ದಲಿತ ನಾಯಕರು ಹೊಟ್ಟೆಪಾಡಿಗೆ ಬಿಜೆಪಿಗೆ ಹೋಗಿದ್ದು ನೂರಕ್ಕೆ ನೂರು ಸತ್ಯ : ತಂಗಡಗಿ

ಬಿಜೆಪಿಗರು ಎಲ್ಲ ವಿಚಾರದಲ್ಲೂ ಅಪವಿತ್ರರು

Team Udayavani, Nov 10, 2021, 7:50 PM IST

ದಲಿತರು ನಾಯಕರು ಹೊಟ್ಟೆಪಾಡಿಗೆ ಬಿಜೆಪಿಗೆ ಹೋಗಿದ್ದು ಸತ್ಯ : ತಂಗಡಗಿ

ಕೊಪ್ಪಳ: ದಲಿತ ನಾಯಕರಾದ ಗೋವಿಂದ ಕಾರಜೋಳ, ರಮೇಶ ಜಿಗಜಿಣಗಿ, ನಾರಾಯಣಸ್ವಾಮಿ ಅವರು ತಮ್ಮ ಸ್ವಾರ್ಥಕ್ಕೆ, ಹೊಟ್ಟೆಪಾಡಿಗಾಗಿ ಬಿಜೆಪಿಗೆ ಹೋಗಿರುವುದು ನೂರಕ್ಕೆ ನೂರು ಸತ್ಯ. ಇವರೆಲ್ಲ ದಲಿತರಿಗೆ ಏನು ಮಾಡಿದ್ದಾರೆ ಎನ್ನುವುದನ್ನು ಒಂದನ್ನಾದರೂ ಹೇಳಲಿ ಎಂದು ಮಾಜಿ ಸಚಿವ ಶಿವರಾಜ ತಂಗಡಗಿ ಅವರು ಸವಾಲ್ ಹಾಕಿದರು.

ಕೊಪ್ಪಳದಲ್ಲಿ ಸುದ್ದಿಗಾರರ ಜೊತೆ ಮಾತನಾಡಿ, ಬಿಜೆಪಿಯಲ್ಲಿ ದಲಿತ ನಾಯಕರಿಲ್ಲ. ನಮಗೆ ಮಂತ್ರಿ ಸ್ಥಾನ ಸಿಗುತ್ತೆ ಎಂದು ಇವುರೆಲ್ಲ ಹೋಗಿದ್ದಾರೆ. ಇವರು ಗಂಜಿ ಗಿರಾಕಿಗಳು. ಸಿದ್ದರಾಮಯ್ಯರು ಹೇಳಿದ್ದು ನೂರಕ್ಕೆ ನೂರು ಸತ್ಯ. ಬಿಜೆಪಿಗರಿಗೆ ಸಂವಿಧಾನ ಬದಲಾವಣೆ ಮಾಡುತ್ತೇವೆ ಎಂದಾಗ ಕಾರಜೋಳ, ಜಿಗಜಿಣಗಿ, ನಾರಾಯಣಸ್ವಾಮಿ ಅವರು ಕಣ್ಮುಚ್ಚಿ ಕುಳಿತಿದ್ದರಾ ? ಅನಂತಕುಮಾರ ದಲಿತರನ್ನು ಬೊಗಳುವ ನಾಯಿಗಳು, ಬೀದಿ ನಾಯಿಗಳು ಎಂದಾಗ, ಬಿಜೆಪಿ ಎಸ್‌ಸಿ ಮೋರ್ಚಾ ಕಣ್ಮುಚ್ಚಿ ಕುಳಿತಿತ್ತಾ..? ತೇಜಸ್ವಿಯು ಅಂಬೇಡ್ಕರ್ ದೇಶದ್ರೋಹಿ ಎಂದೆಲ್ಲಾ ಹೇಳಿದ್ರು.. ಇಷ್ಟೆಲ್ಲ ಆದ್ರೂ ಬಿಜೆಪಿಯ ದಲಿತ ನಾಯಕರು ಯಾಕೆ ಮಾತನಾಡಲಿಲ್ಲ. ಇವರೆಲ್ಲ ಬಿಜೆಪಿಗೆ ತಮ್ಮ ಹೊಟ್ಟೆ ಪಾಡಿಗಾಗಿ, ಸ್ವಾರ್ಥಕ್ಕಾಗಿ ಹೋಗಿದ್ದಾರೆ. ಆರ್‌ಎಸ್‌ಎಸ್ ಸಂಸ್ಥಾಪಕ ಗೋವಳ್ಕರ್‌ರು ತಮ್ಮ ಪುಸ್ತಕದಲ್ಲಿ ಇಂಗ್ಲೀಷರ ಗುಲಾಮಗಿರಿ ಮಾಡಲು ಸಿದ್ದನಿದ್ದೇನೆ. ಆದರೆ ದಲಿತರಿಗೆ, ಅಲ್ಪಸಂಖ್ಯಾತರಿಗೆ ಸ್ವತಂತ್ರ ಕೊಡುವುದಾದರೆ ನಮಗೆ ಆ ಸ್ವಾತಂತ್ರ್ಯ ಬೇಡ ಎಂದು ಸ್ಪಷ್ಟವಾಗಿ ಬರೆದಿದ್ದಾರೆ. ಬಿಜೆಪಿ ದಲಿತ ನಾಯಕರು ಇದಕ್ಕೆ ಉತ್ತರ ಕೊಡಲಿ ಎಂದರು.

ಬಿಟ್ ಕಾಯಿನ್ ವಿಚಾರವನ್ನು ಮರೆಮಾಚಲು ಬಿಜೆಪಿಗರು ಸಿದ್ದರಾಮಯ್ಯರನ್ನು ದಲಿತ ವಿರೋಧಿ ಎನ್ನುವ ಮಾತನ್ನಾಡುತ್ತಿದ್ದಾರೆ. ಬಿಟ್ ಕಾಯಿನ್ ಬಗ್ಗೆ ದಾಖಲೆ ಕೇಳುವ ಬಿಜೆಪಿಗರು ಸರ್ಕಾರ ನಡೆಸುತ್ತಿರುವುದು ಯಾಕೆ ? ಈಶ್ವರಪ್ಪರನ್ನ ಕೇಳಿ ನಾವು ದಾಖಲೆ ಕೊಡಬೇಕಾ..? ಯಾವ ಸಮಯದಲ್ಲಿ ದಾಖಲೆ ಕೊಡಬೇಕು ಕೊಟ್ಟೆ ಕೊಡುತ್ತೇವೆ. ಸಿದ್ದರಾಮಯ್ಯರು ಅಧಿವೇಶನದಲ್ಲಿ ದಾಖಲೆ ಕೊಟ್ಟು ಮಾತನಾಡಲಿದ್ದಾರೆ ಎಂದರು.

ಇದನ್ನೂ ಓದಿ : ಹೋಟೆಲ್ ರುವಾಂಡ : ಹಿಂಸೆಯ ಗಾಢತೆಯಲ್ಲೇ ಮಾನವೀಯತೆಯ ಬಣ್ಣ ಪ್ರದರ್ಶಿಸುವ ಸಿನಿಮಾ

ಬಿಜೆಪಿಗರೆಲ್ಲರೂ ಅಪವಿತ್ರರು !
ಬಿಜೆಪಿಗರೇ ಅಪವಿತ್ರರು. ಎಲ್ಲದರಲ್ಲೂ ಅವರು ಅಪವಿತ್ರರಿದ್ದಾರೆ. ತಮ್ಮಷ್ಟಕ್ಕೆ ತಾವು ಪವಿತ್ರರು, ಚಾರಿತ್ರ್ಯವಂತರು ಎಂದು ಬಿಜೆಪಿಗರೇ ತಿಳಿದುಕೊಂಡಿದ್ದಾರೆ. ಆದರೆ ಅವರಂತ ಅಪವಿತ್ರರು ಯಾರೂ ಇಲ್ಲ. ಇದಕ್ಕೆ ಸಾಕ್ಷಿ ವಿಧಾನಸೌಧದಲ್ಲಿ ನೀಲಿಚಿತ್ರ ನೋಡಿದ್ದು ಯಾರು ? ಎಂದರಲ್ಲದೇ, ಈಶ್ವರಪ್ಪರ ಬಾಯಿನೇ ತುಂಬ ಹೊಲಸಿದೆ. ಅವರ ತಲೆ-ನಾಲಿಗೆಗೆ ಹಿಡಿತವೇ ಇಲ್ಲ ಎಂದರು.

ಕುಮಾರಸ್ವಾಮಿ ಅವರು ಕಾಂಗ್ರೆಸ್ ಸರ್ಕಾರದಲ್ಲಿ ಬಿಟ್ ಕಾಯಿನ್ ಹಗರಣ ಬೆಳಕಿಗೆ ಬಂದಿತ್ತು ಎಂದಿದ್ದು, ಆಗ ಅವರು ಏಕೆ ಮಾತನಾಡಲಿಲ್ಲ. ಕುಮಾರಸ್ವಾಮಿ ಅವರೇನು ಮಾಡ್ತಾ ಇದ್ರು..? ಅವರು ವಿಪಕ್ಷದಲ್ಲಿಯೇ ಇದ್ರಲ್ಲ. ಅವರೂ ಸಿಎಂ ಆಗಿ ಕೆಲಸ ಮಾಡಿದ್ದಾರಲ್ಲ. ಮಾಹಿತಿ ಇದ್ರೂ ಯಾಕೆ ಸುಮ್ನೆ ಕುಳಿತಿದ್ರು. ಸಿದ್ದರಾಮಯ್ಯರು ಮಾತನಾಡಿದ ಮೇಲೆ ಏಕೆ ಮಾತನಾಡುತ್ತಿದ್ದಾರೆ ಎಂದರಲ್ಲದೇ, ಬಿಟ್ ಕಾಯಿನ್ ಕುರಿತು ಸರ್ಕಾರ ಯಾವ ಮಾಹಿತಿಯನ್ನೂ ಕೊಡುತ್ತಿಲ್ಲ ಎಂದರು.

ಮುಂದಿನ ಜನೆವರಿ ಒಳಗೆ ಸಿಎಂ ಬೊಮ್ಮಾಯಿ ಅವರನ್ನು ಬಲಾವಣೆ ಮಾಡುತ್ತಾರೆ ಎನ್ನುವ ಸುದ್ದಿಯಿದೆ ಎಂದರು.

ಟಾಪ್ ನ್ಯೂಸ್

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

yogi adityanath

Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ

farmers, trailer, housewives star campaigners for CM Jagan’s party

Andhra Pradesh; ಸಿಎಂ ಜಗನ್‌ ಪಕ್ಷಕ್ಕೆ ರೈತರು,ಟೆೃಲರ್‌, ಗೃಹಿಣಿಯರೇ ಸ್ಟಾರ್‌ ಪ್ರಚಾರಕರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್‌ ದಾಖಲು

Prajwal Revanna Case ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್‌ ದಾಖಲು

ಕಾರ್ತಿಕ್‌ ಪೆನ್‌ಡ್ರೈವ್‌ ಕೊಟ್ಟಿದ್ದು ನಿಜ: ದೇವರಾಜೇಗೌಡ

Hassan Pen Drive Case; ಕಾರ್ತಿಕ್‌ ಪೆನ್‌ಡ್ರೈವ್‌ ಕೊಟ್ಟಿದ್ದು ನಿಜ: ದೇವರಾಜೇಗೌಡ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.