ಬಿಎಸ್ ವೈ ಎದುರು ಶರತ್ ಬಚ್ಚೇಗೌಡಗೆ ಮುಖಭಂಗ: ಪ್ರಮಾಣವಚನ ಕಾರ್ಯಕ್ರಮದಲ್ಲಿ ಆಗಿದ್ದೇನು?
Team Udayavani, Dec 22, 2019, 2:03 PM IST
ಬೆಂಗಳೂರು: ವಿಧಾನಸಭಾ ಉಪಚುನಾವಣೆಯಲ್ಲಿ ಗೆದ್ದ ನೂತನ ಶಾಸಕರ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಪಕ್ಷೇತರ ಶಾಸಕ ಶರತ್ ಬಚ್ಚೇಗೌಡಗೆ ಮುಖಭಂಗವಾದ ಘಟನೆ ನಡೆದಿದೆ.
ರವಿವಾರ ಬೆಳಿಗ್ಗೆ ವಿಧಾನಸಭೆಯ ಬ್ಯಾಂಕ್ವೆಟ್ ಹಾಲ್ ನಲ್ಲಿ ನೂತನವಾಗಿ ಆಯ್ಕೆಯಾದ ಶಾಸಕರ ಪ್ರಮಾಣ ವಚನ ಕಾರ್ಯಕ್ರಮ ನಡೆಯಿತು. ವಿಧಾನಸಭಾ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ನೂತನ ಶಾಸಕರಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಬಿಜೆಪಿ ಶಾಸಕರೊಂದಿಗೆ ಪ್ರಮಾಣ ವಚನ ಸ್ವೀಕರಿಸಿದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಜೊತೆ ಮಾತನಾಡಲು ಪ್ರಯತ್ನ ಪಟ್ಟು ವಿಫಲರಾದರು.
ಪ್ರಮಾಣ ವಚನ ಕಾರ್ಯಕ್ರಮ ಮುಗಿದ ಬಳಿಕ ಸಿಎಂ ಯಡಿಯೂರಪ್ಪ ಜೊತೆ ಶರತ್ ಮಾತನಾಡಲು ಪ್ರಯತ್ನ ಪಟ್ಟರೂ ಸಾಧ್ಯವಾಗಲಿಲ್ಲ. ಯಡಿಯೂರಪ್ಪ ಅವರನ್ನು ಕರೆದರೂ ಅವರು ತಿರುಗಿಯೂ ನೋಡದೇ ಹೋಗಿದ್ದು ಶರತ್ ಬಚ್ಚೇಗೌಡರಿಗೆ ಮುಖಭಂಗವಾಯಿತು ಎಂದು ವರದಿಯಾಗಿದೆ.
ಅಷ್ಟೇ ಅಲ್ಲದೆ ಬಿಜೆಪಿ ಶಾಸಕರು ಗ್ರೂಫ್ ಫೋಟೊ ತೆಗೆಯುವಾಗ ಮೊದಲು ಶರತ್ ಫೋಟೋಗೆ ಬರಲು ನಿರಾಕರಿಸಿದರು ಎನ್ನಲಾಗಿದೆ. ನಂತರ ಒಲ್ಲದ ಮನಸ್ಸಿನಿಂದಲೇ ಗ್ರೂಪ್ ಫೋಟೋಗೆ ಶರತ್ ಪೋಸ್ ಕೊಟ್ಟರು.
15 ನೂತನ ಶಾಸಕರ ಪೈಕಿ ಇಂದು 13 ಮಂದಿ ಮಾತ್ರ ಸಮಾರಂಭದಲ್ಲಿ ಪಾಲ್ಗೊಂಡರು. ಕಾಂಗ್ರೆಸ್ ನ ಮಂಜುನಾಥ್ ಮತ್ತು ರಿಜ್ವಾನ್ ಅರ್ಷದ್ ಗೈರಾದರು.
ಬಿಜೆಪಿಯಲ್ಲಿದ್ದ ಶರತ್ ಬಚ್ಚೇಗೌಡ ಉಪಚುನಾವಣೆಯಲ್ಲಿ ಹೊಸಕೋಟೆ ಕ್ಷೇತ್ರದಲ್ಲಿ ಪಕ್ಷ ಟಿಕೆಟ್ ನೀಡದ ಹಿನ್ನಲೆಯಲ್ಲಿ ಪಕ್ಷೇತರವಾಗಿ ಸ್ಪರ್ಧಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ