ಪ್ರಧಾನಿ ಮೋದಿಗೆ ಬಹುಪರಾಕ್…ಜೈಪುರ್ ಸಾಹಿತ್ಯ ಸಮ್ಮೇಳನದಲ್ಲಿ ಶಶಿ ತರೂರ್ ಹೇಳಿದ್ದೇನು

ಇಷ್ಟೊಂದು ದೊಡ್ಡ ಅಂತರದಿಂದ ಬಿಜೆಪಿ ಜಯ ಸಾಧಿಸಲಿದೆ ಎಂಬುದನ್ನು ನಾವು ನಿರೀಕ್ಷಿಸಿರಲಿಲ್ಲ

Team Udayavani, Mar 14, 2022, 1:35 PM IST

ಪ್ರಧಾನಿ ಮೋದಿಗೆ ಬಹುಪರಾಕ್…ಜೈಪುರ್ ಸಾಹಿತ್ಯ ಸಮ್ಮೇಳನದಲ್ಲಿ ಶಶಿ ತರೂರ್ ಹೇಳಿದ್ದೇನು

ಜೈಪುರ್: ಪ್ರಧಾನಿ ನರೇಂದ್ರ ಮೋದಿ ಅವರು ಅಸಾಧಾರಣ ಉತ್ಸಾಹದ ಮತ್ತು ಕ್ರಿಯಾಶೀಲತೆಯ ವ್ಯಕ್ತಿಯಾಗಿದ್ದಾರೆ. ಅಷ್ಟೇ ಅಲ್ಲ ಇತ್ತೀಚೆಗೆ ನಡೆದ ಉತ್ತರಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲುವಿಗೆ ಅಪಾರ ಕೊಡುಗೆ ನೀಡಿದ್ದಾರೆ…ಇದು ಕಾಂಗ್ರೆಸ್ ಮುಖಂಡ ಶಶಿ ತರೂರ್ ಅವರ ಶ್ಲಾಘನೆಯ ನುಡಿಯಾಗಿದೆ.

ಇದನ್ನೂ ಓದಿ:ಬಾಡಿಗೆ ತಾಯ್ತನದ ಮೂಲಕ ಮಗು ಪಡೆದ ಬಳಿಕ ದೂರವಾದ ಎಲಾನ್ ಮಸ್ಕ್- ಗ್ರಿಮ್ಸ್

ಜೈಪುರ್ ಸಾಹಿತ್ಯೋತ್ಸವದಲ್ಲಿ ಮಾಧ್ಯಮ ಸಂವಾದದಲ್ಲಿ ಮಾತನಾಡಿದ ತರೂರ್, ಪ್ರಧಾನಿ ಮೋದಿಯವರು ರಾಜಕೀಯವಾಗಿ ಕೆಲವೊಂದು ಪರಿಣಾಮಕಾರಿ ಕೆಲಸ ಮಾಡಿದ್ದಾರೆ. ಉತ್ತರಪ್ರದೇಶದಲ್ಲಿ ಇಷ್ಟೊಂದು ದೊಡ್ಡ ಅಂತರದಿಂದ ಬಿಜೆಪಿ ಜಯ ಸಾಧಿಸಲಿದೆ ಎಂಬುದನ್ನು ನಾವು ನಿರೀಕ್ಷಿಸಿರಲಿಲ್ಲ. ಆದರೆ ನಮ್ಮ ಊಹೆಗೂ ಮೀರಿ ಗೆಲುವು ಸಾಧಿಸಿದ್ದಾರೆ ಎಂದು ಹೇಳಿದರು.

ಉತ್ತರಪ್ರದೇಶ ಚುನಾವಣಾ ಫಲಿತಾಂಶದ ಕುರಿತು ಅಭಿಪ್ರಾಯವ್ಯಕ್ತಪಡಿಸಿದ ಅವರು, ಮುಂದೊಂದು ದಿನ ದೇಶದ ಮತದಾರರು ಭಾರತೀಯ ಜನತಾ ಪಕ್ಷವನ್ನು ಅಚ್ಚರಿಗೆ ದೂಡಲಿದ್ದಾರೆ. ಆದರೆ ಇಂದು ಜನರು ಬಿಜೆಪಿಯನ್ನು ಆಯ್ಕೆ ಮಾಡಿದ್ದಾರೆ ಎಂದು ತಿಳಿಸಿದರು.

ಪ್ರಧಾನಿ ನರೇಂದ್ರ ಮೋದಿ ಅವರನ್ನು ಹೊಗಳಿರುವ ಕಾಂಗ್ರೆಸ್ ಮುಖಂಡ ಶಶಿ ತರೂರ್ ಈ ಸಂದರ್ಭದಲ್ಲಿ ಟೀಕೆಯನ್ನೂ ವ್ಯಕ್ತಪಡಿಸಿದ್ದಾರೆ. ಅವರು ನಮ್ಮ ಸಮಾಜದಲ್ಲಿ ದೇಶವನ್ನು ಕೋಮು ಮತ್ತು ಧಾರ್ಮಿಕ ನೆಲೆಗಟ್ಟಿನಲ್ಲಿ ವಿಭಜಿಸುವ ಶಕ್ತಿಗಳನ್ನು ಹುಟ್ಟುಹಾಕಿರುವುದು ದುರದೃಷ್ಟಕರ ಎಂದು ದೂರಿದರು.

ಉತ್ತರಪ್ರದೇಶದ ವಿಚಾರದಲ್ಲಿ ಚುನಾವಣೋತ್ತರ ಸಮೀಕ್ಷೆ ಬಹಿರಂಗವಾಗುವವರೆಗೂ ನನ್ನ ಮನಸ್ಸಿನಲ್ಲಿ ಯಾವುದೇ ಪ್ರಶ್ನೆಗಳು ಇದ್ದಿರಲಿಲ್ಲ. ಬಹುತೇಕ ಜನರು ಜಿದ್ದಾಜಿದ್ದಿನ ಸ್ಪರ್ಧೆಯನ್ನೇ ನಿರೀಕ್ಷಿಸಿದ್ದರು. ಕೆಲವರು ಸಮಾಜವಾದಿ ಪಕ್ಷ ಮುಂದಿರುವುದಾಗಿ ವ್ಯಾಖ್ಯಾನಿಸಿದ್ದರು.

ಉತ್ತರಪ್ರದೇಶ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಸಾಧನೆ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ತರೂರ್, ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಪಕ್ಷದ ಪರವಾಗಿ ಗಮನಾರ್ಹ ಪ್ರಚಾರವನ್ನು ಕೈಗೊಂಡಿದ್ದರು. ನನ್ನ ಊಹೆಯ ಪ್ರಕಾರ, ಕೇವಲ ಒಬ್ಬ ವ್ಯಕ್ತಿಯ ಪ್ರಚಾರದ ಆಧಾರದ ಮೇಲೆ ನಂಬಿಕೆಯನ್ನಿಡುವ ತಪ್ಪು ನಿರ್ಧಾರ ಕಾಂಗ್ರೆಸ್ ಪಕ್ಷ ಮಾಡಿಲ್ಲ ಎಂದು ಭಾವಿಸುವುದಾಗಿ ಹೇಳಿದರು.

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.