Human Milk Bank: ಎದೆ ಹಾಲು ಕೊರತೆ: 4 ಜಿಲ್ಲೆಯಲ್ಲಿ “ಅಮೃತಧಾರೆ ಕೇಂದ್ರ”

ವೈದ್ಯಕೀಯ ಪರೀಕ್ಷೆಯಲ್ಲಿ ನೆಗೆಟಿವ್‌ ವರದಿ ಬಂದವರು ಮಾತ್ರ ಎದೆ ಹಾಲು ದಾನ ಮಾಡಬಹುದಾಗಿದೆ.

Team Udayavani, Jun 10, 2023, 11:22 AM IST

Human Milk Bank: ಎದೆ ಹಾಲು ಕೊರತೆ: 4 ಜಿಲ್ಲೆಯಲ್ಲಿ ಅಮೃತಧಾರೆ ಕೇಂದ್ರ

ಬೆಂಗಳೂರು: ತಾಯಿ ಎದೆ ಹಾಲಿನ ಕೊರತೆಯಿಂದ ಬಳಲುತ್ತಿರುವ ನವಜಾತ ಶಿಶುಗಳ ರಕ್ಷಣೆಗಾಗಿ ರಾಜ್ಯದಲ್ಲಿ ಹೊಸದಾಗಿ ನಾಲ್ಕು “ಅಮೃತಧಾರೆ’ (ಹ್ಯೂಮನ್‌ ಮಿಲ್ಕ್ ಬ್ಯಾಂಕ್‌) ಕೇಂದ್ರಗಳ ಸ್ಥಾಪನೆಗೆ ಆರೋಗ್ಯ ಇಲಾಖೆ ಮುಂದಾಗಿದೆ. ಈ ಕೇಂದ್ರಗಳು
ಮುಂದಿನ ಎರಡು ತಿಂಗಳೊಳಗೆ ಪೂರ್ಣ ಪ್ರಮಾಣದಲ್ಲಿ ಕಾರ್ಯಾಚರಿಸಲಿವೆ.

ಅಕಾಲಿಕವಾಗಿ ಹಾಗೂ ತೂಕವಿಲ್ಲದೇ ಜನಿಸಿದ, ಎದೆ ಹಾಲು ಉತ್ಪಾದಿಸದ ತಾಯಂದಿರ ಹಾಗೂ ಹಲವು ಕಾರಣಗಳಿಂದ ತಾಯಂದಿರಿಂದ ದೂರ ಉಳಿದಿರುವ ಶೇ.68ರಷ್ಟು ಶಿಶುಗಳಿಗೆ ಎದೆ ಹಾಲಿನ ಕೊರತೆಯಿದೆ. ಇದನ್ನು ಸರಿಪಡಿಸಲು ಆರೋಗ್ಯ
ಇಲಾಖೆ ಮೈಸೂರು, ಬೆಳಗಾವಿ, ಬೆಂಗಳೂರು, ಕಲಬುರಗಿಯಲ್ಲಿ ತಲಾ ಒಂದು ಹ್ಯೂಮನ್‌ ಮಿಲ್ಕ್ ಬ್ಯಾಂಕ್‌ ತೆರೆಯಲಿದ್ದು, ಪ್ರಸ್ತುತ ಅಗತ್ಯದ ಐಸ್‌ ಲೈನ್‌ ಶಿಥಿಲೀಕರಣ ಯಂತ್ರ, ಮಿಕ್ಸಿಂಗ್‌ ಯಂತ್ರ, ಡ್ರೈಯರ್‌, ಪಾಶ್ಚರೀಕರಿಸುವ ಯಂತ್ರ, ಬ್ರೈಸ್ಟ್‌ ಪಂಪ್‌ ಖರೀದಿ ಪ್ರಕ್ರಿಯೆ ಭರದಿಂದ ಸಾಗುತ್ತಿದೆ.

ಎರಡು ವಿಭಾಗದಲ್ಲಿ ಸಂಗ್ರಹ: ಇಲ್ಲಿ ಸ್ವತಃ ತಾಯಿಯಿಂದ ಮಗುವಿಗೆ ಹಾಗೂ ದಾನಿ ತಾಯಿಯ ಹಾಲನ್ನು ಇತರೆ ಮಗುವಿಗೆ ನೀಡಲು ಅವಕಾಶ ನೀಡಲಾಗಿದೆ. ಸಂಗ್ರಹಿಸುವ ಹಾಲು ಪ್ರಾರಂಭಿಕ ಹಂತದಲ್ಲಿ ಸ್ಕ್ರೀನಿಂಗ್‌ ಹಾಗೂ ಪಾಶ್ಚರೀಕರಿಸಿ ರೋಗಾಣು ನಾಶ ಮಾಡಲಾಗುತ್ತದೆ.

ಅನಂತರ ಬಾಟಲಿಯಲ್ಲಿ ಭದ್ರಗೊಳಿಸಿ 18 ಡಿಗ್ರಿ ಸೆಲ್ಸಿಯಸ್‌ ಉಷ್ಣಾಂಶದಲ್ಲಿ ಗರಿಷ್ಠ 6 ತಿಂಗಳ ಕಾಲ ಸಂಗ್ರಹಿಸಿ ಇಡಬಹುದಾಗಿದೆ. ಖಾಸಗಿ ಕೇಂದ್ರದಲ್ಲಿ ಪಾಶ್ಚರೀಕರಿಸಿದ 150 ಎಂ.ಎಲ್‌. ಹಾಲಿಗೆ 3000 ರಿಂದ 4000 ರೂ. ಪಾವತಿಸಬೇಕು. ಆದರೆ ಸರ್ಕಾರಿ ಆಸ್ಪತ್ರೆಯಲ್ಲಿ ಅಗತ್ಯವಿರುವ ಶಿಶುಗಳಿಗೆ ಉಚಿತವಾಗಿ ಒದಗಿಸಲಾಗುತ್ತದೆ.

ಯಾರು ಅರ್ಹರು?: ಅಗತ್ಯಕ್ಕಿಂತ ಹೆಚ್ಚು ಎದೆಹಾಲು ಹೊಂದಿರುವ ಎಲ್ಲ ಆರೋಗ್ಯವಂತ ತಾಯಂದಿರು ದಾನ ಮಾಡಬಹುದಾಗಿದೆ. ದಾನಿ ತಾಯಿಯನ್ನು ಮೊದಲಿಗೆ ಎಚ್‌ಐವಿ, ಹೆಪಟೈಟೀಸ್‌ ಬಿ ಹಾಗೂ ಸಿ, ವಿಡಿಆರ್‌ಎಲ್‌ ಪರೀಕ್ಷೆಗೆ ಒಳಪಡಿಸಲಾಗುತ್ತದೆ. ವೈದ್ಯಕೀಯ ಪರೀಕ್ಷೆಯಲ್ಲಿ ನೆಗೆಟಿವ್‌ ವರದಿ ಬಂದವರು ಮಾತ್ರ ಎದೆ ಹಾಲು ದಾನ ಮಾಡಬಹುದಾಗಿದೆ.

ಉಚಿತ ವಿತರಣೆ
ಕಳೆದೊಂದು ವರ್ಷದಿಂದ ಬೆಂಗಳೂರಿನ ವಾಣಿವಿಲಾಸ ಆಸ್ಪತ್ರೆಯಲ್ಲಿ ಸರ್ಕಾರಿ ಹಾಗೂ ಮಂಗಳೂರಿನ ಲೇಡಿಘೋಷ್‌ ಆಸ್ಪತ್ರೆಯಲ್ಲಿ ಖಾಸಗಿ ಸಾರ್ವಜನಿಕ ಸಹಬಾಗಿತ್ವದಲ್ಲಿ ತಲಾ ಒಂದು ಹ್ಯೂಮನ್‌ ಮಿಲ್ಕ್ ಬ್ಯಾಂಕ್‌ ಸ್ಥಾಪಿಸಲಾಗಿದೆ.

ಇದುವರೆಗೆ ಎರಡು ಕೇಂದ್ರದಲ್ಲಿ ಸುಮಾರು 300 ಲೀಟರ್‌ ಹಾಲು ಪಾಶ್ಚರೀಕರಿಸಿ 1000ಕ್ಕೂ ಅಧಿಕ ನವಜಾತ ಶಿಶುಗಳಿಗೆ ಉಚಿತವಾಗಿ ವಿತರಿಸಲಾಗಿದೆ. ಎರಡು ಕೇಂದ್ರದಲ್ಲಿ ಒಟ್ಟು ಪ್ರತಿ ದಿನ ಸರಾಸರಿ 120ಕ್ಕೂ ಅಧಿಕ ಮಂದಿ ದಾನಿಗಳು ಎದೆ ಹಾಲು ದಾನ ಮಾಡುತ್ತಾರೆ.

*ತೃಪ್ತಿ ಕುಮ್ರಗೋಡು

ಟಾಪ್ ನ್ಯೂಸ್

1-saasd

Tamil Nadu : ನೀಲಗಿರಿಯಲ್ಲಿ ಪ್ರವಾಸಿಗರ ಬಸ್ ಕಮರಿಗೆ ಬಿದ್ದು 8 ಮಂದಿ ಮೃತ್ಯು

1-sasa

Asian Games ಅಭಿಯಾನ ದುರಂತದಲ್ಲಿ ಕೊನೆ; ಜಾರಿ ಬಿದ್ದ ಮೀರಾಬಾಯಿ ಚಾನು

accident

Holehonnuru ; ಭೀಕರ ರಸ್ತೆ ಅಪಘಾತದಲ್ಲಿ ಮೂವರ ದುರ್ಮರಣ

1-asdasd

Asian Games ಪುರುಷರ ಹಾಕಿ: 10-2ರಿಂದ ಪಾಕಿಸ್ಥಾನವನ್ನು ಮಣಿಸಿದ ಭಾರತ

1-dadas

Kushtagi : ವೈಯಕ್ತಿಕ ಸಿಟ್ಟಿಗೆ ಸ್ನೇಹಿತನ ಹತ್ಯೆಗೈದ ಇಬ್ಬರ ಬಂಧನ

Shamanuru Shivashankarappa

Lingayat ಅಧಿಕಾರಿಗಳಿಗೆ ಅನ್ಯಾಯ ಹೇಳಿಕೆಗೆ ಬದ್ಧ: ಶಾಮನೂರು ಪುನರುಚ್ಚಾರ

1-sasa-sa

Hirekerur ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-bangalore

Theft: ಶೂ ಬಾಕ್‌ನಲ್ಲಿದ್ದ ಮನೆ ಕೀ ಕದ್ದು ಆಭರಣ ದೋಚಿದ್ದ ಮಹಿಳೆ ಸೆರೆ

9-bangalore

Crime: ವ್ಯಕ್ತಿ ಹತ್ಯೆಗೈದಿದ್ದ ನಾಲ್ವರು ಆರೋಪಿಗಳ ಬಂಧನ

8-bangalore

Crime: ಹಣಕಾಸಿನ ವಿಚಾರಕ್ಕೆ ಸಹೋದ್ಯೋಗಿ ಕೊಲೆ ಮಾಡಿದ್ದ ಆರೋಪಿ ಬಂಧನ

7-bangalore

Bangalore: ಹೋಟೆಲ್‌ ಧ್ವಂಸ ಮಾಡಿದವರ ಸೆರೆ

6-bangalore

Bangalore: ಟ್ರಾಫಿಕ್‌ ಜಾಮ್‌ಗೆ ಸಿಲಿಕಾನ್‌ ಸಿಟಿ ಹೈರಾಣ!

MUST WATCH

udayavani youtube

ಸಾಗರದಾಳದಲ್ಲಿ ಕಣ್ಮರೆಯಾಗಿದ್ದ 8 ನೇ ಖಂಡ ಪತ್ತೆ

udayavani youtube

ಕುದುಕುಳ್ಳಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ

udayavani youtube

ಕ್ಷಮೆ ಕೇಳಿದ ಶಿವಣ್ಣ

udayavani youtube

ಅಕ್ವಾಟಿಕ್ಸ್ ಗ್ಯಾಲರಿ ನೋಡಿ ಕಣ್ತುಂಬಿಕೊಂಡ ಪ್ರಧಾನಿ ಮೋದಿ

udayavani youtube

ಬೆಂಗಳೂರಿನಲ್ಲಿ ನಡೆಯಿತು ತುಳುನಾಡ ಸಂಸ್ಕೃತಿ ಬಿಂಬಿಸುವ ಅಷ್ಟಮಿದ ಐಸಿರ

ಹೊಸ ಸೇರ್ಪಡೆ

beg

Pakistani: ಅರಬ್‌ ರಾಷ್ಟ್ರಗಳಲ್ಲಿ ಪಾಕ್‌ ಭಿಕ್ಷುಕರ ಸಾಮ್ರಾಜ್ಯ!

art of living

Art of Living: ಕಲಾರಾಧನೆಗೆ ಆರ್ಟ್‌ ಆಫ್ ಲಿವಿಂಗ್‌ ಸಾಮರಸ್ಯದ ವೇದಿಕೆ

chandrayaan 3………….

Fraud: ಚಂದ್ರಯಾನ-3 ಹೆಸರಿನಲ್ಲಿ 20 ಕೋಟಿ ರೂ. ವಂಚನೆ!

ny rain

Rain: ದಿಢೀರ್‌ ಪ್ರವಾಹಕ್ಕೆ ನ್ಯೂಯಾರ್ಕ್‌ ತತ್ತರ

AADITYA L 1

Aditya L1: ಪ್ರಭಾವಲಯ ದಾಟಿದ ಆದಿತ್ಯ ಎಲ್‌1

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.