ಶಿವಪಾಡಿ ಶ್ರೀ ಉಮಾಮಹೇಶ್ವರ ದೇಗುಲ: ಅತಿರುದ್ರ ಮಹಾಯಾಗ ಪ್ರಾರಂಭ

121 ಋತ್ವಿಜರ ನೇತೃತ್ವದಲ್ಲಿ 11 ಕುಂಡಗಳಲ್ಲಿ 12 ದಿನಗಳ ಕಾಲ ನಿರಂತರವಾಗಿ ಯಾಗ ನಡೆಯಲಿದೆ.

Team Udayavani, Feb 22, 2023, 10:23 AM IST

4-shivapadi

ಮಣಿಪಾಲ: ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆ. 22ರ ಬುಧವಾರ ಋತ್ವಿಜರಿಂದ ಪೂಜೆಯೊಂದಿಗೆ ಅತಿರುದ್ರ ಮಹಾಯಾಗ ಶುಭಾರಂಭಗೊಂಡಿತು.

ಬೆಳಿಗ್ಗೆ ಅತಿರುದ್ರ ಯಾಗ ಮಂಟಪದಲ್ಲಿ ಮಹಾನ್ಯಾಸಪೂರ್ವಕ ಶ್ರೀ ರುದ್ರ ಪುರಶ್ಚರಣ ಮತ್ತು ಶತಚಂಡಿಕಾ ಯಾಗ ಮಂಟಪದಲ್ಲಿ ಶತಚಂಡಿಕಾ ಯಾಗ ಪ್ರಾರಂಭಗೊಂಡಿತು.

ಈ ಸಂದರ್ಭದಲ್ಲಿ ಅತಿರುದ್ರ ಮಹಾಯಾಗ ಸಮಿತಿಯ ಅಧ್ಯಕ್ಷ ಶಾಸಕ ರಘುಪತಿ ಭಟ್, ದೇವಸ್ಥಾನದ ಅಭಿವೃದ್ಧಿ ಟ್ರಸ್ಟ್ ಅಧ್ಯಕ್ಷ ಮಹೇಶ್ ಠಾಕೂರ್, ಬೆಂಗಳೂರಿನ ಮಾಜಿ ವಿಧಾನಸಭಾ ಸದಸ್ಯರಾದ ದಯಾನಂದ ರೆಡ್ಡಿ, ಡಾ. ಜಿ. ಶಂಕರ್, ನಟ ರಕ್ಷಿತ್ ಶೆಟ್ಟಿ ಮತ್ತು ಕುಂದಾಪುರ ಗುತ್ತಿಗೆದಾರ ಕಾರ್ತಿಕ್ ಆರ್. ನಾಯಕ್ ಉಪಸ್ಥಿತರಿದ್ದರು.

ಶೃಂಗೇರಿ ಶಾರದಾ ಪೀಠಾಧೀಶ್ವರ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಭಾರತೀತೀರ್ಥ ಮಹಾಸ್ವಾಮಿಗಳ ಆಶೀರ್ವಾದ ಹಾಗೂ ನೇತೃತ್ವದೊಂದಿಗೆ ಫೆ. 22 ರಿಂದ ಮಾ.5ರ ತನಕ ಅತಿರುದ್ರ ಮಹಾಯಾಗ ನಡೆಯಲಿದೆ. 121 ಋತ್ವಿಜರ ನೇತೃತ್ವದಲ್ಲಿ 11 ಕುಂಡಗಳಲ್ಲಿ 12 ದಿನಗಳ ಕಾಲ ನಿರಂತರವಾಗಿ ಯಾಗ ನಡೆಯಲಿದೆ.

ಮಾ. 2, 3, 4ರಂದು ವಾರಣಾಸಿಯ ಗಂಗಾರತಿ ತಂಡದಿಂದ “ಶಿವಾರತಿ’ ಮಾಡಿಸಲಾಗುವುದು. ಫೆ. 22ರಿಂದ ಭಕ್ತರಿಂದ ಹೊರೆಕಾಣಿಕೆ ಸ್ವೀಕರಿಸಲಾಗುವುದು. ವಿಶೇಷ ಆಕರ್ಷಣೆಯಾಗಿ ಪುಂಗನೂರು ತಳಿಯ 5 ಹಸುಗಳನ್ನು ದೇಗುಲಕ್ಕೆ ತರಲಾಗಿದೆ. ಸುಮಾರು 2,000 ವಾಹನಗಳ ಪಾರ್ಕಿಂಗ್‌ಗೆ ವ್ಯವಸ್ಥೆ ಮಾಡಲಾಗಿದೆ. ಪ್ರತಿನಿತ್ಯ ನಡೆಯಲಿರುವ ಧಾರ್ಮಿಕ ಸಭೆಯಲ್ಲಿ ಸಚಿವರು, ಗಣ್ಯರು ಭಾಗವಹಿಸುವರು. ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗಲಿವೆ.

ಮಾ. 4ರ ಸಂಜೆ ದೇಗುಲಕ್ಕೆ ಶೃಂಗೇರಿ ಶಾರದಾ ಪೀಠಾಧೀಶ್ವರ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಭಾರತೀತೀರ್ಥ ಮಹಾಸ್ವಾಮಿಗಳನ್ನು ವಿಶೇಷ ಮೆರವಣಿಗೆಯಲ್ಲಿ ಕರೆ ತರಲಾಗುವುದು. ಸಂಜೆ 5.30ಕ್ಕೆ ಸ್ವಾಮೀಜಿಯವರು ಅನುಗ್ರಹ ಭಾಷಣ ಮಾಡಲಿದ್ದಾರೆ. ಅನಂತರ ಸ್ವಾಮೀಜಿಯವರಿಂದ ಶ್ರೀಚಂದ್ರಮೌಳೀಶ್ವರ ಸ್ವಾಮಿಗೆ ಪೂಜೆ ನೆರವೇರಲಿದೆ. ಮಾ. 5ರಂದು ಯಾಗ ಮಂಟಪದಲ್ಲಿ ಬೆಳಗ್ಗೆ 6.30ರಿಂದ ಏಕಾದಶಿ ಕುಂಡಗಳಲ್ಲಿ ಅತಿರುದ್ರ ಮಹಾಯಾಗ, 11.30ಕ್ಕೆ ಪೂರ್ಣಾಹುತಿ, ಮಧ್ಯಾಹ್ನ ಸ್ವಾಮೀಜಿಯವರಿಂದ ಕಲಶಾಭಿಷೇಕ, ಮಧ್ಯಾಹ್ನ ಪಲ್ಲಪೂಜೆ, ಮಹಾ ಅನ್ನಸಂತರ್ಪಣೆ ನೆರವೇರಲಿದೆ ಎಂದು ಅತಿರುದ್ರ ಮಹಾಯಾಗ ಸಮಿತಿ ಅಧ್ಯಕ್ಷರೂ ಆದ ಶಾಸಕ ಕೆ. ರಘುಪತಿ ಭಟ್‌ ತಿಳಿಸಿದ್ದಾರೆ.

ಟಾಪ್ ನ್ಯೂಸ್

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.