ಇಂದು ದ್ವಿತೀಯ ಏಕದಿನ : ಸರಣಿ ಸವಾರಿಗೆ ಸಜ್ಜಾಗಿದೆ ಯಂಗ್‌ ಇಂಡಿಯಾ


Team Udayavani, Jul 20, 2021, 7:10 AM IST

ಇಂದು ದ್ವಿತೀಯ ಏಕದಿನ : ಸರಣಿ ಸವಾರಿಗೆ ಸಜ್ಜಾಗಿದೆ ಯಂಗ್‌ ಇಂಡಿಯಾ

ಕೊಲಂಬೊ: ಭಾರತೀಯ ಕ್ರಿಕೆಟಿನ ಮೀಸಲು ಸಾಮರ್ಥ್ಯವೇನು, ಲಂಕೆಯ ಪ್ರಧಾನ ತಂಡದ ಬಲ ಎಷ್ಟು ಎಂಬುದು ರವಿವಾರ ಒಂದು ಹಂತದಲ್ಲಿ ಸಾಬೀತಾಗಿದೆ. ಇತ್ತಂಡಗಳ ನಡುವೆ ಮಂಗಳವಾರ ದ್ವಿತೀಯ ಏಕದಿನ ಪಂದ್ಯ ನಡೆಯಲಿದ್ದು, ಭಾರತವೇ ನೆಚ್ಚಿನ ತಂಡವಾಗಿ ಗೋಚರಿಸಿದೆ. “ಯಂಗ್‌ ಇಂಡಿಯಾ’ ಎಂದೇ ಗುರುತಿಸಲ್ಪಡುವ ದ್ರಾವಿಡ್‌ ಮಾರ್ಗದರ್ಶನದ ಧವನ್‌ ಬಳಗ ಸರಣಿ ಗೆಲುವಿನ ನಿರೀಕ್ಷೆಯನ್ನು ಹೆಚ್ಚಿಸಿದೆ. ಆತಿಥೇಯರ ಮೇಲೆ ಒತ್ತಡ ತೀವ್ರಗೊಂಡಿದೆ.

ಕೊಲಂಬೋದ “ಆರ್‌. ಪ್ರೇಮದಾಸ ಸ್ಟೇಡಿಯಂ’ ಬ್ಯಾಟಿಂಗಿಗೆ ಹೆಸರುವಾಸಿ. ತಿರುವು ಪಡೆಯುವು ದರಿಂದ ಸ್ಪಿನ್‌ ಸ್ನೇಹಿಯೂ ಹೌದು. ಈ ಎರಡೂ ಅಂಶಗಳನ್ನು ಭಾರತ ಮೊದಲ ಪಂದ್ಯದಲ್ಲಿ ಸಾಬೀತುಪಡಿಸಿದೆ. ಬಹುಶಃ ಮಂಗಳವಾರ ಇದರ ಮುಂದುವರಿದ ಭಾಗವನ್ನು ಕಾಣಲಿಕ್ಕಿದೆ.

ಮೀಸಲು ಸಾಮರ್ಥ್ಯ ಸಾಬೀತು
ಭಾರತ ಮೊದಲ ಪಂದ್ಯದಲ್ಲಿ ಸರ್ವಾಂಗೀಣ ಪ್ರದ ರ್ಶನ ನೀಡುವಲ್ಲಿ ಯಶಸ್ವಿಯಾಗಿತ್ತು. ಲಂಕೆ ಯನ್ನು 250ರ ಗಡಿಯೊಳಗೆ ನಿಲ್ಲಿಸಬಹುದಿತ್ತು ಎಂದೆನಿಸಿದರೂ ಬಹಳ ಬೇಗ ಚೇಸಿಂಗ್‌ ಮುಗಿಸಿ ಇದೇನೂ ಸವಾಲಿನ ಮೊತ್ತವಲ್ಲ ಎಂಬುದನ್ನು ಸಾಬೀತುಪಡಿಸಿತು.

ಮುನ್ನುಗ್ಗಿ ಬೀಸುವ ಛಾತಿಯ ಪೃಥ್ವಿ ಶಾ, ಚೊಚ್ಚಲ ಪಂದ್ಯದಲ್ಲೇ ಸಿಡಿಲಬ್ಬರ ಬ್ಯಾಟಿಂಗ್‌ ನಡೆಸಿದ ಇಶಾನ್‌ ಕಿಶನ್‌ ರವಿವಾರದ ಸ್ಟಾರ್‌ ಬ್ಯಾಟ್ಸ್‌ಮನ್‌ಗಳಾಗಿ ಮೂಡಿಬಂದಿದ್ದರು. ಇಬ್ಬರೂ ಐಪಿಎಲ್‌ ಮೂಡ್‌ನ‌ಲ್ಲಿದ್ದಂತಿತ್ತು! ಹಾಗೆಯೇ ಮೊದಲ ಸಲ ಭಾರತ ತಂಡವನ್ನು ಮುನ್ನಡೆಸಿದ ಶಿಖರ್‌ ಧವನ್‌ ಇದನ್ನು ಬಹಳ ಶಾಂತ ರೀತಿಯಲ್ಲಿ ನಿಭಾಯಿಸಿದರು. ಬ್ಯಾಟಿಂಗ್‌ನಲ್ಲೂ ಹೆಚ್ಚು ಪ್ರಬುದ್ಧರಾದಂತಿತ್ತು. ತಾನು ಆಡುವ ಜತೆಗೆ ಜತೆಗಾರರನ್ನೂ ಆಡಿಸಿ ಅಜೇಯರಾಗಿ ಉಳಿದರು. ಇದು ದ್ರಾವಿಡ್‌ ಪಾಠ ಎಂಬುದನ್ನು ಬಿಡಿಸಿ ಹೇಳಬೇಕಿಲ್ಲ!

ಭಾರತದ ಬೌಲಿಂಗ್‌ ವಿಭಾಗ ಭರವಸೆಯ ಪ್ರದರ್ಶನವನ್ನೇ ನೀಡಿದೆ. ಚಹಲ್‌, ಕುಲದೀಪ್‌ ಅವರನ್ನೊಳಗೊಂಡ ತ್ರಿವಳಿ ಸ್ಪಿನ್‌ ದಾಳಿ ಸಾಕಷ್ಟು ಹರಿತವಾಗಿಯೇ ಇತ್ತು. ಆದರೆ ಭುವನೇಶ್ವರ್‌ಗೆ ಏನಾಗಿದೆ ಎಂಬುದು ಯೋಚಿಸಬೇಕಾದ ಪ್ರಶ್ನೆ!

ಸರಣಿ ಸಮಬಲ ಸುಲಭವಲ್ಲ
80ರ ದಶಕದ ತನ್ನ ಅಂತಾರಾಷ್ಟ್ರೀಯ ಕ್ರಿಕೆಟಿನ ಆರಂಭಿಕ ದಿನಗಳಲ್ಲಿ, 1996ರ ವಿಶ್ವಕಪ್‌ ಕಾಲದಲ್ಲಿ, ಬಳಿಕ ಮುರಳಿ-ಜಯವರ್ಧನ-ಸಂಗಕ್ಕರ ಜಮಾ ನಾದಲ್ಲಿ ವಿಶ್ವದ ಅತ್ಯಂತ ಬಲಿಷ್ಠ ತಂಡವಾಗಿದ್ದ ಶ್ರೀಲಂಕಾ ಈಗ ಆ ಚಾರ್ಮ್ ಸಂಪೂರ್ಣ ಕಳೆದುಕೊಂಡಿದೆ. ಸೋಲು ಸರಾಗವಾಗಿ ಈ ತಂಡದ ಮೇಲೆ ಸವಾರಿ ಮಾಡುತ್ತಿದೆ. ಕಳೆದ ಕೆಲವು ಸರಣಿಗಳಲ್ಲಿ ಇದು ನಿಚ್ಚಳವಾಗುತ್ತ ಬಂದಿದೆ. ಭಾರತದೆದುರಿನ ಸರಣಿ ಇದಕ್ಕೊಂದು ಹೊಸ ಸೇರ್ಪಡೆ ಎಂದೇ ವಿಶ್ಲೇಷಿಸಲಾಗುತ್ತಿದೆ. ಹೀಗಾಗಿ ಸರಣಿಯನ್ನು ಸಮಬಲಕ್ಕೆ ತರುವುದು ಲಂಕೆಗೆ ಅಷ್ಟು ಸುಲಭವಲ್ಲ.

ಟಾಪ್ ನ್ಯೂಸ್

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Virat Kohli Fan: ಕೊಹ್ಲಿ ಕಾಲಿಗೆರಗಿದ ಅಭಿಮಾನಿಗೆ ಭದ್ರತಾ ಸಿಬಂದಿಯಿಂದ ಹಲ್ಲೆ?

Virat Kohli Fan: ಕೊಹ್ಲಿ ಕಾಲಿಗೆರಗಿದ ಅಭಿಮಾನಿಗೆ ಭದ್ರತಾ ಸಿಬಂದಿಯಿಂದ ಹಲ್ಲೆ?

MS Dhoni Catch: 42ರ ಧೋನಿಯ ಡೈವಿಂಗ್‌ ಕ್ಯಾಚ್‌!

MS Dhoni Catch: 42ರ ಧೋನಿಯ ಡೈವಿಂಗ್‌ ಕ್ಯಾಚ್‌!

Ipl: ಪಂತ್‌ ಪಡೆಗೆ ರಾಜಸ್ಥಾನ್‌ ರಾಯಲ್ಸ್‌ ಚಾಲೆಂಜ್‌

Ipl: ಪಂತ್‌ ಪಡೆಗೆ ರಾಜಸ್ಥಾನ್‌ ರಾಯಲ್ಸ್‌ ಚಾಲೆಂಜ್‌

IPL 2024: ಧೋನಿ ಸೂಚನೆಯಂತೆ ಆಡಿದೆ: ರಿಝ್ವಿ

IPL 2024: ಧೋನಿ ಸೂಚನೆಯಂತೆ ಆಡಿದೆ: ರಿಝ್ವಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

29

Hassan Lok sabha Constituency: ಪ್ರಜ್ವಲ್‌ ರೇವಣ್ಣ ನಾಮಪತ್ರ ಸಲ್ಲಿಕೆ

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.