ಪ್ರತ್ಯೇಕ ರಾಜ್ಯ ವಿಚಾರ: ಸಚಿವ ಕತ್ತಿ ಹೇಳಿಕೆಗೆ ಕಿಡಿಕಾರಿದ ಸಿದ್ದರಾಮಯ್ಯ
Team Udayavani, Jun 23, 2022, 4:30 PM IST
ಬೆಂಗಳೂರು: 2024ರಲ್ಲಿ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾಗುತ್ತದೆ ಎಂಬ ಸಚಿವ ಉಮೇಶ್ ಕತ್ತಿ ಹೇಳಿಕೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ರಾಜ್ಯವನ್ನು ಇಬ್ಭಾಗ ಮಾಡುವ ಚರ್ಚೆ ಪ್ರಧಾನಿ ನರೇಂದ್ರ ಮೋದಿ ಅವರ ಮಟ್ಟದಲ್ಲಿಯೇ ನಡೆಯುತ್ತಿದೆ ಎಂಬ ಆಘಾತಕಾರಿ ಸಂಗತಿಯನ್ನು ಸಚಿವ ಉಮೇಶ್ ಕತ್ತಿ ಬಹಿರಂಗ ಪಡಿಸಿದ್ದಾರೆ. ಇದರ ಸತ್ಯಾಸತ್ಯತೆಗಳನ್ನು ಪ್ರಧಾನಿ ಮೋದಿ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸ್ಪಷ್ಟಪಡಿಸಬೇಕು ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
ಸಚಿವರಾದ ಉಮೇಶ್ ಕತ್ತಿಯವರು ಜವಾಬ್ದಾರಿ ಸ್ಥಾನದಲ್ಲಿರುವವರು. ಪಕ್ಷ ಇಲ್ಲವೆ ಸರ್ಕಾರದ ಮಟ್ಟದಲ್ಲಿ ಅಂತಹ ಚರ್ಚೆ ನಡೆಯದೆ ರಾಜ್ಯ ಒಡೆಯುವ ಯೋಜನೆಯ ಬಗ್ಗೆ ಮಾತನಾಡಿರಲಾರರು. ಅವರು ಹೇಳಿರುವುದು ಸುಳ್ಳಾಗಿದ್ದರೆ ಇಂತಹ ಬೇಜವಾಬ್ದಾರಿ ಹೇಳಿಕೆಗಾಗಿ ಅವರನ್ನು ಸಂಪುಟದಿಂದ ಕಿತ್ತು ಹಾಕಬೇಕು ಎಂದಿದ್ದಾರೆ.
ಇದನ್ನೂ ಓದಿ:ಮಧ್ಯಪ್ರದೇಶ; ಬುಲ್ಡೋಜರ್ ನಲ್ಲಿ ವಿವಾಹ ಸ್ಥಳಕ್ಕೆ ತೆರಳಿದ ವರ…ವಿಡಿಯೋ, ಫೋಟೋ ವೈರಲ್
ಸಾವಿರಾರು ಹಿರಿಯ ಕನ್ನಡಿಗರ ಅವಿರತ ಹೋರಾಟದ ಫಲವಾಗಿ ಸ್ಥಾಪನೆಗೊಂಡ ಕರ್ನಾಟಕವನ್ನು ಒಡೆಯುವ ಯೋಚನೆ ಮಾಡುವುದೇ ನಾಡು- ನುಡಿಗೆ ಬಗೆವ ದ್ರೋಹವಾಗುತ್ತದೆ. ಸಚಿವ ಉಮೇಶ್ ಕತ್ತಿ ಅವರು ಪ್ರತ್ಯೇಕ ರಾಜ್ಯ ಸ್ಥಾಪನೆಯ ಕೂಗು ಹಾಕುತ್ತಿರುವುದು ಇದೇ ಮೊದಲಸಲವೇನಲ್ಲ. ಭಾಷಾ ಸೂಕ್ಷ್ಮ ಪ್ರದೇಶವಾದ ಬೆಳಗಾವಿಯಲ್ಲಿಯೇ ಇಂತಹ ಪ್ರಚೋದನಕಾರಿ ಹೇಳಿಕೆಗಳ ಪರಿಣಾಮದ ಹೊಣೆಯನ್ನು ರಾಜ್ಯ ಬಿಜೆಪಿ ಸರ್ಕಾರವೇ ಹೊರಬೇಕಾಗುತ್ತದೆ ಎಂದು ಟ್ವೀಟ್ ಮೂಲಕ ಸಿದ್ದರಾಮಯ್ಯ ಎಚ್ಚರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು
ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ
ಸಂಸದ ಡಿ.ಕೆ.ಸುರೇಶ್ ಆಸ್ತಿ ಮೌಲ್ಯ 593 ಕೋಟಿ ರೂ.!
Politics: ಸುಮಲತಾ – ನಾವು ಶಾಶ್ವತ ಶತ್ರುಗಳಲ್ಲ: ಕುಮಾರಸ್ವಾಮಿ
Bangaluru cafe ಸ್ಫೋಟದ ಸಂಚುಕೋರ ಎನ್ಐಎ ಬಲೆಗೆ: ಯಾರಿದು ಷರೀಫ್?
MUST WATCH
ಹೊಸ ಸೇರ್ಪಡೆ
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು
Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್
Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೇಟಿಯಾದ ಜಗದೀಶ್ ಶೆಟ್ಟರ್
ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ
Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ