ಗೋವಾದಲ್ಲಿ ಇಂದು ಸಿದ್ದರಾಮಯ್ಯ ಪ್ರಚಾರ
Team Udayavani, Feb 8, 2022, 8:15 AM IST
ಬೆಂಗಳೂರು:ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ್ ಅವರು ಮಂಗಳವಾರ ಗೋವಾ ವಿಧಾನಸಭೆ ಚುನಾವಣೆ ಪ್ರಚಾರ ಕೈಗೊಳ್ಳಲಿದ್ದಾರೆ.
ಗೋವಾ ಉಸ್ತುವಾರಿ ದಿನೇಶ್ ಗುಂಡೂರಾವ್ ಹಾಗೂ ಮಾಜಿ ಸಚಿವ ಆರ್.ವಿ.ದೇಶಪಾಂಡೆ ಸಹ ಸಿದ್ದರಾಮಯ್ಯ ಅವರೊಂದಿಗೆ ಭಾಗವಹಿಸಲಿದ್ದಾರೆ.
ಸಿದ್ದರಾಮಯ್ಯ ಅವರು ಗೋವಾ ಪ್ರದೇಶ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ನಂತರ ಪ್ರಚಾರದಲ್ಲಿ ಪಾಲ್ಗೊಳ್ಳಲಿದ್ದಾರೆ. ಮಾಜಿ ಸಚಿವ ಆರ್.ವಿ.ದೇಶಪಾಂಡೆ ಅವರಿಗೂ ಐದು ಕ್ಷೇತ್ರಗಳ ಹೊಣೆಗಾರಿಕೆ ನೀಡಲಾಗಿದೆ.