ಸತ್ಯ, ಧರ್ಮ ಇರುವಲ್ಲಿ ನಾಗ ಸಾನ್ನಿಧ್ಯ; ಸಗ್ರಿ ದೇವಸ್ಥಾನ ಸುಧರ್ಮ ಸಭೆಯಲ್ಲಿ ಡಾ| ಹೆಗ್ಗಡೆ
Team Udayavani, Apr 10, 2022, 5:30 AM IST
ಉಡುಪಿ: ಸತ್ಯ, ಧರ್ಮ ಇರುವಲ್ಲಿ ನಾಗ ಸಾನ್ನಿಧ್ಯ ಇರುತ್ತದೆ. ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆ ಪವಿತ್ರ ಭೂಮಿಯಾಗಿದ್ದು ಇಲ್ಲಿ ಬಹಳಷ್ಟು ನಾಗ ಸಾನ್ನಿಧ್ಯಗಳಿವೆ. ಇಲ್ಲಿನ ಮಣ್ಣು ಕೂಡ ನಾಗ ದೇವರದ್ದೇ ಎಂದು ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಹೇಳಿದರು.
ಸಗ್ರಿ ಶ್ರೀ ವಾಸುಕಿ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಶನಿವಾರ ನವೀಕೃತ ನಾಗ ಸನ್ನಿಧಾನ ಸಮರ್ಪಣೆ, ಅಷ್ಟಬಂಧ ಬ್ರಹ್ಮಕಲಶೋತ್ಸವ, ನಾಗಮಂಡಲೋತ್ಸವದ ಪ್ರಯುಕ್ತ ನಡೆದ ಸುಧರ್ಮ ಸಭೆಯಲ್ಲಿ ಅವರು ಮಾತನಾಡಿದರು.
ಶ್ರೀ ಕಾಣಿಯೂರು ಮಠದ ಶ್ರೀ ವಿದ್ಯಾವಲ್ಲಭತೀರ್ಥ ಶ್ರೀಪಾದರು ಆಶೀರ್ವ ಚನ ನೀಡಿ, ಧರ್ಮ ನಮ್ಮನ್ನು, ದೇಶ ವನ್ನು ರಕ್ಷಿಸುತ್ತದೆ. ಅದಕ್ಕಾಗಿ ನಾವು ಭಗ ವಂತನನ್ನು ಆಶ್ರಯಿಸಬೇಕು ಎಂದರು.
ವಿವಿಧ ಗಣ್ಯರನ್ನು ಸಮ್ಮಾನಿಸ ಲಾಯಿತು. ಸಗ್ರಿ ದೇವಸ್ಥಾನದ ಧರ್ಮದರ್ಶಿ ಸಗ್ರಿ ಗೋಪಾಲಕೃಷ್ಣ ಸಾಮಗ, ಶ್ರೀ ಕ್ಷೇತ್ರ ಕಟೀಲಿನ ಆನುವಂಶಿಕ ಆರ್ಚಕರಾದ ಅನಂತ ಆಸ್ರಣ್ಣ, ಹರಿನಾರಾಯಣ ದಾಸ ಆಸ್ರಣ್ಣ, ಬ್ರಹ್ಮಕಲಶೋತ್ಸವ, ನಾಗಮಂಡಲ ಸಮಿತಿ ಅಧ್ಯಕ್ಷ ಕೆ. ರಘುಪತಿ ಭಟ್, ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಕುಡುಪು ಶ್ರೀ ಅನಂತಪದ್ಮನಾಭ ದೇವಸ್ಥಾನದ ಬ್ರಹ್ಮಶ್ರೀ ಕುಡುಪು ನರಸಿಂಹ ತಂತ್ರಿ, ಶ್ರೀ ಮಹಾಲಕ್ಷೀ ¾ ಕ್ಯಾಶ್ಯೂನ ಶ್ರೀಪತಿ ಭಟ್ ಮೂಡುಬಿದಿರೆ, ಉಡುಪಿ ಸಾಯಿರಾಧಾ ಗ್ರೂಪ್ಸ್ನ ಮನೋಹರ ಶೆಟ್ಟಿ, ಉದ್ಯಮಿ ಗಣಪತಿ ಹೆಗ್ಡೆ, ದ.ಕ.-ಉಡುಪಿ ಜಿಲ್ಲಾ ಮೀನು ಮಾರಾಟ ಮಹಾಮಂಡಲದ ಅಧ್ಯಕ್ಷ ಯಶ್ಪಾಲ್ ಸುವರ್ಣ, ದ.ಕ. ಕಸಾಪ ಮಾಜಿ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ ಉಪಸ್ಥಿತರಿದ್ದರು.
ಗೋಪಾಲಕೃಷ್ಣ ಜೋಯಿಸ ಸ್ವಾಗತಿಸಿ, ವಾಸುದೇವ ಪೆರಂಪಳ್ಳಿ ಪ್ರಸ್ತಾವನೆ ಗೈದರು. ಆನಂದತೀರ್ಥ ಉಪಾಧ್ಯ ನಿರ್ವಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
MUST WATCH
ಹೊಸ ಸೇರ್ಪಡೆ
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ