ಶಿಕ್ಷಕರ ವರ್ಗಾವಣೆ: ವ್ಯವಸ್ಥೆ ಮೇಲೆ ನಂಬಿಕೆ ಬರಲಿ


Team Udayavani, Jul 1, 2021, 6:35 AM IST

ಶಿಕ್ಷಕರ ವರ್ಗಾವಣೆ: ವ್ಯವಸ್ಥೆ ಮೇಲೆ ನಂಬಿಕೆ ಬರಲಿ

ಹಲವು ಸಮಯಗಳ ಕಾನೂನು ಕಸರತ್ತಿನ ಅನಂತರ ರಾಜ್ಯ ಸರಕಾರ ಕೊನೆಗೂ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ವರ್ಗಾವಣೆಗೆ ಅಧಿಸೂಚನೆ ಹೊರಡಿಸಿದೆ. ಈ ಪ್ರಕ್ರಿಯೆ ಹಿಂದೆಯೇ ಆಗಬೇಕಿತ್ತಾದರೂ ಈಗಲಾದರೂ ಆಗುತ್ತಿದೆಯಲ್ಲ ಎನ್ನುವ ಸಮಾಧಾನ ಶಿಕ್ಷಕ ವಲಯದಲ್ಲಿದೆ. ಹತ್ತಾರು ವರ್ಷಗಳಿಂದ ವರ್ಗಾವಣೆಯನ್ನು ಬಯಸುತ್ತಿದ್ದ ಶಿಕ್ಷಕ ಸಮೂಹಕ್ಕೆ ಇದೊಂದು ಚೇತೋಹಾರಿ ಸುದ್ದಿ. ಈ ಬಾರಿಯಾದರೂ ಯಾವುದೇ ತಾಂತ್ರಿಕ, ಕಾನೂನಾತ್ಮಕ ಸಮಸ್ಯೆಗಳಿಲ್ಲದೆ ವರ್ಗಾವಣೆ ಪ್ರಕ್ರಿಯೆಯನ್ನು ಮುಗಿಸುವುದು ರಾಜ್ಯ ಸರಕಾರದ ಮೇಲಿನ ದೊಡ್ಡ ಜವಾಬ್ದಾರಿಯಾಗಿದೆ.

ಕಳೆದ ಬಾರಿಯ ಅರ್ಜಿಗಳನ್ನು ಪರಿಗಣಿಸುವುದರ ಜತೆಗೆ ಹೊಸ ಅರ್ಜಿ ಹಾಕಲು ಅವಕಾಶ ನೀಡಿರುವುದು ಸ್ತುತ್ಯರ್ಹ. ಕಳೆದ ಸಲವೇ ಸುಮಾರು 75,000 ಅರ್ಜಿಗಳು ಸಲ್ಲಿಕೆಯಾಗಿದ್ದವು, ಹಿಂದಿನ ಸಲ ಅರ್ಜಿ ಸಲ್ಲಿಸಲಾಗದವರಿಗೆ ಮತ್ತು ಆಗ ಅರ್ಹತೆ ಇಲ್ಲದಿದ್ದು, ಈಗ ಅರ್ಹತೆ ಪಡೆದುಕೊಂಡವರಿಗೆ ಈ ಬಾರಿ ಅರ್ಜಿ ಸಲ್ಲಿಸಲು ಅವಕಾಶ ನೀಡಿರುವುದು ಒಳ್ಳೆಯ ಕ್ರಮ. ಇದರಿಂದ ಹಿಂದಿನ ಅವಕಾಶ ವಂಚಿತರಿಗೆ ಅವಕಾಶ ನೀಡಿದಂತಾಗಿದೆ. ಹಿಂದಿನ ಸಲ ಕಡ್ಡಾಯ ವರ್ಗಾವಣೆಗೊಂಡವರಿಗೆ ಆದ್ಯತೆ ಮೇರೆಗೆ ಈ ಸಲ ಸಾಧ್ಯವಾದಷ್ಟು ಅವರ ಹಿಂದಿನ ಶಾಲೆಗಳ ಸಮೀಪದಲ್ಲೇ ಅವಕಾಶ ನೀಡುವ ಕ್ರಮವನ್ನು ಸೇರಿಸಲಾಗಿದೆ. ಹಾಗೆ ನೋಡಿದರೆ, 2017ರಿಂದ ಸಮರ್ಪಕವಾಗಿ ವರ್ಗಾವಣೆ ಪ್ರಕ್ರಿಯೆ ನಡೆಯಲೇ ಇಲ್ಲ. ಯಾವುದೇ ಸರಕಾರಗಳು ಬಂದರೂ ಶಿಕ್ಷಕರನ್ನು ಉಪೇಕ್ಷಿಸುವ ವ್ಯವಸ್ಥೆ ಹಾಗೆಯೇ ಮುಂದುವರಿದುಕೊಂಡು ಬಂದಿತ್ತು. ಇದರಿಂದಾಗಿ ಎಷ್ಟೋ ಶಿಕ್ಷಕ ಕುಟುಂಬಗಳು ಕೌಟುಂಬಿಕ ಹಾಗೂ ಮಾನಸಿಕ ನೆಮ್ಮದಿಯನ್ನು ಕಳೆದುಕೊಂಡು ಬದುಕುವಂತಾಗಿದೆ. ಶಿಕ್ಷಕರೇ ಮಾನಸಿಕ ನೆಮ್ಮದಿ ಕಳೆದುಕೊಂಡರೆ ಶಿಕ್ಷಣ ವ್ಯವಸ್ಥೆಯನ್ನು ಹೇಗೆ ಸುಧಾರಿಸಲು ಸಾಧ್ಯ ಎನ್ನುವ ಪ್ರಶ್ನೆಗೆ ಉತ್ತರ ಸಿಕ್ಕಿರಲೇ ಇಲ್ಲ. ಹಿಂದಿನ ಸಲದ ವರ್ಗಾವಣೆ ಪ್ರಕ್ರಿಯೆ ನಡೆಯುತ್ತಿರುವಾಗಲೇ ಕೆಲವು ಶಿಕ್ಷಕರು ಕರ್ನಾಟಕ ಆಡಳಿತ ನ್ಯಾಯ ಮಂಡಳಿಗೆ ಅರ್ಜಿ ಸಲ್ಲಿಸಿದ್ದರು, ಇದರಿಂದ ಇಡೀ ಪ್ರಕ್ರಿಯೆ ಸ್ಥಗಿತಗೊಂಡಿತು. ಕಡ್ಡಾಯ ವರ್ಗಾವಣೆಗೊಂಡಿದ್ದ ಶಿಕ್ಷಕ ರಿಗೆ ಮರು ವರ್ಗಾವಣೆಯಲ್ಲಿ ಮೊದಲ ಆದ್ಯತೆ ನೀಡಬೇಕೆಂಬ ನೀತಿಗೆ ಇವರು ತಕರಾರು ಒಡ್ಡಿದ್ದರು. ಈ ವಾದಕ್ಕೆ ನ್ಯಾಯ ಮಂಡಳಿ ಹಾಗೂ ಹೈಕೋರ್ಟ್‌ನಲ್ಲಿ ಜಯ ಸಿಕ್ಕಿತ್ತು. ಆದರೆ, ಕಡ್ಡಾಯ ವರ್ಗಗೊಂಡ ಶಿಕ್ಷಕರಿಗೆ ಮರುಮನ್ನಣೆ ನೀಡಬೇಕೆಂಬ ತನ್ನ ನಿಲುವನ್ನು ಎತ್ತಿ ಹಿಡಿದ ಸರಕಾರ, ಅಧ್ಯಾದೇಶವನ್ನು ಜಾರಿಗೊಳಿಸಿ ಈಗ ಮತ್ತೆ ವರ್ಗ ಪ್ರಕ್ರಿಯೆಗೆ ಮುಂದಾಗಿದೆ.

ಹಲವು ವರ್ಷಗಳಿಂದ ಚಾತಕ ಪಕ್ಷಿಯಂತೆ ಕಾದು ಕೂತಿದ್ದ ಶಿಕ್ಷಕರಿಗೆ ಈ ಬಾರಿಯ ವರ್ಗಾವಣೆ ಪ್ರಕ್ರಿಯೆಯಲ್ಲಾದರೂ ಅನುಕೂಲ ಸಿಗಬಹುದು ಎನ್ನುವ ನಿರೀಕ್ಷೆ ಎಲ್ಲರಿಗೂ ಇದೆ. ಈ ಬಾರಿಯಾದರೂ ಅರ್ಹರಿಗೆ ಮತ್ತು ಹಲವು ವರ್ಷಗಳಿಂದ ನ್ಯಾಯ ಸಿಗದೆ ಇರುವ ಶಿಕ್ಷಕರಿಗೆ ನ್ಯಾಯ ಸಿಗುವಂತೆ ಮಾಡುವುದು ಸರಕಾರದ ಜವಾಬ್ದಾರಿ ಯಾಗಿದೆ. ತಾಂತ್ರಿಕ ತೊಂದರೆಯಾಗದಂತೆ ನೋಡಿಕೊಳ್ಳುವ ಮತ್ತು ಎಲ್ಲವೂ ಸುಸೂತ್ರವಾಗಿ ನಡೆಯುವಂತೆ ನೋಡಿಕೊಳ್ಳುವ ಹೊಣೆ ಶಿಕ್ಷಣ ಇಲಾಖೆಯದ್ದಾಗಿದೆ. ಹಾಗೊಂದು ವೇಳೆ ಆಗದೇ ಇದ್ದಲ್ಲಿ ಇಡೀ ವರ್ಗಾವಣೆ ಪ್ರಕ್ರಿಯೆ ಬಗ್ಗೆ ಮತ್ತು ವ್ಯವಸ್ಥೆ ಮೇಲೆ ಶಿಕ್ಷಕ ಸಮುದಾಯ ನಂಬಿಕೆ ಕಳೆದುಕೊಳ್ಳಬಹುದು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.