ಗುರುಗೆ ಅವಮಾನ: ಅಡ್ವಾಣಿ ಕೈ ಮುಗಿದರೆ ಕ್ಯಾರೇ ಎನ್ನದ ಮೋದಿ ಎಂದ ರಾಹುಲ್‌


Team Udayavani, Apr 20, 2019, 6:00 AM IST

35

ಸಮಾವೇಶದಲ್ಲಿ ನಾಯ್ಡು, ದೇವೇಗೌಡ, ರಾಹುಲ್‌ ಕುಶಲೋಪರಿ.

ಚಿಕ್ಕೋಡಿ/ರಾಯಚೂರು: ಪ್ರಧಾನಿ ನರೇಂದ್ರ ಮೋದಿ ಕಹಳೆ ಮೊಳಗಿಸಿ ಹೋದ ಬೆನ್ನಲ್ಲೇ ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ಲೋಕಸಭೆ ಸಮರಕ್ಕೆ ಕಾವು ನೀಡಿದ್ದಾರೆ. ಚಿಕ್ಕೋಡಿ, ರಾಯಚೂರಿನಲ್ಲಿ ಕಾಂಗ್ರೆಸ್‌ ಸಮಾವೇಶದಲ್ಲಿ ಪ್ರಧಾನಿ ಮೋದಿಗೆ ಹಿರಿಯರಿಗೆ ಗೌರವ ಕೊಡುವ ಕುರಿತು ಪಾಠ ಮಾಡಿದ್ದಾರೆ. ಚಿಕ್ಕೋಡಿಯಲ್ಲಿ ಶುಕ್ರವಾರ ಕಾಂಗ್ರೆಸ್‌ ಅಭ್ಯರ್ಥಿ ಪ್ರಕಾಶ ಹುಕ್ಕೇರಿ ಪರ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ದೇಶದಲ್ಲಿ ಗುರುವಿಗೆ ನೀಡಲಾಗುವ ಸ್ಥಾನದಷ್ಟು ದೊಡ್ಡದ್ದು ಬೇರಿಲ್ಲ. ಆದರೆ, ಪ್ರಧಾನಿ ನರೇಂದ್ರ ಮೋದಿ ಬಿಜೆಪಿ ಹಿರಿಯ ನಾಯಕ ಎಲ್‌.ಕೆ.ಅಡ್ವಾಣಿ ಜೊತೆ ನಡೆದುಕೊಳ್ಳುವ ರೀತಿ ಅಪಮಾನಕಾರಿಯಾದುದು. ಮೋದಿ ಅವರು ತಮ್ಮ ಮುಂದೆ ಅಡ್ವಾಣಿ ಕೈಕಟ್ಟಿ ನಿಲ್ಲುವಂತೆ ಮಾಡುತ್ತಾರೆ. ಅಡ್ವಾಣಿ ನಮಸ್ಕಾರ ಮಾಡಿದರೆ ಮೋದಿ ಬೇರೆ ಕಡೆ ನೋಡುತ್ತಾರೆ. ಹಿರಿಯರನ್ನು ಕೀಳಾಗಿ ಕಾಣುವ ಮೋದಿಗೆ ನಾಚಿಕೆಯಾಗಬೇಕು ಎಂದರು.

2019ರಲ್ಲಿ ನಡೆಯುವ ಚುನಾವಣೆಯು ವಿಚಾರ ಆಧಾರಿತ ಚುನಾವಣೆ ಆಗಲಿದೆ. ಕಾಂಗ್ರೆಸ್‌ ಸತ್ಯ, ನ್ಯಾಯ ಹಾಗೂ ಪ್ರೀತಿಯ ವಿಚಾರ ಆಧಾರಿತ ಚುನಾವಣೆ ಮಾಡುತ್ತಿದ್ದರೆ, ಬಿಜೆಪಿ ಸುಳ್ಳು, ಅನ್ಯಾಯ ಹಾಗೂ ದ್ವೇಷದ ಮೂಲಕ ಹೋಗುತ್ತಿದೆ. ಕಳೆದ ಐದು ವರ್ಷ ಪ್ರಧಾನಿ ನರೇಂದ್ರ ಮೋದಿ ಅವರು ಸತ್ಯ ಹಾಗೂ ನ್ಯಾಯಕ್ಕೆ ವಿರುದ್ಧವಾಗಿ ನಡೆದುಕೊಂಡಿದ್ದಾರೆ. ಭರವಸೆಗಳ ಮೇಲೆ ಭರವಸೆ ನೀಡಿದ್ದಾರೆ. ನಿಮಗೆ ಸತ್ಯ ಹಾಗೂ ನ್ಯಾಯ ಬೇಕೋ ಅಥವಾ ಅನ್ಯಾಯ, ಸುಳ್ಳು ಭರವಸೆಗಳ ಸರ್ಕಾರ ಬೇಕೋ ಎಂಬುದನ್ನು ನಿರ್ಣಯ ಮಾಡಿ ಎಂದರು.

ನನ್ನನ್ನು ಪ್ರಧಾನಿಯನ್ನಾಗಿ ಮಾಡಬೇಡಿ. ದೇಶದ ಚೌಕಿದಾರನನ್ನಾಗಿ ಮಾಡಿ ಎಂದು ಮೋದಿ ಹೇಳುತ್ತಾರೆ . ಆದರೆ ಅವರು ರೈತರು ಹಾಗೂ ಬಡವರ ಮನೆಯ ಚೌಕಿದಾರರಾಗುವ ಬದಲು ಅಂಬಾನಿ,
ನೀರವ ಮೋದಿ ಮೊದಲಾದವರ ಮನೆಯ ಚೌಕಿದಾರರಾಗಿದ್ದಾರೆ. ದೇಶದ ಜನರ ಹಾಗೂ ರೈತರ ಸಂಪತ್ತು ಲೂಟಿ ಮಾಡಿ  ಅಂಬಾನಿ, ನೀರವ ಮೋದಿ ಹಾಗೂ ವಿಜಯ ಮಲ್ಯ ಅವರಿಗೆ ಕೊಟ್ಟಿದ್ದಾರೆ.
ನಮ್ಮ ಸರ್ಕಾರ ಬಂದ ಮೇಲೆ ಒಂದೇ ಹೊಡೆತಕ್ಕೆ ಈ ಹಣವನ್ನು ಮರಳಿ ತರುತ್ತೇವೆ ಎಂದು ರಾಹುಲ್‌ ಭರವಸೆ ನೀಡಿದರು.

ರೈತರಿಗೆ ಬ್ಯಾಂಕ್‌ಗಳಿಂದ ಮುಕ್ತಿ: ಕೇಂದ್ರದಲ್ಲಿ ಮತ್ತೆ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕ ಬಂದರೆ ರೈತರು ಸಾಲ ಮರು ಪಾವತಿ ವಿಷಯದಲ್ಲಿ ಜೈಲಿಗೆ ಹೋಗದಂತೆ ಕಾನೂನಿನಲ್ಲಿ ಬದಲಾವಣೆ ತರಲಾಗುವುದು.
ಸಾಲ ಮರುಪಾವತಿ ವಿಷಯದಲ್ಲಿ ಈಗಿರುವ ನಿಯಮಾವಳಿಗಳನ್ನು ಸಂಪೂರ್ಣ ಮಾರ್ಪಾಡು ಮಾಡಲಾಗುತ್ತದೆ. ಇದರಿಂದ ರೈತರು ಜೈಲಿಗೆ ಹೋಗುವುದನ್ನು ತಪ್ಪಿಸಲಾಗುವುದು. ಅಷ್ಟೇ ಅಲ್ಲ ಬ್ಯಾಂಕ್‌ಗಳಿಂದ ಉಂಟಾಗುವ ತೊಂದರೆ ತಪ್ಪಿಸಲಾಗುವುದು ಎಂದರು.

ಪ್ರಧಾನಿ ಮೋದಿ ಸರ್ಕಾರ ಮಾಡದ ಅಭಿವೃದ್ಧಿ ಕೆಲಸಗಳನ್ನು ನಾವು ಮಾಡಿ ತೋರಿಸುತ್ತೇವೆ. ದೇಶದಲ್ಲಿ ನರೇಂದ್ರ ಮೋದಿ ಅವರು ರೈತರ ಸಾಲಮನ್ನಾ ಮಾಡಿಲ್ಲ. ಆದರೆ ಕಾಂಗ್ರೆಸ್‌ ಆಡಳಿತವಿರುವ
ರಾಜ್ಯಗಳಲ್ಲಿ ಒಂದೇ ದಿನದಲ್ಲಿ ರೈತರ ಸಾಲಮನ್ನಾ ಮಾಡಲಾಗಿದೆ. ಕರ್ನಾಟಕದಲ್ಲಿ 40 ಸಾವಿರ ಕೋಟಿ ರೂ.ರೈತರ ಸಾಲ ಮನ್ನಾ ಮಾಡಲಾ ಗಿದೆ. ನರೇಂದ್ರ ಮೋದಿ ದೇಶದ ಹಣ ಲೂಟಿ ಮಾಡಿ ವಿದೇಶಕ್ಕೆ ಪರಾರಿ  ಯಾದವರ ಬಗ್ಗೆ ಚಕಾರ ಎತ್ತುವುದಿಲ್ಲ. ನೋಟು ನಿಷೇಧ ದಿಂದ ದೇಶಕ್ಕೆ ದೊಡ್ಡ ಆಘಾತವಾಗಿದೆ. ಮೋದಿ ಅವರು ತಮ್ಮ ಐದು ವರ್ಷಗಳ ಸಾಧನೆಗಳ ಬಗ್ಗೆ ಪ್ರಸ್ತಾಪ ಮಾಡುತ್ತಿಲ್ಲ. ರೈತರ ಹಾಗೂ ಬಡವರ ಬಗ್ಗೆ ಹೇಳುತ್ತಿಲ್ಲ. ಕೇವಲ ಸೈನಿಕರ ವಿಷಯ ಮಾತ್ರ ಪ್ರಸ್ತಾಪಿಸುತ್ತಾ ಹುಸಿ ಮಾತುಗಳನ್ನು ಹರಿಬಿಡುತ್ತಿದ್ದಾರೆ. ಜನರು ಇದನ್ನು ನಂಬುವುದಿಲ್ಲ ಎಂದರು.

ವರ್ಷದಲ್ಲಿ ಎರಡು ಬಗೆಯ ಬಜೆಟ್‌
ಕೇಂದ್ರದಲ್ಲಿ ಕಾಂಗ್ರೆಸ್‌ ಸರ್ಕಾರ ಅ ಧಿಕಾರಕ್ಕೆ ಬಂದರೆ ಒಂದು ವರ್ಷದ ಕಾಲಾವಧಿಯಲ್ಲಿ ಒಂದು ರಾಷ್ಟ್ರೀಯ ಹಾಗೂ ಇನ್ನೊಂದು ರೈತರ ಪರವಾಗಿ ಎರಡು ಬಗೆಯ ಬಜೆಟ್‌ ಮಂಡನೆ ಮಾಡಲಾಗುವುದು. ದೇಶದಲ್ಲಿ 22 ಲಕ್ಷ ಸರ್ಕಾರಿ ಹುದ್ದೆಗಳು ಖಾಲಿ ಇದ್ದು, ಅವುಗಳನೆಲ್ಲ ಭರ್ತಿ ಮಾಡಲಾಗುವುದು. ಪಂಚಾಯತಿಗಳಲ್ಲಿ 10 ಲಕ್ಷ ಜನರಿಗೆ ಉದ್ಯೋಗ ನೀಡಲಾಗುವುದು. ವಿದೇಶಗಳಲ್ಲಿ ಸುರಕ್ಷಿತವಾಗಿರುವ ಲೂಟಿಕೋರರಿಂದ ಹಣ ವಸೂಲಿ ಮಾಡಿ ರೈತರ ಹಾಗೂ ಬಡವರ ಖಾತೆಗಳಿಗೆ ಹಾಕಲಾಗುವುದು. ನೂತನ ತಂತ್ರಜ್ಞಾನ ಅಳವಡಿಕೆಗೆ ಆದ್ಯತೆ ನೀಡಲಾಗುವುದು. ನೂತನ ಉದ್ಯಮ ವ್ಯವಸ್ಥೆಗೆ ಹೆಚ್ಚು ಅನುಕೂಲ ಮಾಡಿಕೊಡಲಾಗುವುದು ಎಂದು ಭರವಸೆ ನೀಡಿದರು.

ನ್ಯಾಯ ಯೋಜನೆ
ಕೇಂದ್ರದಲ್ಲಿ ನಮ್ಮ ಸರ್ಕಾರ ಬಂದರೆ ಬಡವರ ಖಾತೆಗಳಿಗೆ ವರ್ಷಕ್ಕೆ 72000 ರೂ. ಹಣವನ್ನು ನೇರವಾಗಿ ಜಮಾ ಮಾಡಲಾಗು ವುದು. ನ್ಯಾಯ ಯೋಜನೆ ಹೆಸರಿನಲ್ಲಿ ಈ ಹಣ ಬಡವರಿಗೆ ತಲುಪ ಲಿದೆ. ಈಗಾಗಲೇ ಶೇ.20ರಷ್ಟು ಬಡ ಕುಟುಂಬಗಳ ಪಟ್ಟಿ ಸಿದ್ಧಪಡಿಸಲಾಗಿದೆ. ಅನಿಲ ಅಂಬಾನಿ,
ವಿಜಯ ಮಲ್ಯ ಅವರಿಂದ ಹಣ ವಸೂಲಿ ಮಾಡಿ ಅದನ್ನು ಜನರಿಗೆ ನೀಡಲಾಗುವುದು ಎಂದರು.

ಟಾಪ್ ನ್ಯೂಸ್

OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?‌

OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?‌

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

17

ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್‌ ರೋಲ್ ನಲ್ಲಿ ಫಾಫಾ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

Apex

CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

vijayapura

ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?‌

OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?‌

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

17

ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್‌ ರೋಲ್ ನಲ್ಲಿ ಫಾಫಾ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

12-malpe

Malpe: ಶ್ರೀ ವಡಭಾಂಡ ಬಲರಾಮ ದೇವಸ್ಥಾನ: ತೋರಣ ಮುಹೂರ್ತ, ಉಗ್ರಾಣ ಮುಹೂರ್ತ ಸಂಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.