ಮಕ್ಕಳ ಏಕಾಗ್ರತೆ, ಗ್ರಹಿಕೆ ಶಕ್ತಿ ಹೆಚ್ಚಳಕ್ಕೆ ಶಿಕ್ಷಣ ಇಲಾಖೆ ಗಮನಹರಿಸಲಿ


Team Udayavani, Nov 15, 2021, 6:15 AM IST

ಮಕ್ಕಳ ಏಕಾಗ್ರತೆ, ಗ್ರಹಿಕೆ ಶಕ್ತಿ ಹೆಚ್ಚಳಕ್ಕೆ ಶಿಕ್ಷಣ ಇಲಾಖೆ ಗಮನಹರಿಸಲಿ

ಕಳೆದ ಒಂದೂವರೆ ವರ್ಷದಿಂದ ಶಾಲೆಯಿಂದ ವಿಮುಖರಾಗಿದ್ದ ಮಕ್ಕಳು ಈಗಷ್ಟೇ ಶಾಲೆಗಳಿಗೆ ಅತ್ಯಂತ ಉತ್ಸಾಹದಿಂದಲೇ ಆಗಮಿಸುತ್ತಿದ್ದು, ಶಾಲೆಗಳಲ್ಲಿ ಚಿಣ್ಣರ ಚಿಲಿಪಿಲಿ ಕಾಣುತ್ತಿದೆ. ಶಾಲೆಗೆ ಮಕ್ಕಳ ಹಾಜರಾತಿಯೂ ಚೆನ್ನಾಗಿದ್ದು, ಒಂದೂವರೆ ವರ್ಷದಿಂದ ಮನೆಯಲ್ಲೇ ಉಳಿದಿದ್ದ ಮಕ್ಕಳಿಗೆ ಈಗ ಸ್ವತಂತ್ರ ಮತ್ತು ಮುಕ್ತ ವಾತಾವರಣ ಸಿಕ್ಕಂತಾಗಿದೆ. ಮಕ್ಕಳ ಹಾಜರಾತಿ ಬಗ್ಗೆ ಉದಯವಾಣಿ ನಡೆಸಿದ್ದ ಮೆಗಾ ಸಮೀಕ್ಷೆಯಲ್ಲಿ ಶಿಕ್ಷಕರು ಉತ್ತಮ ಅಭಿಪ್ರಾಯವನ್ನೇ ವ್ಯಕ್ತಪಡಿಸಿದ್ದಾರೆ.

ಅಲ್ಲದೆ ಕೊರೊನಾ ಪೂರ್ವಕ್ಕಿಂತಲೂ ಈಗ ಮಕ್ಕಳು ಮತ್ತಷ್ಟು ಕ್ರಿಯಾಶೀಲರಾಗಿದ್ದಾರೆ ಎಂದೂ ಹೇಳಿರುವ ಶಿಕ್ಷಕರು, ಮಕ್ಕಳ ಬುದ್ಧಿವಂತಿಕೆ ಬಗ್ಗೆಯೂ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಆನ್‌ಲೈನ್‌ ಪಾಠವಾಗಲಿ, ಕೊರೊನಾ ವೇಳೆಯಲ್ಲಿ ಲಾಕ್‌ಡೌನ್‌ನಿಂದಾಗಿ ಮನೆಯಲ್ಲೇ ಇದ್ದ ಮಕ್ಕಳಲ್ಲಿ ಕೊಂಚ ಬದಲಾವಣೆಗಳಾಗಿ

ರುವುದು ಸತ್ಯ. ಆದರೆ ಶಾಲೆಗೆ ಬರಲು ಅವರಲ್ಲಿದ್ದ ಉತ್ಸಾಹ ಮಾತ್ರ ಕಡಿಮೆಯಾಗಿಲ್ಲ ಎಂಬುದನ್ನೂ ಶಿಕ್ಷಕರು ತಮ್ಮ ಅಭಿಪ್ರಾಯದಲ್ಲಿ ಹೇಳಿದ್ದಾರೆ.

ಆದರೆ ಪತ್ರಿಕೆ ನಡೆಸಿದ ಸಮೀಕ್ಷೆಯಲ್ಲಿ ಪ್ರಮುಖವಾಗಿ ಕಂಡದ್ದು, ಮಕ್ಕಳಲ್ಲಿ ಏಕಾಗ್ರತೆ ಮತ್ತು ಗ್ರಹಿಕೆಯ ಶಕ್ತಿ ಕಡಿಮೆಯಾಗಿದೆ ಎಂಬುದು. ಇದು ಕಳವಳಕಾರಿ ಸಂಗತಿ ಕೂಡ. ಬಹುತೇಕ ಶಿಕ್ಷಕರು ಈ ವಿಚಾರವನ್ನು ಪ್ರಸ್ತಾವಿಸಿದ್ದಾರೆ. ಇದಕ್ಕೆ ಕಾರಣಗಳೂ ಇವೆ. ಮೊಬೈಲ್‌, ಕಂಪ್ಯೂಟರ್‌, ಲ್ಯಾಪ್‌ಟಾಪ್‌ ಮುಂದೆ ಆನ್‌ಲೈನ್‌ ಪಾಠ ಕೇಳುತ್ತಿದ್ದ ಮಕ್ಕಳಿಗೆ ತದೇಕಚಿತ್ತವಾಗಿ ಕುಳಿತುಕೊಳ್ಳುವುದು ಕಷ್ಟವಾಗಿತ್ತು. ಅಲ್ಲದೆ ಮನೆಯ ಮೂಲೆಯೊಂದರಲ್ಲಿ ಕುಳಿತುಕೊಂಡು ಪಾಠ ಕೇಳುತ್ತಿದ್ದ ಮಕ್ಕಳಿಗೆ ಶಿಕ್ಷಕರ ಭಯವೂ ಇರಲಿಲ್ಲ. ಹೀಗಾಗಿ ಆನ್‌ಲೈನ್‌ ಪಾಠದ ಅವಧಿಯಲ್ಲೇ ವೀಡಿಯೋ ಆಫ್ ಮಾಡಿ ಆಗೊಮ್ಮೆ ಈಗೊಮ್ಮೆ ಎದ್ದು ಹೋಗುವುದು, ಮಧ್ಯೆ ಮಧ್ಯೆ ತಿಂಡಿ-ತಿನಿಸು ತಿನ್ನುವುದು ಹೀಗೆ ಅಭ್ಯಾಸವನ್ನೇ ರೂಢಿಸಿಕೊಂಡಿದ್ದರು. ಈಗ ದಿಢೀರನೇ ಶಾಲೆಯಲ್ಲಿ ಕುಳಿತುಕೊಳ್ಳುತ್ತಿರುವ ಮಕ್ಕಳಿಗೆ ಏಕಾಗ್ರತೆ ಬರುತ್ತಿಲ್ಲ. ಅಲ್ಲದೇ ಶಿಕ್ಷಕರು ಹೇಳುವ ಪಾಠವೂ ತಲೆಗೆ ಹೋಗುತ್ತಿಲ್ಲ. ಹಾಗೆಂದು ಮಕ್ಕಳು ಸರಿಯಾಗಿ ಪಾಠ ಕೇಳುತ್ತಿಲ್ಲವೆಂದು, ಅವರನ್ನು ಶಿಕ್ಷಿಸುವುದು ಸಲ್ಲದು ಎಂದು ಹೇಳುತ್ತಾರೆ ಶಿಕ್ಷಣ ತಜ್ಞರು ಮತ್ತು ಮನೋವಿಜ್ಞಾನಿಗಳು.

ಇದನ್ನೂ ಓದಿ : ಮತ್ತಷ್ಟು ಉತ್ತಮ ಆಡಳಿತಕ್ಕೆ ಶ್ರೀಕಾರ : ಹಳೇ ಬೇರು, ಹೊಸ ಚಿಗುರಿನ ಪರಿಕಲ್ಪನೆ

ಮಕ್ಕಳನ್ನು ಮತ್ತೆ ಪಾಠ ಕೇಳುವಂತೆ ಮಾಡಲು, ಅವರಲ್ಲಿ ಏಕಾಗ್ರತೆ ಬರುವಂತೆ ಮಾಡುವ ಸಲುವಾಗಿ ಶಿಕ್ಷಣ ಇಲಾಖೆ ಕೆಲವೊಂದು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಜರೂರತ್ತು ಸದ್ಯಕ್ಕಂತೂ ಇದೆ. ಆಟದ ಜತೆಗೆ ಕಲಿಕೆ, ಹಾಡಿನ ಮೂಲಕ ಕಲಿಕೆಯಂಥ ಕಾರ್ಯಕ್ರಮಗಳ ಮೂಲಕ ಅವರನ್ನು ಪಾಠದತ್ತ ಸೆಳೆಯಬೇಕು. ಜತೆಗೆ, ಶಾಲಾ ಕೊಠಡಿಯ ವಾತಾವರಣಕ್ಕೆ ಒಗ್ಗಿಕೊಳ್ಳಲು ಒಂದಷ್ಟು ಸಮಯವನ್ನಾದರೂ ಮಕ್ಕಳಿಗೆ ನೀಡುವ ಕೆಲಸವಾಗಬೇಕು.

ಶಿಕ್ಷಣ ತಜ್ಞರು ಹೇಳುವ ಹಾಗೆ ಏಕಾಗ್ರತೆ ಮೂಡಿಸಲು ಚಟುವಟಿಕೆ ಆಧರಿತವಾಗಿ ಶಿಕ್ಷಣ ನೀಡುವುದು, ಮಕ್ಕಳ ಮಟ್ಟಕ್ಕೆ ಶಿಕ್ಷಕರೇ ಇಳಿದು ಪಾಠ ಮಾಡುವುದು, ವಿಶೇಷ ಚಟುವಟಿಕೆಗಳ ಮೂಲಕ ಪಾಠ ಮಾಡುವ ವ್ಯವಸ್ಥೆಯನ್ನು ಶಾಲೆಗಳಲ್ಲಿ ಜಾರಿಗೆ ತರಬೇಕು. ಜತೆಗೆ ಇದುವರೆಗೆ ಮೊಬೈಲ್‌ ಜತೆಯಲ್ಲೇ ಇದ್ದ ಮಕ್ಕಳಿಂದ ಏಕಾಏಕಿ ಮೊಬೈಲ್‌ ಮುಟ್ಟಬೇಡಿ ಎಂಬ ಶಿಕ್ಷೆಯನ್ನು ಕೊಡುವುದೂ ಸಲ್ಲದು.

ಟಾಪ್ ನ್ಯೂಸ್

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.