Shankaranarayana: ನೇಣು ಬಿಗಿದುಕೊಂಡು ವೃದ್ಧ ಆತ್ಮಹತ್ಯೆ
Team Udayavani, Mar 1, 2024, 10:05 PM IST
ಸಿದ್ದಾಪುರ: ಶಂಕರನಾರಾಯಣ ಗ್ರಾಮದ ಅಣ್ಣಪ್ಪ (68) ಅವರು ಮನೆಯ ಎದುರಿನ ಹಾಡಿಯಲ್ಲಿ ಫೆ.29ರಂದು ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಸ್ನೇಹಿತನ ಸಹಾಯದಿಂದ ತಂದೆಯನ್ನು ಹಾಲಾಡಿ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಪರೀಕ್ಷಿಸಿದ ವೈದ್ಯರು ಮೃತ ಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ ಎಂದು ಪುತ್ರ ದಿನೇಶ್ ಅವರು ಪೊಲೀಸರಿಗೆ ದೂರು ನೀಡಿದ್ದಾರೆ.
ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.