ಮಕ್ಕಳ ಆರೈಕೆಗೆ ಜಿಲ್ಲೆಗೊಂದು ಕೋವಿಡ್ ಕೇರ್ ಸೆಂಟರ್ : ಸಚಿವೆ ಶಶಿಕಲಾ ಜೊಲ್ಲೆ
ಅಂಗನವಾಡಿ ಕಾರ್ಯಕರ್ತೆಯರು ಕೋವಿಡ್ನಿಂದ ಮೃತಪಟ್ಟರೆ 30 ಲ. ರೂ. ಪರಿಹಾರ
Team Udayavani, May 24, 2021, 5:30 AM IST
ಬೆಂಗಳೂರು: ಕೊರೊನಾ ವಾರಿಯರ್ಸ್ ಜವಾ ಬ್ದಾರಿ ನೋಡಿಕೊಳ್ಳುವ ಮುಂಚೂಣಿ ಇಲಾಖೆ ಗಳಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಯೂ ಒಂದಾಗಿದೆ. ಈ ಇಲಾಖೆ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕಾರ್ಯಕರ್ತೆಯರ ಸೇವೆ, ಮಕ್ಕಳ ಆರೋಗ್ಯ ಕಾಪಾಡಲು ಇಲಾಖೆ ಕೈಗೊಂಡ ಕ್ರಮಗಳ ಕುರಿತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವ ಶಶಿಕಲಾ ಜೊಲ್ಲೆ ಉದಯವಾಣಿಯೊಂದಿಗೆ ಮಾತನಾಡಿದ್ದಾರೆ.
– ಕೊರೊನಾ ನಿಯಂತ್ರಿಸಲು ಇಲಾಖೆಯಿಂದ ಏನು ಕ್ರಮ ಕೈಗೊಳ್ಳುತ್ತಿದ್ದೀರಾ ?
65 ಸಾವಿರ ಅಂಗನವಾಡಿ ಕಾರ್ಯಕರ್ತೆ ಯರು ಫ್ರಂಟ್ಲೆçನ್ ವಾರಿಯರ್ಸ್ ಆಗಿ ಕಾರ್ಯ ನಿರ್ವ ಹಿಸುತ್ತಿದ್ದಾರೆ. ಪ್ರತೀ ದಿನ ಮನೆ ಮನೆಗೆ ತೆರಳಿ ಸಮೀಕ್ಷೆ, ಕೊರೊನಾ ಸೋಂಕಿತರ ಆರೋಗ್ಯ ವಿಚಾ ರಿಸುವ ಕೆಲಸ ಮಾಡುತ್ತಿದ್ದಾರೆ. ಅಂಗನವಾಡಿ ಮಕ್ಕಳಿಗೆ, ಗರ್ಭಿಣಿಯರಿಗೆ ಮನೆಗೆ ಆಹಾರ ತಲು ಪಿ ಸು ವುದು. ಮಕ್ಕಳಿಗೆ ಚುಚ್ಚು ಮದ್ದು ಹಾಕಿಸುವ ಕೆಲಸ ಮಾಡುತ್ತಿದ್ದಾರೆ. ಗ್ರಾಮ ಪಂಚಾಯತ್ ಟಾಸ್ಕ್ ಫೋರ್ಸ್ ಸದಸ್ಯರಾಗಿ ಕಾರ್ಯ ನಿರ್ವ ಹಿಸುತ್ತಿದ್ದಾರೆ.
– ಗ್ರಾಮೀಣ ಭಾಗದ ಹಿರಿಯ ನಾಗರಿಕರಿಗೆ ಇನ್ನೂ ಮೊದಲನೇ ಡೋಸ್ ಲಸಿಕೆ ಹಾಕಿಸಲು ಇಲಾಖೆ ಏನು ಕ್ರಮ ಕೈಗೊಂಡಿದೆ ?
ಹಿರಿಯ ನಾಗರಿಕರು ಹಾಗೂ ವಿಕಲ ಚೇತನರ ಬಗ್ಗೆ ಇಲಾಖೆ ಕಾಳಜಿ ವಹಿಸಿದೆ.
ಅನೇಕರು ವೃದ್ಧಾ ಶ್ರಮ ದಲ್ಲಿರುತ್ತಾರೆ. ಹಾಸಿಗೆ ಹಿಡಿದಿರುತ್ತಾರೆ. ಕೋವಿಡ್ ಲಸಿಕೆ ಕೇಂದ್ರಕ್ಕೆ ಬರಲು ಆಗದವರಿಗೆ ಅವರ ಮನೆಗಳಿಗೆ ಹೋಗಿ ಲಸಿಕೆ ನೀಡಲು ಆರೋಗ್ಯ ಸಚಿವರ ಜತೆ ಮಾತನಾಡಿದ್ದೇನೆ. ಶೀಘ್ರ ವೇ ಅವರಿಗೆ ಲಸಿಕೆ ನೀಡಲು ಕ್ರಮ ಕೈಗೊಳ್ಳಲಾಗುವುದು.
– ಮೂರನೇ ಅಲೆ ಮಕ್ಕಳಿಗೆ ಅಪಾಯಕಾರಿ ಎನ್ನಲಾಗಿದೆ. ಇದನ್ನು ಎದುರಿಸಲು ಏನು ಸಿದ್ಧತೆ ಮಾಡಿದ್ದೀರಿ?
ಮಕ್ಕಳ ರಕ್ಷಣೆಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಎಲ್ಲ ಜಿಲ್ಲೆಗಳಲ್ಲಿ ಕೋವಿಡ್ ಕೇರ್ ಕೇಂದ್ರ ತೆರೆಯಲು ತೀರ್ಮಾ ನಿಸಲಾಗಿದೆ. 1098 ಟೋಲ್ ಫ್ರೀ ನಂಬರ್ ತೆರೆಯಲಾಗಿದೆ. ಅಗತ್ಯ ಬಿದ್ದರೆ, ಜಿಲ್ಲಾ ಕೇಂದ್ರಗಳಲ್ಲಿ ಮಕ್ಕಳ ವಿಶೇಷ ಕೋವಿಡ್ ಕೇರ್ ಕೇಂದ್ರ ತೆರೆದು ಅಲ್ಲಿ ಚಿಕಿತ್ಸೆ ನೀಡಲು ಕ್ರಮ ಕೈಗೊಳ್ಳಲಾಗುತ್ತಿದೆ.
– ನೇರವಾಗಿ ಯಾರಾದರೂ ಮಕ್ಕಳನ್ನು ದತ್ತು ತೆಗೆದುಕೊಳ್ಳಲು ಅವಕಾಶ ಇದೆಯಾ?
ಅವಕಾಶವಿಲ್ಲ. ಕೊರೊನಾದಿಂದ ತಂದೆ, ತಾಯಿ ನಿಧನ ಹೊಂದಿದರೆ, ಸರಕಾರ ಮಕ್ಕಳ ರಕ್ಷಣೆ ಮಾಡ ಲಿದೆ. ಯಾರಾದರೂ ಮಕ್ಕಳನ್ನು ದತ್ತು ತೆಗೆದು ಕೊಳ್ಳಲು ಮುಂದೆ ಬಂದರೆ ಕಾನೂನು ಪ್ರಕಾರ ದತ್ತು ನೀಡುವ ವ್ಯವಸ್ಥೆ ಮಾಡಲಾಗುವುದು.
– ಆಶಾ, ಅಂಗನವಾಡಿ ಕಾರ್ಯಕರ್ತೆಯರ ರಕ್ಷಣೆಗೆ ಯಾವ ರೀತಿಯ ಕ್ರಮ ಕೈಗೊಂಡಿದ್ದೀರಾ?
ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆ ಯರಿಗೆ ಮಾಸ್ಕ್, ಸ್ಯಾನಿಟೈಸರ್, ಗ್ಲೌಸ್ ನೀಡಲಾ ಗುತ್ತಿದೆ. ಕೋವಿಡ್ನಿಂದ ಮೃತರಾದರೆ 30 ಲಕ್ಷ ರೂ. ವಿಮೆ ಪರಿಹಾರ ನೀಡಲಾಗುತ್ತಿದೆ. ಕಳೆದ ವರ್ಷ ಮೃತಪಟ್ಟ 25 ಅಂಗನವಾಡಿ ಕಾರ್ಯಕರ್ತೆಯರಿಗೆ ಪರಿಹಾರ ನೀಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?
Rama Navami 2024: ರಾಮ ನವಮಿ ಇತಿಹಾಸವೇನು? ಆಚರಣೆ ಮಾಡುವ ವಿಧಾನ ಹೇಗೆ…
Rama Navami: ಶ್ರೀ ರಾಮನ ಹೆಜ್ಜೆಗಳು ಬದುಕಿನ ಆದರ್ಶವಾಗಲಿ… ಪೇಜಾವರ ಶ್ರೀ
Rama Navami 2024: April 17ರಂದು ಶ್ರೀರಾಮ ನವಮಿ- ಅಯೋಧ್ಯೆಯಲ್ಲಿ ವಿಶೇಷ ಪೂಜೆ, ಉತ್ಸವ
Rama Navami 2024: ನವಮಿಗೆ ಬಾಲಕರಾಮನ ಹಣೆಗೆ ಸೂರ್ಯ ತಿಲಕ