ಮರಾಠಾ ಪ್ರಾಧಿಕಾರ ಅಭಿವೃದ್ಧಿಗೆ ಸಂಬಂಧಿಸಿದ್ದು, ಭಾಷೆಗಲ್ಲ: ಸಚಿವೆ ಜೊಲ್ಲೆ ಸಮರ್ಥನೆ
Team Udayavani, Nov 19, 2020, 4:15 PM IST
ಧಾರವಾಡ: ಮರಾಠಾ ಪ್ರಾಧಿಕಾರ ರಚನೆ ಇದು ಮರಾಠಾ ಭಾಷೆಗೆ ಸಂಬಂಧಿಸಿದ್ದಲ್ಲ ಬದಲಾಗಿ ಸಮುದಾಯಕ್ಕೆ ಸಂಬಂಧಪಟ್ಟಿದ್ದು ಎಂದು ರಾಜ್ಯದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಹೇಳಿದ್ದಾರೆ.
ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದು ಮರಾಠಾ ಸಮುದಾಯದವರಿಗಾಗಿ ತರುತ್ತಿರುವ ಪ್ರಾಧಿಕಾರ. ಭಾಷೆ ಬಗ್ಗೆ ಇದರಲ್ಲಿ ಯಾವುದೇ ವಿಷಯಗಳಿಲ್ಲ. ಮರಾಠಾ ಸಮುದಾಯದವರು ಶೈಕ್ಷಣಿಕವಾಗಿ ಹಾಗೂ ಆರ್ಥಿಕವಾಗಿ ಈ ಮರಾಠಾ ಪ್ರಾಧಿಕಾರ ರಚನೆ ಮಾಡಲಾಗುತ್ತಿದೆ. ಹಿಂದುಳಿದ ಸಮುದಾಯವರ ಏಳಿಗೆಗಾಗಿ ಪ್ರಾಧಿಕಾರ ರಚನೆ ಮಾಡಲಾಗುತ್ತಿದೆ. ಇದರಲ್ಲಿ ಭಾಷೆಯ ಯಾವುದೇ ವಿಷಯ ಇಲ್ಲ ಎಂದರು.
ಬಿಜೆಪಿ ಪಕ್ಷವು ಮೂಲ ಬಿಜೆಪಿಗರನ್ನು ಕಡೆಗಣಿಸುತ್ತಿಲ್ಲ. ಯಾರಿಗೂ ಅನ್ಯಾಯವಾಗದಂತೆ ಮಣೆ ಹಾಕಲಿದೆ. ಯಡಿಯೂರಪ್ಪನವರ ನೇತೃತ್ವದಲ್ಲಿ ರಾಜ್ಯ ಸರ್ಕಾರ ಉತ್ತಮ ಆಡಳಿತ ನೀಡುತ್ತಿದೆ. ಯಾವ ಶಾಸಕರಿಗೂ ಅನ್ಯಾಯ ಮಾಡುತ್ತಿಲ್ಲ. ಕೊರೊನಾ ಹಾಗೂ ಪ್ರವಾಹ ಪರಿಸ್ಥಿತಿಯಿಂದ ಅನುದಾನದ ಕೊರತೆಯಾಗಿದೆಯಷ್ಟೆ ಎಂದರು.
ಇದನ್ನೂ ಓದಿ:ಪಶ್ಚಿಮ ಬಂಗಾಳ: ಪ್ಲಾಸ್ಟಿಕ್ ಕಾರ್ಖಾನೆಯಲ್ಲಿ ಸ್ಫೋಟ ಐವರು ಸಾವು! ಹಲವರಿಗೆ ಗಂಭೀರ ಗಾಯ
ಲಾಕಡೌನ್ ಅವಧಿಯಲ್ಲಿ ಕೆಲವು ಜಿಲ್ಲೆಗಳಲ್ಲಿ ಬಾಲ್ಯ ವಿವಾಹಗಳಾಗಿವೆ. ದೂರು ಕೂಡ ದಾಖಲಾಗುವುದು ಸಮಸ್ಯೆಯಾಗಿತ್ತು. ಆದರೆ, ಈಗ ಇಂತಹ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Paper leak case: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ; 15 ಮಂದಿ ಆರೋಪಿಗಳು ಖುಲಾಸೆ
MUST WATCH
ಹೊಸ ಸೇರ್ಪಡೆ
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್