ಮಕ್ಕಳ ಆರೈಕೆಗೆ ಜಿಲ್ಲೆಗೊಂದು ಕೋವಿಡ್‌ ಕೇರ್‌ ಸೆಂಟರ್‌ : ಸಚಿವೆ ಶಶಿಕಲಾ ಜೊಲ್ಲೆ

ಅಂಗನವಾಡಿ ಕಾರ್ಯಕರ್ತೆಯರು ಕೋವಿಡ್‌ನಿಂದ ಮೃತಪಟ್ಟರೆ 30 ಲ. ರೂ. ಪರಿಹಾರ

Team Udayavani, May 24, 2021, 5:30 AM IST

ಮಕ್ಕಳ ಆರೈಕೆಗೆ ಜಿಲ್ಲೆಗೊಂದು ಕೋವಿಡ್‌ ಕೇರ್‌ ಸೆಂಟರ್‌ : ಸಚಿವೆ ಶಶಿಕಲಾ ಜೊಲ್ಲೆ

ಬೆಂಗಳೂರು: ಕೊರೊನಾ ವಾರಿಯರ್ಸ್‌ ಜವಾ ಬ್ದಾರಿ ನೋಡಿಕೊಳ್ಳುವ ಮುಂಚೂಣಿ ಇಲಾಖೆ ಗಳಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಯೂ ಒಂದಾಗಿದೆ. ಈ ಇಲಾಖೆ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕಾರ್ಯಕರ್ತೆಯರ ಸೇವೆ, ಮಕ್ಕಳ ಆರೋಗ್ಯ ಕಾಪಾಡಲು ಇಲಾಖೆ ಕೈಗೊಂಡ ಕ್ರಮಗಳ ಕುರಿತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವ ಶಶಿಕಲಾ ಜೊಲ್ಲೆ ಉದಯವಾಣಿಯೊಂದಿಗೆ ಮಾತನಾಡಿದ್ದಾರೆ.

– ಕೊರೊನಾ ನಿಯಂತ್ರಿಸಲು ಇಲಾಖೆಯಿಂದ ಏನು ಕ್ರಮ ಕೈಗೊಳ್ಳುತ್ತಿದ್ದೀರಾ ?
65 ಸಾವಿರ ಅಂಗನವಾಡಿ ಕಾರ್ಯಕರ್ತೆ ಯರು ಫ್ರಂಟ್‌ಲೆçನ್‌ ವಾರಿಯರ್ಸ್‌ ಆಗಿ ಕಾರ್ಯ ನಿರ್ವ  ಹಿಸುತ್ತಿದ್ದಾರೆ. ಪ್ರತೀ ದಿನ ಮನೆ ಮನೆಗೆ ತೆರಳಿ ಸಮೀಕ್ಷೆ, ಕೊರೊನಾ ಸೋಂಕಿತರ ಆರೋಗ್ಯ ವಿಚಾ ರಿಸುವ ಕೆಲಸ ಮಾಡುತ್ತಿದ್ದಾರೆ. ಅಂಗನವಾಡಿ ಮಕ್ಕಳಿಗೆ, ಗರ್ಭಿಣಿಯರಿಗೆ ಮನೆಗೆ ಆಹಾರ ತಲು ಪಿ ಸು ವುದು. ಮಕ್ಕಳಿಗೆ ಚುಚ್ಚು ಮದ್ದು ಹಾಕಿಸುವ ಕೆಲಸ ಮಾಡುತ್ತಿದ್ದಾರೆ. ಗ್ರಾಮ ಪಂಚಾಯತ್‌ ಟಾಸ್ಕ್ ಫೋರ್ಸ್‌ ಸದಸ್ಯರಾಗಿ ಕಾರ್ಯ ನಿರ್ವ ಹಿಸುತ್ತಿದ್ದಾರೆ.

 – ಗ್ರಾಮೀಣ ಭಾಗದ ಹಿರಿಯ ನಾಗರಿಕರಿಗೆ ಇನ್ನೂ ಮೊದಲನೇ ಡೋಸ್‌ ಲಸಿಕೆ ಹಾಕಿಸಲು ಇಲಾಖೆ ಏನು ಕ್ರಮ ಕೈಗೊಂಡಿದೆ ?
ಹಿರಿಯ ನಾಗರಿಕರು ಹಾಗೂ ವಿಕಲ ಚೇತನರ ಬಗ್ಗೆ ಇಲಾಖೆ ಕಾಳಜಿ ವಹಿಸಿದೆ.
ಅನೇಕರು ವೃದ್ಧಾ ಶ್ರಮ ದಲ್ಲಿರುತ್ತಾರೆ. ಹಾಸಿಗೆ ಹಿಡಿದಿರುತ್ತಾರೆ. ಕೋವಿಡ್‌ ಲಸಿಕೆ ಕೇಂದ್ರಕ್ಕೆ ಬರಲು ಆಗದವರಿಗೆ ಅವರ ಮನೆಗಳಿಗೆ ಹೋಗಿ ಲಸಿಕೆ ನೀಡ‌ಲು ಆರೋಗ್ಯ ಸಚಿವರ ಜತೆ ಮಾತನಾಡಿದ್ದೇನೆ. ಶೀಘ್ರ ವೇ ಅವರಿಗೆ ಲಸಿಕೆ ನೀಡಲು ಕ್ರಮ ಕೈಗೊಳ್ಳಲಾಗುವುದು.

– ಮೂರನೇ ಅಲೆ ಮಕ್ಕಳಿಗೆ ಅಪಾಯಕಾರಿ ಎನ್ನಲಾಗಿದೆ. ಇದನ್ನು ಎದುರಿಸಲು ಏನು ಸಿದ್ಧತೆ ಮಾಡಿದ್ದೀರಿ?
ಮಕ್ಕಳ ರಕ್ಷಣೆಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಎಲ್ಲ ಜಿಲ್ಲೆಗಳಲ್ಲಿ ಕೋವಿಡ್‌ ಕೇರ್‌ ಕೇಂದ್ರ ತೆರೆಯಲು ತೀರ್ಮಾ ನಿಸಲಾಗಿದೆ. 1098 ಟೋಲ್‌ ಫ್ರೀ ನಂಬರ್‌ ತೆರೆಯಲಾಗಿದೆ. ಅಗತ್ಯ ಬಿದ್ದರೆ, ಜಿಲ್ಲಾ ಕೇಂದ್ರಗಳಲ್ಲಿ ಮಕ್ಕಳ ವಿಶೇಷ ಕೋವಿಡ್‌ ಕೇರ್‌ ಕೇಂದ್ರ ತೆರೆದು ಅಲ್ಲಿ ಚಿಕಿತ್ಸೆ ನೀಡಲು ಕ್ರಮ ಕೈಗೊಳ್ಳಲಾಗುತ್ತಿದೆ.

– ನೇರವಾಗಿ ಯಾರಾದರೂ ಮಕ್ಕಳನ್ನು ದತ್ತು ತೆಗೆದುಕೊಳ್ಳಲು ಅವಕಾಶ ಇದೆಯಾ?
ಅವಕಾಶವಿಲ್ಲ. ಕೊರೊನಾದಿಂದ ತಂದೆ, ತಾಯಿ ನಿಧನ ಹೊಂದಿದರೆ, ಸರಕಾರ ಮಕ್ಕಳ ರಕ್ಷಣೆ ಮಾಡ ಲಿದೆ. ಯಾರಾದರೂ ಮಕ್ಕಳನ್ನು ದತ್ತು ತೆಗೆದು ಕೊಳ್ಳಲು ಮುಂದೆ ಬಂದರೆ ಕಾನೂನು ಪ್ರಕಾರ ದತ್ತು ನೀಡುವ ವ್ಯವಸ್ಥೆ ಮಾಡಲಾಗುವುದು.

– ಆಶಾ, ಅಂಗನವಾಡಿ ಕಾರ್ಯಕರ್ತೆಯರ ರಕ್ಷಣೆಗೆ ಯಾವ ರೀತಿಯ ಕ್ರಮ ಕೈಗೊಂಡಿದ್ದೀರಾ?
ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆ ಯರಿಗೆ ಮಾಸ್ಕ್, ಸ್ಯಾನಿಟೈಸರ್‌, ಗ್ಲೌಸ್‌ ನೀಡಲಾ ಗುತ್ತಿದೆ. ಕೋವಿಡ್‌ನಿಂದ ಮೃತರಾದರೆ 30 ಲಕ್ಷ ರೂ. ವಿಮೆ ಪರಿಹಾರ ನೀಡಲಾಗುತ್ತಿದೆ. ಕಳೆದ ವರ್ಷ ಮೃತಪಟ್ಟ 25 ಅಂಗನವಾಡಿ ಕಾರ್ಯಕರ್ತೆಯರಿಗೆ ಪರಿಹಾರ ನೀಡಲಾಗಿದೆ.

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

Rama Navami 2024: ರಾಮ ನವಮಿ ಇತಿಹಾಸವೇನು? ಆಚರಣೆ ಮಾಡುವ ವಿಧಾನ ಹೇಗೆ…

Rama Navami 2024: ರಾಮ ನವಮಿ ಇತಿಹಾಸವೇನು? ಆಚರಣೆ ಮಾಡುವ ವಿಧಾನ ಹೇಗೆ…

Rama Navami: ಶ್ರೀ ರಾಮನ ಹೆಜ್ಜೆಗಳು ಬದುಕಿನ ಆದರ್ಶವಾಗಲಿ… ಪೇಜಾವರ ಶ್ರೀ

Rama Navami: ಶ್ರೀ ರಾಮನ ಹೆಜ್ಜೆಗಳು ಬದುಕಿನ ಆದರ್ಶವಾಗಲಿ… ಪೇಜಾವರ ಶ್ರೀ

April 17ರಂದು ಶ್ರೀರಾಮ ನವಮಿ: ಅಯೋಧ್ಯೆಯಲ್ಲಿ ವಿಶೇಷ ಪೂಜೆ, ಉತ್ಸವ

Rama Navami 2024: April 17ರಂದು ಶ್ರೀರಾಮ ನವಮಿ- ಅಯೋಧ್ಯೆಯಲ್ಲಿ ವಿಶೇಷ ಪೂಜೆ, ಉತ್ಸವ

Ram Ayodhya

Rama Navami 2024: ನವಮಿಗೆ ಬಾಲಕರಾಮನ ಹಣೆಗೆ ಸೂರ್ಯ ತಿಲಕ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.