ವಿಧಾನಸೌಧದ ಸುತ್ತ ನಿಷೇಧಾಜ್ಞೆ: ಪೊಲೀಸ್ ಸರ್ಪಗಾವಲು
ಇಂದು ಏನಾಗಲಿದೆ ಎನ್ನುವ ಕುತೂಹಲ
Team Udayavani, Jul 11, 2019, 9:03 AM IST
ಬೆಂಗಳೂರು: ಶಾಸಕರ ರಾಜೀನಾಮೆ ಬೆನ್ನಲ್ಲೇ ರಾಜ್ಯದ ಸಮ್ಮಿಶ್ರ ಸರ್ಕಾರದ ಫೈನಲ್ ಕೌಂಟ್ ಡೌನ್ ಶುರುವಾಗಿರುವ ಹಿನ್ನಲೆಯಲ್ಲಿ ವಿಧಾನಸೌಧದ ಸುತ್ತಮುತ್ತ ಇಂದಿನಿಂದ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.
ಕಮಿಷನರ್ ಅಲೋಕ್ ಕುಮಾರ್ ಅವರು ಇಂದಿನಿಂದ ಜುಲೈ 14 ರ ವರೆಗೆ ಸೆಕ್ಷನ್ 144 ಜಾರಿ ಮಾಡಿ ದ್ದಾರೆ.
ಶಕ್ತಿಸೌಧದಲ್ಲಿ ಇಂದು ಬೆಳಗ್ಗೆ ಮಹತ್ವದ ಸಚಿವ ಸಂಪುಟ ಸಭೆ ನಡೆಯಲಿರುವ ಹಿನ್ನಲೆಯಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.
ಹೆಚ್ಚಿನ ಸಂಖ್ಯೆಯ ಪೊಲೀಸರನ್ನು ವಿಧಾನಸೌಧದ ಸುತ್ತ ಭದ್ರತೆಗೆ ನಿಯೋಜಿಸಲಾಗಿದೆ. ಹಲವು ಪೊಲೀಸರು ಮಫ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ.