ಸರಣಿ ಟ್ವೀಟ್ ಮೂಲಕ ಅಸಮಾಧಾನ ಹೊರಹಾಕಿದ ಬಿಜೆಪಿ ಶಾಸಕ ಮಾಮನಿ
Team Udayavani, Feb 4, 2020, 5:56 PM IST
ಬೆಂಗಳೂರು : ಸಚಿವಸ್ಥಾನಕ್ಕಾಗಿ ಬಿಜೆಪಿ ನಾಯಕರಲ್ಲಿ ಅಸಮಾಧಾನ ಬುಗಿಲೇಳುತ್ತಿರುವ ಬೆನ್ನಲ್ಲೇ ಉಪಚುನಾವಣೆಯಲ್ಲಿ ಗೆದ್ದವರಿಗೆ ಸಚಿವ ಸ್ಥಾನ ನೀಡಿ, ಮೂಲ ಬಿಜೆಪಿಗರನ್ನು ಕಡೆಗಣಿಸುತ್ತಿರುವ ಬಗ್ಗೆ ಸವದತ್ತಿ ಯಲ್ಲಮ್ಮ ಕ್ಷೇತ್ರದ ಬಿಜೆಪಿ ಶಾಸಕ ಆನಂದ ಸಿ. ಮಾಮನಿ ಟ್ವೀಟ್ ಮೂಲಕ ಅಸಮಾಧಾನ ಹೊರಹಾಕಿದ್ದಾರೆ.
ಸರಣಿ ಟ್ವೀಟ್ ಮಾಡುವ ಮೂಲಕ ಮೂಲ ಬಿಜೆಪಿಗರನ್ನು ಕಡೆಗಣಿಸಬೇಡಿ. ನಮ್ಮನ್ನು ಬೆಳೆಸಿ ಎಂದು ವರಿಷ್ಠರಲ್ಲಿ ಕೋರಿಕೊಂಡಿದ್ದಾರೆ.
ಹೊಸದಾಗಿ ಪಕ್ಷಕ್ಕೆ ಸೇರಿ ಮಂತ್ರಿಯಾಗುವವರೆದುರಿಗೆ, ಪಕ್ಷಕ್ಕೆ ಅಡಿಪಾಯ ಹಾಕಿ, ಕಟ್ಟಿ, ನಿಷ್ಠಾವಂತರಾಗಿ ದುಡಿದು ಸಾಕಷ್ಟು ಬಾರಿ ಶಾಸಕರಾದವರು ಲೆಕ್ಕಕ್ಕಿಲ್ಲ. ಪಕ್ಷದ ಮೇಲಿಟ್ಟಿರುವ ಕ್ಷೇತ್ರದ ಜನತೆಯ ಅಮೂಲ್ಯ ಪ್ರೀತಿ, ಅಭಿಮಾನಕ್ಕೂ ಪಕ್ಷದಲ್ಲಿ ಬೆಲೆ ಇಲ್ಲದಾಯಿತೇ?ಆಟಕ್ಕುಂಟು ಲೆಕ್ಕಕ್ಕಿಲ್ಲ ಇದೇನು ವಿಪರ್ಯಾಸವೇ, ಕಟು ಸತ್ಯವೇ? ಈಗ ಸ್ಪಷ್ಟ ಹೇಳುವುದಿಷ್ಟೇ, ಕಾಲಾಯ ತಸ್ಮೈ ನಮಃ.
ಇನ್ನಾದ್ರು ನನ್ನ ಕ್ಷೇತ್ರವನ್ನು ಹಾಗೂ ನಮ್ಮಂತರವನ್ನು ಬೆಳೆಸಲು ಈಗಾಗಲೇ ಸಾಕಷ್ಟು ಬಾರಿ ಇಲ್ಲಿಯವರಿಗೆ ಸರ್ಕಾರದಲ್ಲಿ ಅಧಿಕಾರ ಅನುಭವಿಸಿದವರು ಯಾವತ್ತು ತಾವು ಪಡೆದ ಸ್ಥಾನಮಾನವನ್ನು ಕಿಂಚಿತ್ತು ತ್ಯೆಜಿಸಲು ಹಿಂದೇಟು ಹಾಕುತ್ತಿರುವುದು ಒಂದೆಡೆಯಾದರೆ, ಪಕ್ಷದ ಮುಖಂಡರೂ ಸಹ ನನ್ನ ಕ್ಷೇತ್ರವನ್ನು ಹಾಗೂ ನಮ್ಮಂಥವರನ್ನುಇ ಬೆಳೆಸಲು ಯಾವುದೇ ಆಸಕ್ತಿ ತೋರಿಸದಿರುವುದು ಇನ್ನೊಂದೆಡೆ. ಇನ್ನು ಮೇಲೆ ಪಕ್ಷ ನಿಷ್ಠರಿಗೆ ಕಾಲವಿಲ್ಲವೇ ಎಂಬುದು ಯಕ್ಷಪ್ರಶ್ನೆ.
ಇದು ಪಕ್ಷ ನಿಷ್ಠರಿಗೆ ಹಾಗೂ ಮತದಾರರಿಗೆ ಆದಾ ಘೋರ ಅಪಮಾನ ಅಲ್ಲದೆ, ಇನ್ನೇನು ಎಂಬ ವಿಷಯ ಎಲ್ಲರಿಗೂ ಸ್ಪಷ್ಟ ಮೂಡಿದೆ. ಕಾಯ್ದು ನೋಡಬೇಕು. ಆದರೆ, ಮುಂದಿನ ನಡೆ ವಿಚಾರ ಮಾಡುವಂತದ್ದು ಎಂದು ಸರಣಿ ಟ್ವೀಟ್ ಮೂಲಕ ಪಕ್ಷದ ವರಿಷ್ಠರ ವಿರುದ್ಧವೇ ಹರಿಹಾಯ್ದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Campaign: ಕಾಂಗ್ರೆಸ್ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ
Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ
ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು
Temperature; ರಾಜ್ಯದಲ್ಲಿ ಮತ್ತೆ ದಿಢೀರ್ ಏರಿದ ತಾಪಮಾನ
ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ
MUST WATCH
ಹೊಸ ಸೇರ್ಪಡೆ
ಮಂಡ್ಯದಲ್ಲಿ ಐಸ್ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ
Panaji: ಸರಕಾರದ ಆ್ಯಪ್ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ
Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ
Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ
Bengaluru: ಅತಿಕ್ರಮಿಸಿ ಏರ್ಪೋರ್ಟ್ನಲ್ಲಿ ವಿಡಿಯೋ: ಯುಟ್ಯೂಬರ್ ಬಂಧನ