಲ್ಲ. ಹಾಗೆಯೇ ಶಾಲೆಗೆ ಸೇರಿಸಿದ್ದರೂ ಕೆಲವರು ಇನ್ನೂ ಶುಲ್ಕ ಕಟ್ಟಿಲ್ಲ. ಹೀಗಾಗಿ ಖಾಸಗಿ ಶಾಲಾ ಸಂಸ್ಥೆಗಳ ಕಷ್ಟವನ್ನು ಮನಸ್ಸಿನಲ್ಲಿ ಇರಿಸಿಕೊಂಡು ಸಾಮರ್ಥ್ಯ ಇರುವವರು ಶುಲ್ಕ ಕಟ್ಟಬಹುದು. ಇದರಿಂದ ನಿಜವಾಗಿಯೂ ಕೊರೊನಾದಿಂದ ಸಂಕಷ್ಟಕ್ಕೀಡಾದವರಿಗೆ ಅನುಕೂಲವಾದರೂ ಆಗುತ್ತದೆ.

ಟಾಪ್ ನ್ಯೂಸ್

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.