ಮೇಕೆದಾಟು: ಸಿದ್ದರಾಮಯ್ಯ ಸುಳ್ಳುಗಳ ಸರಮಾಲೆ ಸಿಡಿಸಿದ್ದಾರೆ: ಸಿ.ಟಿ. ರವಿ

40 ವರ್ಷ ಕಾಂಗ್ರೆಸ್‌ ಯಾಕೆ ಯೋಜನೆ ಮಾಡಿಲ್ಲ

Team Udayavani, Jan 3, 2022, 9:30 PM IST

ಮೇಕೆದಾಟು: ಸಿದ್ದರಾಮಯ್ಯ ಸುಳ್ಳುಗಳ ಸರಮಾಲೆ ಸಿಡಿಸಿದ್ದಾರೆ: ಸಿ.ಟಿ. ರವಿ

ಬೆಂಗಳೂರು: ಮೇಕೆದಾಟು ಯೋಜನೆಗೆ ಸಿ.ಟಿ. ರವಿ ವಿರೋಧ ವ್ಯಕ್ತಪಡಿಸುತ್ತಿದ್ದಾರೆ ಎಂದು ಸಾರ್ವಜನಿಕ ಸಭೆಯಲ್ಲಿ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಸುಳ್ಳುಗಳ ಸರಮಾಲೆ ಸಿಡಿಸಿದ್ದಾರೆ.

ನಾನು ಯಾವಾಗ ವಿರೋಧ ಮಾಡಿದ್ದೇನೆ ಎಂದು ಸಿದ್ದರಾಮಯ್ಯನವರು ಹೇಳಲಿ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಆಗ್ರಹಿಸಿದ್ದಾರೆ ಸುದೀರ್ಘ‌ ಟ್ವೀಟ್‌ ಮಾಡಿರುವ ಅವರು, ವಿರೋಧ ಪಕ್ಷದ ನಾಯಕರು, ಚಾಮರಾಜನಗರದಲ್ಲಿ ಭಾನುವಾರ ಮಾತನಾಡುವ ವೇಳೆ ಸುಳ್ಳುಗಳ ಸರಮಾಲೆಯನ್ನೇ ಬಿಚ್ಚಿಟ್ಟಿದ್ದಾರೆ.

ಸಿದ್ದರಾಮಯ್ಯನವರೇ, ನೀವು ಮಾತನಾಡುವಾಗ 1968 ರಲ್ಲೇ ಕಾಂಗ್ರೆಸ್‌ ಸರ್ಕಾರ ಮೇಕೆದಾಟು ಯೋಜನೆ ಜಾರಿಗೆ ಪ್ರಯತ್ನ ಮಾಡಿತ್ತು ಎಂದು ಹೇಳಿದ್ದೀರಿ. ಹಾಗಾದರೆ ಆಗ ಕೇಂದ್ರ ಮತ್ತು ರಾಜ್ಯದಲ್ಲಿ ಯಾವ ಸರ್ಕಾರ ಆಡಳಿತ ನಡೆಸುತ್ತಿತ್ತು? ಆ ನಂತರವು 40 ವರ್ಷಗಳ ಕಾಲ ರಾಜ್ಯವಾಳಿದ ನಿಮ್ಮ ಕಾಂಗ್ರೆಸ್‌ ಪಕ್ಷ ಯಾಕೆ ಮೇಕೆದಾಟು ಯೋಜನೆ ಜಾರಿಗೊಳಿಸಲಿಲ್ಲ? ಮೇಕೆದಾಟು ಯೋಜನೆ ಜಾರಿ ವಿಚಾರದಲ್ಲಿ ಕರ್ನಾಟಕದಲ್ಲಿ ರಾಜ್ಯ ಸರ್ಕಾರದ ತೀರ್ಮಾನಕ್ಕೆ ಬದ್ಧ ಎಂದು ನಾನು ಹೇಳಿದ್ದೇನೆ.

ನಿಮ್ಮದೇ ಪಕ್ಷದ ಸರ್ಕಾರ ಕೇಂದ್ರ ರಾಜ್ಯದಲ್ಲಿ ಅಧಿಕಾರದಲ್ಲಿದ್ದಾಗ ಯಾಕೆ ಅನುಷ್ಠಾನ ಮಾಡಲಿಲ್ಲ? ಇದಕ್ಕೆ ನೀವು ಉತ್ತರ ಕೊಡಬೇಕಲ್ಲವೇ? ಜನರಿಗೆ ತಪ್ಪು ಮಾಹಿತಿ ನೀಡಿ ಅವರ ದಿಕ್ಕು ತಪ್ಪಿಸುವುದೇ ನಿಮ್ಮ ಕಾಯಕವಾಗಿದೆ. ಈಗಾಗಲೇ ಕೇಂದ್ರದ ಬಿಜೆಪಿ ಸರ್ಕಾರ ಮೇಕೆದಾಟು ಯೋಜನೆಗೆ ತಾತ್ವಿಕ ಅನುಮೋದನೆ ಕೊಟ್ಟಿರುವುದನ್ನು ಯಾಕೆ ಜನರ ಎದುರು ಹೇಳದೇ ಮರೆಮಾಚಿದಿರಿ? ಇದೇ ಅಲ್ಲವೇ ನಿಮ್ಮ ಸುಳ್ಳಿನ ರಾಜಕೀಯದ ಮೇಲಾಟ? ಸುಳ್ಳು ನಮ್ಮಲ್ಲಿಲ್ಲವಯ್ಯ, ಸುಳ್ಳೇ ನಮ್ಮನೆ ದೇವರು ಎನ್ನುವ ರಾಜಕೀಯ ಕುಟಿಲ ನೀತಿ ನಿಮ್ಮದು, ನಿಮ್ಮ ಪಕ್ಷದ್ದು ಎಂಬುದು ಸತ್ಯವಿದಿತ. ನೀವು ಅಧಿಕಾರಕ್ಕೆ ಬರುವ ದೃಷ್ಟಿಯಿಂದ ಜನರಿಗೆ ಸುಳ್ಳುಗಳ ಸರಮಾಲೆ ಪೋಣಿಸುತ್ತಾ ಜನರನ್ನು ದಿಕ್ಕು ತಪ್ಪಿಸಲು ಪಾದಯಾತ್ರೆ ಮಾಡಲು ಹೊರಟಿದ್ದೀರಿ.

ಇದನ್ನೂ ಓದಿ:ಅವರಿಬ್ಬರು ಅವಳಿ-ಜವಳಿ; ಆದರೆ ಹುಟ್ಟಿದ್ದು ಬೇರೆ- ಬೇರೆ ವರ್ಷದಲ್ಲಿ!

ತಮಿಳುನಾಡಿನಲ್ಲಿ, ಕರ್ನಾಟಕದಲ್ಲಿ ಹಾಗೂ ಕೇಂದ್ರದಲ್ಲಿ ಕಾಂಗ್ರೆಸ್ಸೇ ಅಧಿಕಾರದಲ್ಲಿದ್ದಾಗಲೂ ಯೋಜನೆಯ ಬಗ್ಗೆ ತುಟಿಬಿಚ್ಚದವರು ನಿಮ್ಮ ನಾಯಕರು ಬಗ್ಗೆ ಸ್ವಲ್ಪ ಜನರಿಗೂ ತಿಳಿಸಿ ಸಿದ್ದರಾಮಯ್ಯನವರೇ? ನಿಮ್ಮ ಪಕ್ಷದ ಹಿರಿಯ ನಾಯಕ ಪಿ. ಚಿದಂಬರಂ ಈ ನಿರ್ಧಿಷ್ಟ ಯೋಜನೆಗೆ ಏಕೆ ವಿರೋಧ ಮಾಡುತ್ತಿದ್ದಾರೆ? ನಿಮ್ಮ ಪಕ್ಷ ಬೆಂಬಲದ ಡಿಎಂಕೆ ಸರ್ಕಾರ ಆಡಳಿತ ನಡೆಸುತ್ತಿದೆ. ಮೇಕೆದಾಟು ಯೋಜನೆಗೆ ಅಡ್ಡಿಯಿಲ್ಲ ಎಂದು ಅವರಿಂದ ಒಂದು ಹೇಳಿಕೆ ಕೊಡಿಸಿ. ಆಗ ಕಾಂಗ್ರೆಸ್‌ ಬಂಡವಾಳ ಗೊತ್ತಾಗುತ್ತದೆ ಎಂದು ಹೇಳಿದ್ದಾರೆ.

ಒಂದು ಯೋಜನೆಗೆ ಇರುವ ಅಡೆತಡೆಗಳನ್ನು ನಿವಾರಿಸಲು ಮತ್ತು ಯೋಜನೆ ಪೂರ್ಣಗೊಳ್ಳಲು 54 ವರ್ಷ ಬೇಕೆ? ಸುಳ್ಳಿಗೂ ಒಂದು ಮಿತಿ ಇರಬೇಕು. ಇದೆಲ್ಲಾ ಚುನಾವಣೆ ಗಿಮಿಕ್‌ ಎಂದು ಜನರಿಗೂ ಗೊತ್ತು. ನಿಮ್ಮ ಕಪಟ ರಾಜಕೀಯ ನಾಟಕ ಜನರಿಗೆ ಅರ್ಥವಾಗುತ್ತಿದೆ. ಸುಳ್ಳು ಹೇಳಿ ಜನರನ್ನು ದಾರಿ ತಪ್ಪಿಸುವ ಕೆಲಸ ಮಾಡದೇ ಸತ್ಯ ಹೇಳಿ. ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಸಕ್ರಿಯ ರಾಜಕೀಯಕ್ಕೆ ಬಂದು ಇನ್ನೂ ಒಂದು ವರ್ಷವಾಗಿಲ್ಲ. ನಾನೂ ಸಹ ಮೇಕೆದಾಟು ಯೋಜನೆ ಸೇರಿದಂತೆ ಯಾವುದೇ ಕುಡಿಯುವ ನೀರಿನ ಯೋಜನೆ ಅನುಷ್ಠಾನದ ವಿಚಾರವಾಗಿ ರಾಜಕೀಯ ಮಾಡಬಾರದು ಎಂದು ಕರ್ನಾಟಕದಲ್ಲಿ ಮತ್ತು ತಮಿಳುನಾಡಿನಲ್ಲೂ ಹೇಳಿದ್ದೇನೆ. ನಾವು ನೀರಿನ ವಿಷಯದಲ್ಲಿ ನಿಮ್ಮ ರೀತಿ ರಾಜಕೀಯ ಮಾಡುತ್ತಿಲ್ಲ. ಈಗ ನೀವು ಪಾದಯಾತ್ರೆ ಮಾಡುವ ಮೂಲಕ ಜನರನ್ನು ದಿಕ್ಕುತಪ್ಪಿಸಿ ಕನ್ನಡಿಗರಿಗೂ, ತಮಿಳುನಾಡಿನ ಜನರ ಮನಸ್ಸಿನಲ್ಲಿ ವೈಷಮ್ಯಕ್ಕೆ ಕಾರಣವಾಗುವ ಕಾರ್ಯಕ್ಕೆ ಮುಂದಾಗಿರುವು ನಾಚಿಕೆಗೇಡಿನ ವಿಷಯ ಎಂದು ಸಿ.ಟಿ. ರವಿ ಹೇಳಿದ್ದಾರೆ.

ಟಾಪ್ ನ್ಯೂಸ್

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Sensible voters know who to win: Yatnal

Vijayapura; ಯಾರನ್ನು ಗೆಲ್ಲಿಸಬೇಕೆಂದು ಪ್ರಜ್ಞಾವಂತ ಮತದಾರರಿಗೆ ಗೊತ್ತಿದೆ: ಯತ್ನಾಳ್

1-ckm-rsrt-close

Tourists ಗಮನಕ್ಕೆ: ಈ 2 ದಿನಗಳ ಕಾಲ ಚಿಕ್ಕಮಗಳೂರಿನ‌ ಎಲ್ಲ ಹೋಂ ಸ್ಟೇ, ರೆಸಾರ್ಟ್‌ ಬಂದ್!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ckm-rsrt-close

Tourists ಗಮನಕ್ಕೆ: ಈ 2 ದಿನಗಳ ಕಾಲ ಚಿಕ್ಕಮಗಳೂರಿನ‌ ಎಲ್ಲ ಹೋಂ ಸ್ಟೇ, ರೆಸಾರ್ಟ್‌ ಬಂದ್!

ಯತ್ನಾಳ್

Loksabha Election; ಈಶ್ವರಪ್ಪ ಬಂಡಾಯವನ್ನು ರಾಜಾಹುಲಿ ಶಮನ ಮಾಡಲಿ: ಯತ್ನಾಳ್

ಶಿವಮೊಗ್ಗ: ಅಪ್ಪ ಮಕ್ಕಳ ಶಿಕಾರಿ ನಾನು ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

ಶಿವಮೊಗ್ಗ: ಅಪ್ಪ ಮಕ್ಕಳ ಶಿಕಾರಿ ನಾನು ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

MUST WATCH

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

ಹೊಸ ಸೇರ್ಪಡೆ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Loksabha

Udupi Chikmagalur Lok Sabha Election: ಮಹಿಳಾ ಮತದಾರರೇ ಅಧಿಕ

ಮೂಡಿಗೆರೆ: ನೆಮ್ಮದಿ ಕಳೆದುಕೊಂಡ ಜನರಿಂದ ತಕ್ಕ ಉತ್ತರ- ಕೆ.ಜಯಪ್ರಕಾಶ್‌ ಹೆಗ್ಡೆ

ಮೂಡಿಗೆರೆ: ನೆಮ್ಮದಿ ಕಳೆದುಕೊಂಡ ಜನರಿಂದ ತಕ್ಕ ಉತ್ತರ- ಕೆ.ಜಯಪ್ರಕಾಶ್‌ ಹೆಗ್ಡೆ

3-

ಕಾರ್ಯಕರ್ತರ ಸಭೆ; ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆಗೆ ಬೆಂಬಲ ನೀಡಿ ಗೆಲ್ಲಿಸುವಂತೆ ಮನವಿ

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.