Human Milk Bank: ಎದೆ ಹಾಲು ಕೊರತೆ: 4 ಜಿಲ್ಲೆಯಲ್ಲಿ “ಅಮೃತಧಾರೆ ಕೇಂದ್ರ”

ವೈದ್ಯಕೀಯ ಪರೀಕ್ಷೆಯಲ್ಲಿ ನೆಗೆಟಿವ್‌ ವರದಿ ಬಂದವರು ಮಾತ್ರ ಎದೆ ಹಾಲು ದಾನ ಮಾಡಬಹುದಾಗಿದೆ.

Team Udayavani, Jun 10, 2023, 11:22 AM IST

Human Milk Bank: ಎದೆ ಹಾಲು ಕೊರತೆ: 4 ಜಿಲ್ಲೆಯಲ್ಲಿ ಅಮೃತಧಾರೆ ಕೇಂದ್ರ

ಬೆಂಗಳೂರು: ತಾಯಿ ಎದೆ ಹಾಲಿನ ಕೊರತೆಯಿಂದ ಬಳಲುತ್ತಿರುವ ನವಜಾತ ಶಿಶುಗಳ ರಕ್ಷಣೆಗಾಗಿ ರಾಜ್ಯದಲ್ಲಿ ಹೊಸದಾಗಿ ನಾಲ್ಕು “ಅಮೃತಧಾರೆ’ (ಹ್ಯೂಮನ್‌ ಮಿಲ್ಕ್ ಬ್ಯಾಂಕ್‌) ಕೇಂದ್ರಗಳ ಸ್ಥಾಪನೆಗೆ ಆರೋಗ್ಯ ಇಲಾಖೆ ಮುಂದಾಗಿದೆ. ಈ ಕೇಂದ್ರಗಳು
ಮುಂದಿನ ಎರಡು ತಿಂಗಳೊಳಗೆ ಪೂರ್ಣ ಪ್ರಮಾಣದಲ್ಲಿ ಕಾರ್ಯಾಚರಿಸಲಿವೆ.

ಅಕಾಲಿಕವಾಗಿ ಹಾಗೂ ತೂಕವಿಲ್ಲದೇ ಜನಿಸಿದ, ಎದೆ ಹಾಲು ಉತ್ಪಾದಿಸದ ತಾಯಂದಿರ ಹಾಗೂ ಹಲವು ಕಾರಣಗಳಿಂದ ತಾಯಂದಿರಿಂದ ದೂರ ಉಳಿದಿರುವ ಶೇ.68ರಷ್ಟು ಶಿಶುಗಳಿಗೆ ಎದೆ ಹಾಲಿನ ಕೊರತೆಯಿದೆ. ಇದನ್ನು ಸರಿಪಡಿಸಲು ಆರೋಗ್ಯ
ಇಲಾಖೆ ಮೈಸೂರು, ಬೆಳಗಾವಿ, ಬೆಂಗಳೂರು, ಕಲಬುರಗಿಯಲ್ಲಿ ತಲಾ ಒಂದು ಹ್ಯೂಮನ್‌ ಮಿಲ್ಕ್ ಬ್ಯಾಂಕ್‌ ತೆರೆಯಲಿದ್ದು, ಪ್ರಸ್ತುತ ಅಗತ್ಯದ ಐಸ್‌ ಲೈನ್‌ ಶಿಥಿಲೀಕರಣ ಯಂತ್ರ, ಮಿಕ್ಸಿಂಗ್‌ ಯಂತ್ರ, ಡ್ರೈಯರ್‌, ಪಾಶ್ಚರೀಕರಿಸುವ ಯಂತ್ರ, ಬ್ರೈಸ್ಟ್‌ ಪಂಪ್‌ ಖರೀದಿ ಪ್ರಕ್ರಿಯೆ ಭರದಿಂದ ಸಾಗುತ್ತಿದೆ.

ಎರಡು ವಿಭಾಗದಲ್ಲಿ ಸಂಗ್ರಹ: ಇಲ್ಲಿ ಸ್ವತಃ ತಾಯಿಯಿಂದ ಮಗುವಿಗೆ ಹಾಗೂ ದಾನಿ ತಾಯಿಯ ಹಾಲನ್ನು ಇತರೆ ಮಗುವಿಗೆ ನೀಡಲು ಅವಕಾಶ ನೀಡಲಾಗಿದೆ. ಸಂಗ್ರಹಿಸುವ ಹಾಲು ಪ್ರಾರಂಭಿಕ ಹಂತದಲ್ಲಿ ಸ್ಕ್ರೀನಿಂಗ್‌ ಹಾಗೂ ಪಾಶ್ಚರೀಕರಿಸಿ ರೋಗಾಣು ನಾಶ ಮಾಡಲಾಗುತ್ತದೆ.

ಅನಂತರ ಬಾಟಲಿಯಲ್ಲಿ ಭದ್ರಗೊಳಿಸಿ 18 ಡಿಗ್ರಿ ಸೆಲ್ಸಿಯಸ್‌ ಉಷ್ಣಾಂಶದಲ್ಲಿ ಗರಿಷ್ಠ 6 ತಿಂಗಳ ಕಾಲ ಸಂಗ್ರಹಿಸಿ ಇಡಬಹುದಾಗಿದೆ. ಖಾಸಗಿ ಕೇಂದ್ರದಲ್ಲಿ ಪಾಶ್ಚರೀಕರಿಸಿದ 150 ಎಂ.ಎಲ್‌. ಹಾಲಿಗೆ 3000 ರಿಂದ 4000 ರೂ. ಪಾವತಿಸಬೇಕು. ಆದರೆ ಸರ್ಕಾರಿ ಆಸ್ಪತ್ರೆಯಲ್ಲಿ ಅಗತ್ಯವಿರುವ ಶಿಶುಗಳಿಗೆ ಉಚಿತವಾಗಿ ಒದಗಿಸಲಾಗುತ್ತದೆ.

ಯಾರು ಅರ್ಹರು?: ಅಗತ್ಯಕ್ಕಿಂತ ಹೆಚ್ಚು ಎದೆಹಾಲು ಹೊಂದಿರುವ ಎಲ್ಲ ಆರೋಗ್ಯವಂತ ತಾಯಂದಿರು ದಾನ ಮಾಡಬಹುದಾಗಿದೆ. ದಾನಿ ತಾಯಿಯನ್ನು ಮೊದಲಿಗೆ ಎಚ್‌ಐವಿ, ಹೆಪಟೈಟೀಸ್‌ ಬಿ ಹಾಗೂ ಸಿ, ವಿಡಿಆರ್‌ಎಲ್‌ ಪರೀಕ್ಷೆಗೆ ಒಳಪಡಿಸಲಾಗುತ್ತದೆ. ವೈದ್ಯಕೀಯ ಪರೀಕ್ಷೆಯಲ್ಲಿ ನೆಗೆಟಿವ್‌ ವರದಿ ಬಂದವರು ಮಾತ್ರ ಎದೆ ಹಾಲು ದಾನ ಮಾಡಬಹುದಾಗಿದೆ.

ಉಚಿತ ವಿತರಣೆ
ಕಳೆದೊಂದು ವರ್ಷದಿಂದ ಬೆಂಗಳೂರಿನ ವಾಣಿವಿಲಾಸ ಆಸ್ಪತ್ರೆಯಲ್ಲಿ ಸರ್ಕಾರಿ ಹಾಗೂ ಮಂಗಳೂರಿನ ಲೇಡಿಘೋಷ್‌ ಆಸ್ಪತ್ರೆಯಲ್ಲಿ ಖಾಸಗಿ ಸಾರ್ವಜನಿಕ ಸಹಬಾಗಿತ್ವದಲ್ಲಿ ತಲಾ ಒಂದು ಹ್ಯೂಮನ್‌ ಮಿಲ್ಕ್ ಬ್ಯಾಂಕ್‌ ಸ್ಥಾಪಿಸಲಾಗಿದೆ.

ಇದುವರೆಗೆ ಎರಡು ಕೇಂದ್ರದಲ್ಲಿ ಸುಮಾರು 300 ಲೀಟರ್‌ ಹಾಲು ಪಾಶ್ಚರೀಕರಿಸಿ 1000ಕ್ಕೂ ಅಧಿಕ ನವಜಾತ ಶಿಶುಗಳಿಗೆ ಉಚಿತವಾಗಿ ವಿತರಿಸಲಾಗಿದೆ. ಎರಡು ಕೇಂದ್ರದಲ್ಲಿ ಒಟ್ಟು ಪ್ರತಿ ದಿನ ಸರಾಸರಿ 120ಕ್ಕೂ ಅಧಿಕ ಮಂದಿ ದಾನಿಗಳು ಎದೆ ಹಾಲು ದಾನ ಮಾಡುತ್ತಾರೆ.

*ತೃಪ್ತಿ ಕುಮ್ರಗೋಡು

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

4-bng

Bengaluru: 290 ರೌಡಿಶೀಟರ್‌ಮನೆಗಳ ಮೇಲೆ ದಾಳಿ 

3-crime

Bengaluru: ಸ್ನೇಹಿತರಿಂದಲೇ ಸುಪಾರಿ ಕಿಲ್ಲರ್‌ನ ಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.