Khalistan:ಅಮೃತ್ ಪಾಲ್ ಭಾರತಕ್ಕೆ ಬರುವ ಮುನ್ನ ಪಾಕ್ ISI ಜಾರ್ಜಿಯಾಕ್ಕೆ ಕರೆದೊಯ್ದಿದ್ದೇಕೆ

ಈತನ ಬಂಧನಕ್ಕಾಗಿ ತೀವ್ರ ಶೋಧ ಕಾರ್ಯ ನಡೆಯುತ್ತಿದೆ.

Team Udayavani, Apr 7, 2023, 3:15 PM IST

Khalistan:ಅಮೃತ್ ಪಾಲ್ ಭಾರತಕ್ಕೆ ಬರುವ ಮುನ್ನ ಪಾಕ್  ISI ಜಾರ್ಜಿಯಾಕ್ಕೆ ಕರೆದೊಯ್ದಿದ್ದೇಕೆ

ನವದೆಹಲಿ: ಪರಾರಿಯಾಗಿರುವ ಖಲಿಸ್ತಾನಿ ಬೆಂಬಲಿಗ, ಸ್ವಯಂಘೋಷಿತ ಮತ ಬೋಧಕ ಅಮೃತ್ ಪಾಲ್ ಸಿಂಗ್ ಕಳೆದ ಮೂರು ವಾರಗಳಿಂದ ಪಂಜಾಬ್ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸುತ್ತಲೇ ಇರುವ ನಡುವೆಯೇ ಸ್ಫೋಟಕ ಮಾಹಿತಿಯೊಂದು ಹೊರಬಿದ್ದಿದೆ. ಕಳೆದ ವರ್ಷ ಅಮೃತ್ ಪಾಲ್ ಸಿಂಗ್ ಭಾರತಕ್ಕೆ ಆಗಮಿಸುವ ಮುನ್ನವೇ ಪಾಕಿಸ್ತಾನದ ಐಎಸ್ ಐ ಆತನನ್ನು ಜಾರ್ಜಿಯಾಕ್ಕೆ ಕರೆದೊಯ್ದಿರುವುದಾಗಿ ವರದಿ ತಿಳಿಸಿದೆ.

ಇದನ್ನೂ ಓದಿ:Must Watch Video: ಮರದಿಂದ ಇನ್ನೊಂದು ಮರಕ್ಕೆ ಜಿಗಿದು ಕೋತಿಯನ್ನು ಬೇಟೆಯಾಡಿದ ಚಿರತೆ!

ಭಿಂದ್ರನ್ ವಾಲೆಯಂತೆ ಕಾಣಿಸಲು ಸರ್ಜರಿ!

ಪಂಜಾಬ್ ನ ಅಮೃತ್ ಸರದಲ್ಲಿ ಆಪರೇಶನ್ ಬ್ಲೂಸ್ಟಾರ್ ಕಾರ್ಯಾಚರಣೆಯಲ್ಲಿ ಕೊನೆಯುಸಿರೆಳೆದಿದ್ದ ಪ್ರತ್ಯೇಕತಾವಾದಿ ಜರ್ನೈಲ್ ಸಿಂಗ್ ಭಿಂದ್ರನ್ ವಾಲೆಯಂತೆ ಹೋಲುವಂತೆ ಅಮೃತ್ ಪಾಲ್ ಸಿಂಗ್ ಗೆ ಜಾರ್ಜಿಯಾದಲ್ಲಿ ಕಣ್ಣಿನ ಶಸ್ತ್ರಚಿಕಿತ್ಸೆ ನಡೆಸಲಾಗಿತ್ತು ಎಂದು ಗುಪ್ತಚರ ಏಜೆನ್ಸಿ ಮೂಲಗಳು ತಿಳಿಸಿರುವುದಾಗಿ ಇಂಡಿಯಾ ಟುಡೇ ವರದಿ ಮಾಡಿದೆ.

ಗುಪ್ತಚರ ಇಲಾಖೆ ವರದಿ ಪ್ರಕಾರ, 2022ರ ಸೆಪ್ಟೆಂಬರ್ ನಲ್ಲಿ ಭಾರತಕ್ಕೆ ಆಗಮಿಸುವ ಮುನ್ನ ಅಮೃತ್ ಪಾಲ್ ಸಿಂಗ್ ತರಬೇತಿಗಾಗಿ ಜಾರ್ಜಿಯಾಕ್ಕೆ ಭೇಟಿ ನೀಡಿದ್ದ. ಅಮೃತ್ ಪಾಲ್ 2022ರ ಜೂನ್ 20ರಿಂದ 2022ರ ಆಗಸ್ಟ್ 18ರವರೆಗೆ ಜಾರ್ಜಿಯಾದಲ್ಲಿರುವುದಾಗಿ ಮೂಲಗಳು ಹೇಳಿವೆ.

ಅಧಿಕಾರಿಗಳ ಮಾಹಿಯಂತೆ, ಕಣ್ಣಿನ ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳಲು ತಾನು ಜಾರ್ಜಿಯಾಕ್ಕೆ ಬಂದಿರುವುದಾಗಿ ತನ್ನ ನಿಕಟವರ್ತಿಗಳಿಗೆ ಅಮೃತ್ ಪಾಲ್ ತಿಳಿಸಿದ್ದನಂತೆ. ಆದರೆ ಅಧಿಕಾರಿಗಳ ಶಂಕೆಯ ಪ್ರಕಾರ, ಸುಮಾರು ಎರಡು ತಿಂಗಳ ಕಾಲ ಜಾರ್ಜಿಯಾದಲ್ಲಿ ಅಮೃತ್ ಪಾಲ್ ಸಿಂಗ್ ಐಎಸ್ ಐ ಶಸ್ತ್ರಾಸ್ತ್ರ ತರಬೇತಿ ನೀಡಿರುವುದಾಗಿ ತಿಳಿಸಿದ್ದಾರೆ.

ಮಾರ್ಚ್ 18ರಂದು ಪಂಜಾಬ್ ಪೊಲೀಸರು ಅಮೃತ್ ಪಾಲ್ ಸಿಂಗ್ ನೇತೃತ್ವದ ವಾರಿಸ್ ಪಂಜಾಬ್ ದೇ ವಿರುದ್ಧ ದಾಳಿ ನಡೆಸಲು ಆರಂಭಿಸಿದಾಗಿನಿಂದ ಸಿಂಗ್ ಪೊಲೀಸರ ಬಂಧನದಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾನೆ. ಈಗಾಗಲೇ ಆತನ ಸಹಚರರನ್ನು ಪೊಲೀಸರು ಬಂಧಿಸಿದ್ದು, ಈತನ ಬಂಧನಕ್ಕಾಗಿ ತೀವ್ರ ಶೋಧ ಕಾರ್ಯ ನಡೆಯುತ್ತಿದೆ.

ದೀಪ್ ಸಿಧು ನಿಧನದ ನಂತರ ಅಮೃತ್ ಪಾಲ್ ಸಿಂಗ್ ದುಬೈಯಲ್ಲಿ ಐಎಸ್ ಐ ಅಧಿಕಾರಿಗಳನ್ನು ಭೇಟಿಯಾಗಿ ಮಾತುಕತೆ ನಡೆಸಿದ ನಂತರ 2022ರ ಫೆಬ್ರುವರಿಯಲ್ಲಿ ಅಮೃತ್ ಪಾಲ್ ವಾರಿಸ್ ಪಂಜಾಬ್ ದೇ ಸಂಘಟನೆಯ ನೇತೃತ್ವ ವಹಿಸಿಕೊಂಡಿರುವುದಾಗಿ ಪಂಜಾಬ್ ಪೊಲೀಸರು ಮತ್ತು ಕೇಂದ್ರ ತನಿಖಾ ಸಂಸ್ಥೆಗಳು ಅಭಿಪ್ರಾಯವ್ಯಕ್ತಪಡಿಸಿರುವುದಾಗಿ ವರದಿ ತಿಳಿಸಿದೆ.

ವಾರಿಸ್ ಪಂಜಾಬ್ ದೇ ನಾಯಕತ್ವ ಕೊಡಿಸುವ ಮೂಲಕ ಅಮೃತ್ ಪಾಲ್ ಸಿಂಗ್ ನನ್ನು ಆಧುನಿಕ ಜರ್ನೈಲ್ ಸಿಂಗ್ ಭಿಂದ್ರನ್ ವಾಲೆಯಂತೆ ರೂಪುಗೊಳಿಸಲು ಐಎಸ್ ಐ ಸಂಚು ನಡೆಸಿರುವುದಾಗಿ ಗುಪ್ತಚರ ಇಲಾಖೆ ಮೂಲಗಳು ಹೇಳಿವೆ.

ಟಾಪ್ ನ್ಯೂಸ್

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

drowned

Kenya; ಭಾರೀ ಮಳೆಗೆ ಒಡೆದ ಡ್ಯಾಮ್‌: ಕನಿಷ್ಠ 40 ಸಾವು!

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.