ಲವ್ ಜಿಹಾದ್ ಹೆಸರಿನಲ್ಲಿ ಯುವತಿಯರ ಮಾರಾಟ: ಶೋಭಾ ಕರಂದ್ಲಾಜೆ ಆರೋಪ
Team Udayavani, Feb 27, 2020, 7:53 PM IST
ಬೆಂಗಳೂರು: “ಲವ್ ಜೆಹಾದ್’ ಹೆಸರಿನಲ್ಲಿ ವಿದೇಶಗಳಿಗೆ ಯುವತಿಯರ ಮಾರಾಟ ನಡೆಯುತ್ತಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಆರೋಪಿಸಿದರು.
ನಗರದ ಖಾಸಗಿ ಹೊಟೇಲ್ನಲ್ಲಿ ಗುರುವಾರ ಕರ್ನಾಟಕ ಪತ್ರಕರ್ತೆಯರ ಸಂಘ ಆಯೋಜಿಸಿದ್ದ “ಮಕ್ಕಳನ್ನು ಲೈಂಗಿಕ ಶೋಷಣೆಯಿಂದ ರಕ್ಷಿಸುವ ಕುರಿತು ಮಾಧ್ಯಮ ಪ್ರತಿನಿಧಿಗಳೊಂದಿಗೆ ಸಮಾಲೋಚನೆ’ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದ ಹೆಣ್ಣು ಮಕ್ಕಳನ್ನು ಹೈದರಾಬಾದ್, ಮುಂಬಯಿಗೆ ಕರೆದುಕೊಂಡು ಹೋಗಿ ಬಲವಂತವಾಗಿ ವೇಶ್ಯಾವಾಟಿಕೆಗೆ ತಳ್ಳಲಾಗುತ್ತಿದೆ. ಮೈಸೂರು ಭಾಗದ ಗುಂಡ್ಲುಪೇಟೆ, ಎಚ್.ಡಿ.ಕೋಟೆ ಭಾಗದ ಮಕ್ಕಳು ನಾಪತ್ತೆ ಆಗುತ್ತಲೇ ಇದ್ದು ಇದರ ಹಿಂದಿರುವ ಶಕ್ತಿಗಳನ್ನು ಮಟ್ಟಹಾಕಬೇಕಾಗಿದೆ ಎಂದು ಹೇಳಿದರು.
ದೇವದಾಸಿ ಪದ್ಧತಿ ಬಗೆಗಿನ ಕಾನೂನು ಮತ್ತಷ್ಟು ಗಟ್ಟಿಯಾಗಬೇಕಾಗಿದೆ. ಅತ್ಯಾಚಾರ ಸಂಬಂಧಿಸಿದಂತೆ ನ್ಯಾಯಾಲಯದ ಮೊರೆ ಹೋದ ತತ್ಕ್ಷಣ ನ್ಯಾಯ ಸಿಗುತ್ತದೆ ಎಂಬ ನಂಬಿಕೆಯಿಲ್ಲ. ಆ ಹಿನ್ನೆಲೆಯಲ್ಲಿಯೇ ಹೈದರಾಬಾದ್ ಘಟನೆಯ ಅತ್ಯಾಚಾರಿಗಳನ್ನು ಎನ್ಕೌಂಟರ್ ಆದಾಗ ಹೆಣ್ಣು ಮಕ್ಕಳು ಸಂಭ್ರಮಿಸಿದ್ದರು ಎಂದು ತಿಳಿಸಿದರು.
ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ದಾಸ್ ಮಾತನಾಡಿ, ಸಮಾಜಕ್ಕೆ ಅಂಟಿಕೊಂಡಿರುವ ದೇವದಾಸಿ ಪದ್ಧತಿಯನ್ನು ಬೇರು ಸಹಿತ ನಿರ್ಮೂಲನೆ ಮಾಡದ ಹೊರತು, ಈ ಸಮಸ್ಯೆಗೆ ಪರಿಹಾರ ಸಿಗುವುದಿಲ್ಲ. ಈ ನಿಟ್ಟಿನಲ್ಲಿ ಸರಕಾರ ದೇವದಾಸಿ ಪದ್ಧತಿ ನಿರ್ಮೂಲನ ಕಾನೂನನ್ನು ಗಟ್ಟಿಗೊಳಿಸಬೇಕಾಗಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ